AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 World Cup 2021: ಟಿ-20 ವಿಶ್ವಕಪ್​ಗೆ 15 ಮಂದಿ ಸದಸ್ಯರ ಟೀಮ್ ಇಂಡಿಯಾ ಈ ದಿನದಂದು ಪ್ರಕಟ

ಈಗಾಗಲೇ ಕೆಲ ತಂಡಗಳು ಟಿ-20 ವಿಶ್ವಕಪ್​ಗೆ 15 ಸದಸ್ಯರ ತಂಡವನ್ನು ಪ್ರಕಟ ಮಾಡಿದೆ. ಆದರೆ, ಟೀಮ್ ಇಂಡಿಯಾ ಇದರ ಬಗ್ಗೆ ಯಾವುದೇ ಸುಳಿವು ನೀಡಿರಲಿಲ್ಲ. ಆದರೆ, ಸದ್ಯ ಭಾರತ ತಂಡ ಯಾವಾಗ ಪ್ರಕಟ ಆಗುತ್ತೆ ಎಂಬ ಮಾಹಿತಿ ಹೊರಬಿದ್ದಿದೆ.

ICC T20 World Cup 2021: ಟಿ-20 ವಿಶ್ವಕಪ್​ಗೆ 15 ಮಂದಿ ಸದಸ್ಯರ ಟೀಮ್ ಇಂಡಿಯಾ ಈ ದಿನದಂದು ಪ್ರಕಟ
ಕೆಲ ಮೂಲಗಳ ಪ್ರಕಾರ 14 ಆಟಗಾರರ ಆಯ್ಕೆ ಖಚಿತವಾಗಿದ್ದು, ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾಆಯ್ಕೆಯಾಗಲಿದ್ದಾರೆ. ಇನ್ನು ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಸ್ಥಾನ ಪಡೆಯಲಿದ್ದಾರೆ. ಅದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ ಸೂರ್ಯಕುಮಾರ್ ಯಾದವ್ ಸ್ಥಾನ ಖಚಿತ. ಜೊತೆಗೆ ಶೇಯಸ್ ಅಯ್ಯರ್ ಸಹ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ.
TV9 Web
| Updated By: Vinay Bhat|

Updated on: Sep 05, 2021 | 1:19 PM

Share

ಇಡೀ ಕ್ರಿಕೆಟ್ ಜಗತ್ತೇ ಕಾತುರದಿಂದ ಕಾದುಕುಳಿತಿರುವ ಐಸಿಸಿ ಪುರುಷರ ಟಿ-20 ವಿಶ್ವಕಪ್ (ICC T20 World Cup) ಟೂರ್ನಿ ಹತ್ತಿರವಾಗುತ್ತಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ICC) ಪ್ರಕಟ ಮಾಡಿದ್ದು, ಅಕ್ಟೋಬರ್‌ 17ಕ್ಕೆ ಚಾಲನೆ ಸಿಗಲಿದೆ. ಯುಎಇ ಹಾಗೂ ಒಮನ್‌ನಲ್ಲಿ ಸಂಪೂರ್ಣ ಟೂರ್ನಿ ನಡೆಯಲಿದ್ದು, ಅಕ್ಟೋಬರ್‌ 24 ರಂದು ಪಾಕಿಸ್ತಾನ ವಿರುದ್ಧ ಕಾದಾಟ ನಡೆಸುವ ಮೂಲಕ ಭಾರತ (Ind vs Pak) ತಂಡ ಚುಟುಕು ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದೆ. ಟಿ-20 ವಿಶ್ವಕಪ್​ಗೆ ತಂಡವನ್ನು ಪ್ರಕಟ ಮಾಡಲು ಸೆಪ್ಟೆಂಬರ್ 10 ಕೊನೇಯ ದಿನವಾಗಿದೆ.

ಈಗಾಗಲೇ ಆಸ್ಟ್ರೇಲಿಯಾ, ನ್ಯೂಜಿಲೆಂಡ್​ ನಂತಹ ಪ್ರಮುಖ ತಂಡಗಳು ಟಿ-20 ವಿಶ್ವಕಪ್​ಗೆ 15 ಸದಸ್ಯರ ತಂಡವನ್ನು ಪ್ರಕಟ ಮಾಡಿದೆ. ಆದರೆ, ಟೀಮ್ ಇಂಡಿಯಾ ಇದರ ಬಗ್ಗೆ ಯಾವುದೇ ಸುಳಿವು ನೀಡಿರಲಿಲ್ಲ. ಆದರೆ, ಸದ್ಯ ಭಾರತ ತಂಡ ಯಾವಾಗ ಪ್ರಕಟ ಆಗುತ್ತೆ ಎಂಬ ಮಾಹಿತಿ ಹೊರಬಿದ್ದಿದೆ.

ಸ್ಪೋರ್ಟ್ಸ್​ಕೀಡಾ ಮಾಡಿರುವ ವರದಿಯ ಪ್ರಕಾರ, ಟಿ-20 ವಿಶ್ವಕಪ್ ಟೂರ್ನಿಗೆ ಭಾರತದ 15 ಮಂದಿ ಸದಸ್ಯರನ್ನು ಇದೇ ಸೆಪ್ಟೆಂಬರ್ 6 ಅಥವಾ 7 ರಂದು ಬಿಸಿಸಿಐ ಪ್ರಕಟ ಮಾಡಲಿದೆಯಂತೆ. ಸದ್ಯ ಭಾರತ ಹಾಗೂ ಇಂಗ್ಲೆಂಡ್ ನಡುವೆ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಸೋಮವಾರ ಈ ಟೆಸ್ಟ್ ಪಂದ್ಯ ಮುಕ್ತಾಯವಾದ ಬಳಿಕ ಅಥವಾ ಮಂಗಳವಾರ ಬಿಸಿಸಿಐ ಆಟಗಾರರ ಹೆಸರನ್ನು ಘೋಷಿಸಲಿದೆಯಂತೆ.

ಟೀಮ್ ಇಂಡಿಯಾದ 15 ಮಂದಿ ಸದಸ್ಯರ ಪಟ್ಟಿಯಲ್ಲಿ ಬಿಸಿಸಿಐ ಯಾರಿಗೆ ಮಣೆ ಹಾಕಲಿದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಶಿಖರ್ ಧವನ್ ಸ್ಥಾನ ಇನ್ನೂ ಅಂತಿಮ ಆಗಿಲ್ಲ ಎಂದು ಹೇಳಲಾಗುತ್ತಿದ್ದು, ಆಯ್ಕೆ ಸಮಿತಿಯ ಗಮನ ಸೆಳೆಯದ ಶ್ರೇಯಸ್ ಅಯ್ಯರ್ ಕೂಡ ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ. ಕ್ರುನಾಲ್ ಪಾಂಡ್ಯ ಅಥವಾ ಭುವನೇಶ್ವರ್ ಕುಮಾರ್ ಪೈಕಿ ಒಬ್ಬರಿಗೆ ಸ್ಥಾನ ನೀಡುವ ಅಂದಾಜಿದೆ.

ಇನ್ನುಳಿದಂತೆ ಸೂರ್ಯಕುಮಾರ್ ಸ್ಥಾನ ಬಹುತೇಕ ಖಚಿತವಾಗಿದೆ. ಧವನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ ಎಂದಾದರೆ, ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಬಹುದು. ಕೆ. ಎಲ್ ರಾಹುಲ್ 3ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ.

ಪ್ರಸಕ್ತ 2021ರ ಐಸಿಸಿ ಪುರುಷರ ಟಿ-20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯು ಎರಡು ಹಂತದಲ್ಲಿ ನಡೆಯಲಿದ್ದು, ಮೊದಲನೇ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆದರೆ, ಎರಡನೇ ಸುತ್ತಿನಲ್ಲಿ ಸೂಪರ್‌ 12ರ ಹಂತದ ಪಂದ್ಯಗಳು ಜರುಗಲಿವೆ. ಯುಎಇ ಹಾಗೂ ಒಮನ್‌ನಲ್ಲಿ ಅಕ್ಟೋಬರ್‌ 17ರಿಂದ ಆರಂಭಗೊಂಡು, ನವೆಂಬರ್‌ 14 ರಂದು ದುಬೈನಲ್ಲಿ ಫೈನಲ್‌ ಹಣಾಹಣಿಯ ಮೂಲಕ ಅಂತ್ಯವಾಗಲಿದೆ.

Virat Kohli: ರೋಹಿತ್ ಶರ್ಮಾ ಶತಕ ಹೊಡೆಯುತ್ತಿದ್ದಂತೆ ವಿರಾಟ್ ಕೊಹ್ಲಿಯ ರಿಯಾಕ್ಷನ್ ವಿಡಿಯೋ ವೈರಲ್

ಇತಿಹಾಸ ನಿರ್ಮಿಸಿದ ಕನ್ನಡಿಗ ಸುಹಾಸ್ ಯತಿರಾಜ್​ಗೆ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಅಭಿನಂದನೆ

(ICC T20 World Cup 2021 BCCI announce Team India 15-man squad for T20I WC on this date)

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ