AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತ ಭಾರತ; ಪ್ಲೇಯಿಂಗ್​ 11ನಲ್ಲಿ 2 ಬದಲಾವಣೆ

ICC Women's T20 World Cup 2026: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಭಾರತ vs ಬಾಂಗ್ಲಾದೇಶ ನಡುವಿನ ನಿರ್ಣಾಯಕ ಪಂದ್ಯ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಲು ಮಾಡು ಇಲ್ಲವೇ ಮಡಿ ಸವಾಲಾಗಿದೆ. ಭಾರತದ ಮಧ್ಯಮ ಕ್ರಮಾಂಕದ ಲಯಬದ್ಧತೆ ಮತ್ತು ಆಡುವ ಹನ್ನೊಂದರ ಬಳಗದಲ್ಲಿನ ಬದಲಾವಣೆಗಳು ಕುತೂಹಲ ಮೂಡಿಸಿವೆ. ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದು, ಇದು ಪಂದ್ಯದ ಫಲಿತಾಂಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಕಾದು ನೋಡಬೇಕು.

IND vs BAN: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತ ಭಾರತ; ಪ್ಲೇಯಿಂಗ್​ 11ನಲ್ಲಿ 2 ಬದಲಾವಣೆ
Harmanpreet Kaur
ಪೃಥ್ವಿಶಂಕರ
|

Updated on:Jun 25, 2026 | 6:51 PM

Share

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 (ICC Women’s T20 World Cup 2026) ರ 23 ನೇ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶವನ್ನು (India Women vs Bangladesh Women) ಎದುರಿಸಲಿದೆ. ಲೀಗ್ ಹಂತದಲ್ಲಿ ಇದು ಎರಡೂ ತಂಡಗಳ ನಾಲ್ಕನೇ ಮತ್ತು ನಿರ್ಣಾಯಕ ಪಂದ್ಯವಾಗಿದೆ. ಎರಡೂ ತಂಡಗಳು ಆಡಿರುವ 3 ಪಂದ್ಯಗಳಲ್ಲಿ ತಲಾ 2 ಪಂದ್ಯಗಳನ್ನು ಗೆದ್ದಿವೆ. ಉಳಿದಂತೆ ತಲಾ ಒಂದೊಂದು ಪಂದ್ಯವನ್ನು ಸೋತಿವೆ. ಆದ್ದರಿಂದ, ಸೆಮಿಫೈನಲ್‌ ಕನಸನ್ನು ಜೀವಂತವಾಗಿರಸಬೇಕೆಂದರೆ ಉಭಯ ತಂಡಗಳಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅದರಲ್ಲೂ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಇರಾದೆಯಲ್ಲಿರುವ ಭಾರತ ಮಹಿಳಾ ತಂಡ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆದ್ದರಿಂದ, ಈ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶದ ವಿರುದ್ಧ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಮಧ್ಯಮ ಕ್ರಮಾಂಕ ಲಯದಲ್ಲಿಲ್ಲ

ಅದರಲ್ಲೂ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಲಯ ಕಂಡುಕೊಳ್ಳದೆ ಇರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದರೂ, ಭಾರತ ತಂಡವು ತನ್ನ ಅತ್ಯುತ್ತಮ ಆಡುವ XI ಅನ್ನು ಇನ್ನೂ ಅಂತಿಮಗೊಳಿಸಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆ, ಶ್ರೇಯಾಂಕ ಪಾಟೀಲ್ ಅವರ ಗಾಯ ತಂಡವನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸಿದೆ. ಹೀಗಿರುವಾಗ ಬಾಂಗ್ಲಾದೇಶವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಏಕೆಂದರೆ ಬಾಂಗ್ಲಾದೇಶ ಕಳೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದೆ. ಇದರ ಜೊತೆಗೆ ಸೆಮಿಫೈನಲ್‌ ರೇಸ್​ನಲ್ಲೂ ಉಳಿದಿದೆ. ಹೀಗಾಗಿ ಈ ಪಂದ್ಯದಲ್ಲಾದರೂ ಟೀಂ ಇಂಡಿಯಾ ತನ್ನೆಲ್ಲ ನ್ಯೂನತೆಗಳನ್ನು ಸರಿಪಡಿಸಿಕೊಂಡು ಆಡಬೇಕಿದೆ.

ಟಾಸ್ ಗೆದ್ದ ಬಾಂಗ್ಲಾದೇಶ

ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಬಾಂಗ್ಲಾದೇಶ ತನ್ನ ಪ್ಲೇಯಿಂಗ್ 11ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ರಾಧಾ ಯಾದವ್ ಹಾಗೂ ರೇಣುಕಾ ಸಿಂಗ್ ಠಾಕೂರ್​ಗೆ ಮೊದಲ ಬಾರಿಗೆ ಆಡಲು ಅವಕಾಶ ನೀಡಲಾಗಿದೆ.

IND W vs SA W: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಸೋಲು

ಉಭಯ ತಂಡಗಳು

ಬಾಂಗ್ಲಾದೇಶ ತಂಡ:ಬಾಂಗ್ಲಾದೇಶ ತಂಡ: ಜುವೈರಿಯಾ ಫೆರ್ಡೌಸ್, ದಿಲಾರಾ ಅಖ್ತರ್, ಶರ್ಮಿನ್ ಅಖ್ತರ್, ನಿಗರ್ ಸುಲ್ತಾನಾ (ನಾಯಕಿ), ಸೋಭಾನಾ ಮೊಸ್ತರಿ, ಶೋರ್ನಾ ಅಖ್ತರ್, ರಿತು ಮೋನಿ, ನಹಿದಾ ಅಖ್ತರ್, ರಬೆಯಾ ಖಾನ್, ಮಾರುಫಾ ಅಖ್ತರ್ ಮತ್ತು ಸಂಜಿದಾ ಅಖ್ತರ್ ಮೇಘಲಾ..

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್ (ಪ್ರೇಮಾ ರಾವತ್ ಬದಲಿಗೆ), ಶ್ರೀ ಚರಣಿ, ನಂದಿನಿ ಶರ್ಮಾ ಮತ್ತು ರೇಣುಕಾ ಸಿಂಗ್ ಠಾಕೂರ್ (ಅರುಂಧತಿ ರೆಡ್ಡಿ ಬದಲಿಗೆ).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Thu, 25 June 26

Follow Us
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ