AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ನೋಡಿ ಮಾಹಿತಿ

ICC T20 World Cup 2022: ಗ್ರೂಪ್ 2 ರಲ್ಲಿರುವ ಬಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ.

India vs South Africa: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ನೋಡಿ ಮಾಹಿತಿ
Team India T20 World Cup
TV9 Web
| Edited By: |

Updated on:Oct 28, 2022 | 10:35 AM

Share

ಕಾಂಗರೂಗಳ ನಾಡಿನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ (T20 World Cup 2022) ಭಾರತ ತಂಡ ಭರ್ಜರಿ ಶುಭಾರಂಭ ಮಾಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಮ್ ಇಂಡಿಯಾ (Team India) ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಪಾಕಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಪಡೆ 4 ವಿಕೆಟ್​ಗಳ ರೋಚಕ ಗೆಲುವು ಸಾಧಿಸಿತು. ಕೊನೆಯ ಎಸೆತದ ವರೆಗೂ ನಡೆದ ಈ ಕಾದಾಟದಲ್ಲಿ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಗೆಲುವು ತಂದಿಟ್ಟರು. ಗುರುವಾರ ನಡೆದ ದ್ವಿತೀಯ ಪಂದ್ಯದಲ್ಲೂ ನೆದರ್​ಲೆಂಡ್ಸ್ (India vs Netherlands) ವಿರುದ್ಧ 56 ರನ್​ಗಳ ಸುಲಭ ಜಯ ಕಂಡಿತು. ಇದೀಗ ಭಾರತ ತಂಡ ಮುಂದಿನ ಸವಾಲಿಗೆ ಸಜ್ಜಾಗಬೇಕಿದೆ. ಹಾಗಾದರೆ ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ ಎಂಬುದನ್ನು ನೋಡೋಣ.

ಗ್ರೂಪ್ 2 ರಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಈ ಪಂದ್ಯ ಅಕ್ಟೋಬರ್ 30 ಭಾನುವಾರದಂದು ಆಯೋಜಿಸಲಾಗಿದ್ದು ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30 ಕ್ಕೆ ಈ ಕದನ ಶುರುವಾಗಲಿದೆ. ಆಫ್ರಿಕಾ ಆಡಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಮತ್ತೊಂದರಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ +5.200 ರನ್​ರೇಟ್​ನೊಂದಿಗೆ 3 ಅಂಕ ಪಡೆದು ಎರಡನೇ ಸ್ಥಾನಲ್ಲಿದೆ. ಭಾರತ ಆಡಿದ ಎರಡೂ ಪಂದ್ಯದಲ್ಲಿ ಜಯಿಸಿ +1.425 ರನ್​ರೇಟ್​ ಹೊಂದಿ 4 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ.

ಭಾರತ-ನೆದರ್​ಲೆಂಡ್ಸ್ ಪಂದ್ಯ ಹೇಗಿತ್ತು?:

ಇದನ್ನೂ ಓದಿ
Image
Rohit Sharma: ನೆದರ್​ಲೆಂಡ್ಸ್ ವಿರುದ್ಧ ಗೆದ್ದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ
Image
T20 World Cup 2022 Point Table: ಟೀಮ್ ಇಂಡಿಯಾ, ಜಿಂಬಾಬ್ವೆಗೆ ಜಯ: ಹೊಸ ಪಾಯಿಂಟ್ ಟೇಬಲ್ ಹೀಗಿದೆ
Image
Rohit Sharma: ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ದಾಖಲೆ ಉಡೀಸ್ ಮಾಡಿದ ಹಿಟ್​ಮ್ಯಾನ್
Image
IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಮೂವರು ಸ್ಟಾರ್ ಆಟಗಾರರು ಔಟ್..?

ಗುರುವಾರ ನೆದರ್​ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಆಘಾತ ಅನುಭವಿಸಿತು. ಕೆಎಲ್ ರಾಹುಲ್ 9 ರನ್ ಗಳಿಸಿ ಔಟಾದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ರೋಹಿತ್ ಶರ್ಮಾ ತಂಡವನ್ನು ಮೇಲೆತ್ತಿ 73 ರನ್​ಗಳ ಕಾಣಿಕೆ ನೀಡಿದರು. ರೋಹಿತ್ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು. ಈ ಸಂದರ್ಭ ಕೊಹ್ಲಿ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ತಂಡಕ್ಕೆ ಆಧಾರವಾಗಿ ನಿಂತರು. ಎಚ್ಚರಿಕೆಯ ಆಟವಾಡಿದ ಈ ಜೋಡಿ ಕೊನೆಯ ವರೆಗೂ ಬ್ಯಾಟಿಂಗ್ ನಡೆಸಿತು.

ಕೊಹ್ಲಿ 44 ಎಸೆತಗಳಲ್ಲಿ 3 ಫೋರ್, 2 ಸಿಕ್ಸರ್ ಬಾರಿಸಿ ಅಜೇಯ 62 ರನ್ ಗಳಿಸಿದರೆ, ಸೂರ್ಯ ಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ 51 ರನ್ ಸಿಡಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ನೆದರ್ಲೆಂಡ್ಸ್ ಪರ ಕ್ಲಾಸನ್ ಮತ್ತು ಮೀಕೆರನ್ ತಲಾ ಒಂದು ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ನೆದರ್​ಲೆಂಡ್ಸ್ ಆರಂಭದಿಂದಲೇ ವಿಕೆಟ್​ ಕಳೆದುಕೊಳ್ಳುತ್ತಾ ಸಾಗಿತು. ಟಿಮ್​ ಪ್ರಿಂಗ್ಲೆ 20 ರನ್​ ಗಳಿಸಿದ್ದೇ ಅತ್ಯಧಿಕ ಮೊತ್ತವಾಗಿತ್ತು. ಮ್ಯಾಕ್ಸ್​ ಡೌಡ್​, ಬಸ್​ ಡೆ ಲಿಡೆ, ಶಾರೀಜ್ ಅಹ್ಮದ್​ ತಲಾ 16 ರನ್​ ಗಳಿಸಿದರೆ, ಕೊಲಿನ್​ ಅಕ್ಕರ್​ಮನ್​ 17 ರನ್​ ಮಾಡಿದರು. ಅಂತಿಮವಾಗಿ ನೆದರ್​ಲೆಂಡ್ಸ್ 20 ಓವರ್​ಗಳಲ್ಲಿ 9 ವಿಕೆಟ್​ಗೆ 123 ರನ್ ಗಳಿಸಿ ಸೋಲು ಕಂಡಿತು. ಭಾರತ ಪರ ಭುವನೇಶ್ವರ್​ ಕುಮಾರ್,​ ಅರ್ಷದೀಪ್​ ಸಿಂಗ್, ಅಕ್ಷರ್ ಪಟೇಲ್​, ರವಿಚಂದ್ರನ್​ ಅಶ್ವಿನ್​ ತಲಾ 2 ವಿಕೆಟ್​ ಹಾಗೂ ಮೊಹಮದ್​ ಶಮಿ 1 ವಿಕೆಟ್​ ಪಡೆದು ಮಿಂಚಿದರು.

Published On - 9:31 am, Fri, 28 October 22

Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ