AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2023: ರೋಚಕ ಜಯದೊಂದಿಗೆ ಸೆಮೀಸ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ

ICC Womens T20 World Cup 2023: 156 ರನ್​ಗಳ ಕಠಿಣ ಗುರಿ ಪಡೆದ ಐರ್ಲೆಂಡ್ ತಂಡವು 8.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್​ ಬಾರಿಸಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

T20 World Cup 2023: ರೋಚಕ ಜಯದೊಂದಿಗೆ ಸೆಮೀಸ್​ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ
Team India
ಝಾಹಿರ್ ಯೂಸುಫ್
|

Updated on: Feb 20, 2023 | 10:08 PM

Share

ICC Womens T20 World Cup 2023: ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ (India Women vs Ireland Women) ವಿರುದ್ಧ ಜಯ ಸಾಧಿಸಿದೆ. ಮಳೆಗೆ ಅಹುತಿಯಾದ ಈ ಪಂದ್ಯದ ಫಲಿತಾಂಶವನ್ನು ಡಕ್​ವರ್ಥ್ ಲೂಯಿಸ್ ನಿಯಮ ಪ್ರಕಾರ ನಿರ್ಧರಿಸಲಾಗಿದ್ದು, ಅದರಂತೆ ಟೀಮ್ ಇಂಡಿಯಾ 5 ರನ್​ಗಳ ರೋಚಕ ಜಯ ಸಾಧಿಸಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ  ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 62 ರನ್​ಗಳ ಜೊತೆಯಾಟವಾಡಿದ ಶಫಾಲಿ 24 ರನ್​ಗಳಿಸಿ ಔಟಾದರು. ಇದಾಗ್ಯೂ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಸ್ಮೃತಿ ಮಂಧಾನ ಐರ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಮಂಧಾನ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳು ಮೂಡಿಬಂದಿದ್ದವು. ಅಲ್ಲದೆ 56 ಎಸೆತಗಳಲ್ಲಿ 87 ರನ್​ ಬಾರಿಸಿ 19ನೇ ಓವರ್​ನಲ್ಲಿ ಸ್ಮೃತಿ ಮಂಧಾನ ಔಟಾದರು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾ ಮೊತ್ತವು 150 ರ ಗಡಿ ತಲುಪಿತ್ತು. ಅಂತಿಮವಾಗಿ ಭಾರತ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 155 ರನ್​ ಕಲೆಹಾಕಿತು.

156 ರನ್​ಗಳ ಕಠಿಣ ಗುರಿ ಪಡೆದ ಐರ್ಲೆಂಡ್ ತಂಡವು 8.2 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 54 ರನ್​ ಬಾರಿಸಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ನಿರಂತರ ಮಳೆಯಾಗಿದ್ದರಿಂದ ಪಂದ್ಯ ನಡೆಸುವುದು ಅಸಾಧ್ಯ ಎಂದು ಮ್ಯಾಚ್ ರೆಫರಿ ನಿರ್ಧರಿಸಿದರು. ಅಲ್ಲದೆ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಡಕ್​ ವರ್ಥ್ ಲೂಯಿಸ್ ನಿಯಮದ ಮೊರೆ ಹೋಗಲಾಯಿತು. ಈ ವೇಳೆ ಐರ್ಲೆಂಡ್ ಮೊತ್ತವು ಟೀಮ್ ಇಂಡಿಯಾಗಿಂತ 5 ರನ್​ ಹಿಂದಿತ್ತು. ಅಂದರೆ 8.2 ಓವರ್​ಗಳಲ್ಲಿ ಭಾರತ ತಂಡವು 59 ರನ್​ ಬಾರಿಸಿದ್ದರೆ, ಐರ್ಲೆಂಡ್ ತಂಡವು 54 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಅದರಂತೆ ಭಾರತ ತಂಡವು 5 ರನ್​ಗಳ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ಜೆಮಿಮಾ ರಾಡ್ರಿಗಸ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ರಿಚಾ ಘೋಷ್ (ವಿಕೆಟ್ ಕೀಪರ್) , ದೇವಿಕಾ ವೈದ್ಯ , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಶಿಖಾ ಪಾಂಡೆ , ರಾಜೇಶ್ವರಿ ಗಾಯಕ್ವಾಡ್ , ರೇಣುಕಾ ಠಾಕೂರ್ ಸಿಂಗ್.

ಐರ್ಲೆಂಡ್ ಪ್ಲೇಯಿಂಗ್ 11: ಆಮಿ ಹಂಟರ್ , ಗ್ಯಾಬಿ ಲೆವಿಸ್ , ಓರ್ಲಾ ಪ್ರೆಂಡರ್‌ಗಾಸ್ಟ್ , ಲಾರಾ ಡೆಲಾನಿ (ನಾಯಕಿ) , ಐಮಿಯರ್ ರಿಚರ್ಡ್ಸನ್ , ಲೂಯಿಸ್ ಲಿಟಲ್ , ಮೇರಿ ವಾಲ್ಡ್ರಾನ್ (ವಿಕೆಟ್ ಕೀಪರ್) , ಅರ್ಲೀನ್ ಕೆಲ್ಲಿ , ಲೇಹ್ ಪಾಲ್ , ಕಾರಾ ಮುರ್ರೆ , ಜಾರ್ಜಿನಾ ಡೆಂಪ್ಸೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ