AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ

Rohit Sharma Birthday: ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ರೋಹಿತ್​ ಶರ್ಮಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
ಸಾಧು ಶ್ರೀನಾಥ್​
|

Updated on:Apr 30, 2021 | 12:09 PM

Share

ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (International Cricket Council -ICC) ವಿಡಿಯೋ ಟ್ವೀಟ್​ ಮಾಡಿ, ರೋಹಿತ್​ ಶರ್ಮಾಗೆ ಜನ್ಮದಿನದ ಶುಭಾಶಯ ಕೋರಿದೆ. ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ಅವರನ್ನು ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

ಏಕದಿನ ಪಂದ್ಯಗಳಲ್ಲಿ (ODI) ಮೂರು ಡಬಲ್​ ಸೆಂಚುರಿ ಬಾರಿಸಿರುವ ವಿಶ್ವದ ಏಕೈಕ ಬ್ಯಾಟ್ಸ್​​ಮನ್ ಎಂಬ ಹೆಗ್ಗಳಿಕೆಯ ರೋಹಿತ್​ ಶರ್ಮಾಗೆ #HappyBirthdayRohitSharma #HappyBirthdayRohit #HitmanDay ಎಂದು ಸಂಬೋಧಿಸಿ, ಸಹ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಸ್ತುತ ನಡೆಯುತ್ತಿರುವ IPL 2021 ಟೂರ್ನಿಯಲ್ಲಿ ರೋಹಿತ್​ ಶರ್ಮಾ ಮುಂಬೈ ಇಂಡಿಯನ್ಸ್ (Mumbai Indians) ಸಾರಥ್ಯ ವಹಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಟ್ವಿಟ್ಟರ್​ನಲ್ಲಿ ವಿಡಿಯೋ ಹಾಕಿ ರೋಹಿತ್​ ಶರ್ಮಾಗೆ ಶುಭ ಕೋರಿದೆ.

ಇನ್ನು ಬಿಸಿಸಿಐ (Board of Control for Cricket in India-BCCI) ಸಹ ಹ್ಯಾಪಿ ಬರ್ತ್​​ಡೆ ಹೇಳಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೋಹಿತ್​ ಶರ್ಮಾ ದಾಖಲೆಗಳನ್ನು ಪಟ್ಟಿ ಮಾಡಿದೆ.

(ICC Wishes Rohit Sharma On His 34th Birthday Calls Him Master Of The Pull Shot)

ಇದನ್ನೂ ಓದಿ: Rohit Sharma IPL 2021 MI Team Player: 5 ಬಾರಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಮುಂಬೈಕರ್​ ರೋಹಿತ್ ಶರ್ಮಾ ಐಪಿಎಲ್​ ಇತಿಹಾಸ ಹೀಗಿದೆ!

Published On - 12:09 pm, Fri, 30 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ