AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!

Harmanpreet Kaur: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯ ವೇಳೆ ಅನುಚಿತ ವರ್ತನೆ ತೋರಿದ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್​ಗೆ ಅಮಾನತಿನ ಶಿಕ್ಷೆಯ ಜೊತೆ ದಂಡದ ಬರೆ ಎಳೆದ ಐಸಿಸಿ.

Harmanpreet Kaur: ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ, ದಂಡದ ಬರೆ..!
Harmanpreet Kaur
TV9 Web
| Edited By: |

Updated on:Jul 25, 2023 | 9:27 PM

Share

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಅವರನ್ನು ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಐಸಿಸಿ ಅಮಾನತುಗೊಳಿಸಿದೆ. ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕಿ ಅನುಚಿತ ವರ್ತನೆ ತೋರಿದ್ದರು. ಈ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಔಟ್ ನೀಡಿದ ಅಂಪೈರ್ ತೀರ್ಪಿನಿಂದ ಆಕ್ರೋಶಗೊಂಡ ಹರ್ಮನ್​ಪ್ರೀತ್ ಬ್ಯಾಟ್​ನಿಂದ ವಿಕೆಟ್​ಗೆ ಹೊಡೆದಿದ್ದರು. ಇನ್ನು ಅಂತಿಮ ಏಕದಿನ ಪಂದ್ಯವು ಟೈನಲ್ಲಿ ಅಂತ್ಯಗೊಂಡಿದ್ದರಿಂದ ಸರಣಿಯು 1-1 ಅಂತರದಿಂದ ಸಮಬಲಗೊಂಡಿತು. ಹೀಗಾಗಿ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಯಿತು.

ಆದರೆ ಆ ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ಬಾಂಗ್ಲಾದೇಶ್ ತಂಡದೊಂದಿಗೆ ಫೋಟೋ ತೆಗೆಸಿಕೊಳ್ಳುವಾಗ ಅಂಪೈರ್‌ಗಳನ್ನೂ ಕರೆಯಬೇಕು ಎಂದು ಆತಿಥೇಯ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮೂದಲಿಸಿದರು. ಈ ಎರಡು ದುರ್ವತನೆಗಳಿಗಾಗಿ ಇದೀಗ ಐಸಿಸಿ ಟೀಮ್ ಇಂಡಿಯಾ ನಾಯಕಿಗೆ ಅಮಾನುತಿನ ಶಿಕ್ಷೆ ಜೊತೆಗೆ ದಂಡ ವಿಧಿಸಿದೆ.

ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ರ ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯವನ್ನು ತೋರಿಸುವುದನ್ನು ಒಳಗೊಂಡಂತೆ ಹರ್ಮನ್‌ಪ್ರೀತ್ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ ಐಸಿಸಿ ಇದೀಗ 2 ಪಂದ್ಯಗಳ ನಿಷೇಧ ಹೇರಿದ್ದಾರೆ. ಅಲ್ಲದೆ ಲೆವೆಲ್-2 ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಮನ್‌ಪ್ರೀತ್‌ಗೆ ಶೇ. 50 ರಷ್ಟು ದಂಡ ವಿಧಿಸಲಾಗಿದೆ. ಇದಲ್ಲದೇ ಮೂರು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಇನ್ನು ಪಂದ್ಯದ ಬಳಿಕ ಬಾಂಗ್ಲಾದೇಶ್ ತಂಡವನ್ನು ಲೇವಡಿ ಮಾಡಿದ ಹರ್ಮನ್​ಪ್ರೀತ್​ನಿಂದ ನಷ್ಟ ಉಂಟಾಗಿದೆ ಎಂದು ಪಂದ್ಯದ ಆಯೋಜಕರು ಆರೋಪಿಸಿದ್ದಾರೆ. ಇದಕ್ಕಾಗಿ ಹರ್ಮನ್‌ಪ್ರೀತ್‌ಗೆ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಲಾಗಿದೆ. ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಡೆದ ಘಟನೆಯನ್ನು ಸಾರ್ವಜನಿಕವಾಗಿ ಟೀಕಿಸುವುದನ್ನು ಒಳಗೊಂಡಿರುವ ಲೆವೆಲ್-1 ರ ತಪ್ಪಿಗಾಗಿ ಈ ದಂಡವನ್ನು ವಿಧಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ಇದನ್ನೂ ಓದಿ: 4,4,4,4,4,4,4: ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಹರ್ಮನ್​ಪ್ರೀತ್ ಕೌರ್

ಐಸಿಸಿ ಹೇಳಿಕೆಯ ಪ್ರಕಾರ, ಹರ್ಮನ್‌ಪ್ರೀತ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಹೀಗಾಗಿ ಈ ವಿಷಯದಲ್ಲಿ ಯಾವುದೇ ಅಧಿಕೃತ ವಿಚಾರಣೆಯ ಅಗತ್ಯವಿಲ್ಲ. ಹಾಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷೆ ವಿಧಿಸಲಾಯಿತು.

Published On - 9:09 pm, Tue, 25 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ