AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: 2007 ಟಿ20 ವಿಶ್ವಕಪ್​ನಲ್ಲಿದ್ದ ಇಬ್ಬರು ಪ್ಲೇಯರ್ಸ್ 2022 ವಿಶ್ವಕಪ್​ಗೂ ಆಯ್ಕೆ: ಯಾರು ಗೊತ್ತೇ?

India Squad for T20 World Cup 2022: 2007ರ ಟಿ20 ವಿಶ್ವಕಪ್​ನ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ಆಟಗಾರರು ಈ ಬಾರಿಯ ಟಿ20 ವಿಶ್ವಕಪ್ ತಂಡಕ್ಕೂ ಆಯ್ಕೆಯಾಗಿದ್ದಾರೆ. ಅವರೇ ರೋಹಿತ್ ಶರ್ಮಾ ಹಾಗೂ ದಿನೇಶ್ ಕಾರ್ತಿಕ್.

T20 World Cup: 2007 ಟಿ20 ವಿಶ್ವಕಪ್​ನಲ್ಲಿದ್ದ ಇಬ್ಬರು ಪ್ಲೇಯರ್ಸ್ 2022 ವಿಶ್ವಕಪ್​ಗೂ ಆಯ್ಕೆ: ಯಾರು ಗೊತ್ತೇ?
Team India T20 World Cup
TV9 Web
| Updated By: Vinay Bhat|

Updated on:Sep 13, 2022 | 10:09 AM

Share

ಅಕ್ಟೋಬರ್​ನಲ್ಲಿ ಆರಂಭವಾಗಲಿರುವ ಎಂಟನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್​ಗೆ (T20 World Cup) ವೇದಿಕೆ ಸಜ್ಜಾಗಿದೆ. ಕಾಂಗರೂಗಳ ನಾಡಿನಲ್ಲಿ ಈ ಚುಟುಕು ಸಮರ ಏರ್ಪಡಿಸಲಾಗಿದ್ದು ಭಾರತ ತಂಡ (India Team) ಪ್ರಕಟವಾಗಿದೆ. 15 ಸದಸ್ಯರ ಟೀಮ್ ಇಂಡಿಯಾವನ್ನು ಬಿಸಿಸಿಐ ಹೆಸರಿಸಿದ್ದು ಕೆಲವೊಂದು ಅಚ್ಚರಿಯ ಆಯ್ಕೆಗಳು ಕೂಡ ನಡೆದಿವೆ. ರೋಹಿತ್ ಶರ್ಮಾ (Rohit Sharma) ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದರೆ, ಕೆಎಲ್ ರಾಹುಲ್ ಉಪ ನಾಯಕನ ಜವಬ್ದಾರಿಗೆ ನಿರ್ವಹಿಸಲಿದ್ದಾರೆ. ಭಾರತಕ್ಕೆ ದೊಡ್ಡ ತಲೆನೋವಾಗಿದ್ದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಇಂಜುರಿಯಿಂದ ಗುಣಮುಖರಾಗಿ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಆದರೆ, ರವೀಂದ್ರ ಜಡೇಜಾ ಗಾಯದ ಕಾರಣದಿಂದ ಸಂಪೂರ್ಣ ಟೂರ್ನಿಯಿಂದಲ ಹೊರಬಿದ್ದಿದ್ದಾರೆ.

ಟಿ20 ವಿಶ್ವಕಪ್ ಮೊದಲು ಆರಂಭವಾಗಿದ್ದು 2007 ರಲ್ಲಿ. ಮೊದಲ ಆವೃತ್ತಿಯಲ್ಲೇ ಭಾರತ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಡಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ವಿಶೇಷತೆ ಎಂದರೆ 2007ರ ಟಿ20 ವಿಶ್ವಕಪ್​ನ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ಆಟಗಾರರು ಈ ಬಾರಿಯ ಟಿ20 ವಿಶ್ವಕಪ್ ತಂಡಕ್ಕೂ ಆಯ್ಕೆಯಾಗಿದ್ದಾರೆ. ಅವರೇ ರೋಹಿತ್ ಶರ್ಮಾ ಹಾಗೂ ದಿನೇಶ್ ಕಾರ್ತಿಕ್.

ರೋಹಿತ್ ಹಾಗೂ ಕಾರ್ತಿಕ್ 15 ವರ್ಷಗಳ ಹಿಂದೆ ನಡೆದ ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿದಿದ್ದರು. ಇಲ್ಲಿ ಭಾರತ ತಂಡ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದು ಚೊಚ್ಚಲ ಸೀಸನ್​ನಲ್ಲೇ ಪ್ರಶಸ್ತಿಗೆ ಮುತ್ತಿಕ್ಕಿತ್ತು. ಆದರ, ಆ ಬಳಿಕ ನಡೆದ ಯಾವ ಟಿ20 ವಿಶ್ವಕಪ್​ನಲ್ಲೂ ಭಾರತ ಕಪ್ ಗೆದ್ದಿಲ್ಲ. ಇದೀಗ ಟೀಮ್ ಇಂಡಿಯಾಕ್ಕೆ ಮತ್ತೊಂದು ಅವಕಾಶ ಒದಗಿಬಂದಿದ್ದು, ಮುಖ್ಯವಾಗಿ ಹಿರಿಯ ಆಟಗಾರರಾದ ರೋಹಿತ್ಕಾರ್ತಿಕ್ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಇದನ್ನೂ ಓದಿ
Image
India T20 WC squad: ಟಿ20 ವಿಶ್ವಕಪ್ 2021 ರಲ್ಲಿ ಸ್ಥಾನ ಪಡೆದಿದ್ದ 6 ಆಟಗಾರರು ಈ ಬಾರಿ ಮಿಸ್: ಯಾರೆಲ್ಲ..?
Image
Dinesh Karthik: ಟಿ20 ವಿಶ್ವಕಪ್​ಗೆ ಆಯ್ಕೆಯಾದ ತಕ್ಷಣ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ
Image
ICC Award: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ ಆಟಗಾರ..!
Image
ರಿಜ್ವಾನ್ ಬದಲಿಗೆ ಸರ್ಫರಾಜ್​ಗೆ ಅವಕಾಶ; ಪಾಕ್ ತಂಡದ ಅರ್ಧದಷ್ಟು ಆಟಗಾರರಿಗೆ ಕೋಕ್..!

2007 ಟಿ20 ವಿಶ್ವಕಪ್​ನಲ್ಲಿ ಭಾರತ ಮೊದಲ ಪಂದ್ಯವನ್ನು ಸ್ಕಾಟ್ಲೆಂಡ್ ವಿರುದ್ಧ ಆಡಬೇಕಿತ್ತು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ ಕಾರಣ ರದ್ದುಗೊಳಿಸಲಾಯಿತು. ಈ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟರ್ ಆಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದರು. ಎರಡನೇ ಪಂದ್ಯ ಪಾಕಿಸ್ತಾನ ವಿರುದ್ಧ ಭಾರತ ಆಡಿ ಭರ್ಜರಿ ಗೆಲುವು ಸಾಧಿಸಿತ್ತು. ರಾಬಿನ್ ಉತ್ತಪ್ಪ ಅವರ ಅರ್ಧಶತಕದ ನೆರವಿನಿಂದ ಧೋನಿ ಪಡೆ 141 ರನ್ ಕಲೆಹಾಕಿತ್ತು. ಇದರಲ್ಲಿ ಕಾರ್ತಿಕ್ 9 ಎಸೆತಗಳಲ್ಲಿ 11 ರನ್ ಗಳಿಸಿದ್ದರೆ, ರೋಹಿತ್​ಗೆ ಆಡುವ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ.

2022 ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಕ್ಕಿದ್ದಕ್ಕೆ ಖುಷಿ ವ್ಯಕ್ತಪಡಿಸಿರುವ ದಿನೇಶ್ ಕಾರ್ತಿಕ್ ಟ್ವಿಟರ್​ನಲ್ಲಿ ‘ಕನಸುಗಳು ನನಸಾಗುತ್ತವೆ‘ ಎಂದು ಬರೆದು ಬ್ಲೂ ಹಾರ್ಟ್ ಎಮೋಜಿಯೊಂದಿಗೆ ಹಂಚಿಕೊಂಡಿದ್ದಾರೆ. ಇದು ದಿನೇಶ್ ಕಾರ್ತಿಕ್‌ಗೆ ಮಾತ್ರವಲ್ಲ ಅವರ ಆಟವನ್ನು ಮೆಚ್ಚಿಕೊಂಡ ಅಭಿಮಾನಿಗಳಿಗೂ ಖುಷಿ ನೀಡಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್​ಪ್ರೀತ್ ತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್​ದೀಪ್ ಸಿಂಗ್.

Published On - 10:09 am, Tue, 13 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್