AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Women’s World Cup: ಸೋತ ದಕ್ಷಿಣ ಆಫ್ರಿಕಾ ಆಟಗಾರ್ತಿಯರನ್ನು ಬಿಟ್ಟುಕೊಡದ ಹರ್ಮನ್ ಪಡೆ: ಏನು ಮಾಡಿದ್ರು ನೋಡಿ

South Africa Women Players Crying: ಭಾರತ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಸೋತ ನಂತರ, ದಕ್ಷಿಣ ಆಫ್ರಿಕಾದ ಆಟಗಾರರು ಅಳುತ್ತಿದ್ದರು. ನಂತರ, ಭಾರತೀಯ ಆಟಗಾರರು ಎಲ್ಲರ ಹೃದಯಗಳನ್ನು ಗೆದ್ದ ಒಂದು ಕೆಲಸವನ್ನು ಮಾಡಿದರು. ಭಾರತೀಯ ಆಟಗಾರ್ತಿಯರು ಆಫ್ರಿಕನ್ ಆಟಗಾರ್ತಿಯರನ್ನು ಅಪ್ಪಿಕೊಂಡು ಸಾಂತ್ವನ ಹೇಳಿದರು.

ICC Women’s World Cup: ಸೋತ ದಕ್ಷಿಣ ಆಫ್ರಿಕಾ ಆಟಗಾರ್ತಿಯರನ್ನು ಬಿಟ್ಟುಕೊಡದ ಹರ್ಮನ್ ಪಡೆ: ಏನು ಮಾಡಿದ್ರು ನೋಡಿ
India Women Vs South Africa Women
ಮಾಲಾಶ್ರೀ ಅಂಚನ್​
| Edited By: |

Updated on:Nov 03, 2025 | 10:09 AM

Share

ಬೆಂಗಳೂರು (ನ. 03): ದಶಕಗಳ ಕಠಿಣ ಪರಿಶ್ರಮದ ನಂತರ, ಭಾರತೀಯ ಮಹಿಳಾ ಕ್ರಿಕೆಟ್ ತಂಡವು (Indian Women Cricket Team) ಎಲ್ಲರೂ ಕಾತರದಿಂದ ಕಾಯುತ್ತಿದ್ದದ್ದನ್ನು ಕೊನೆಗೂ ಸಾಧಿಸಿತು. ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಆಯಿತು. ನಾಯಕಿ ಹರ್ಮನ್‌ಪ್ರೀತ್ ಕೌರ್ ದೇಶವನ್ನು ತನ್ನ ಮೊದಲ ಐಸಿಸಿ ಟ್ರೋಫಿಗೆ ಕರೆದೊಯ್ದರು. ಟೀಮ್ ಇಂಡಿಯಾ ಟ್ರೋಫಿಯನ್ನು ಗೆದ್ದಿತು, ಆದರೆ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ಬರಿಗೈಯಲ್ಲಿ ಮರಳಿತು. ಈ ಸೋಲಿನ ನಂತರ ದಕ್ಷಿಣ ಆಫ್ರಿಕಾದ ಆಟಗಾರ್ತಿಯರು ಕಂಗಾಲಾಗಿದ್ದರು.

ಭಾನುವಾರ ನಡೆದ ಮಹಿಳಾ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಮೊದಲ ಬಾರಿಗೆ ಇತಿಹಾಸ ನಿರ್ಮಿಸಿತು. ಶೆಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾ ಅವರ ಆಲ್‌ರೌಂಡ್ ಪ್ರದರ್ಶನದದಿಂದ ಭಾರತ ತಂಡವು ಮೊದಲ ಬಾರಿಗೆ ಮಹಿಳಾ ಐಸಿಸಿ ಏಕದಿನ ವಿಶ್ವಕಪ್ ಗೆದ್ದಿತು. ಆರಂಭಿಕರಾಗಿ ಬ್ಯಾಟಿಂಗ್ ಮಾಡಿದ ಶೆಫಾಲಿ 78 ಎಸೆತಗಳಲ್ಲಿ ಆಕ್ರಮಣಕಾರಿಯಾಗಿ 87 ರನ್ ಗಳಿಸಿದರು.

ಟೀಮ್ ಇಂಡಿಯಾ ವಿರುದ್ಧದ ಸೋಲಿನ ನಂತರ, ದಕ್ಷಿಣ ಆಫ್ರಿಕಾದ ಆಟಗಾರರು ಸಾಕಷ್ಟು ಬೇಸರಗೊಂಡಂತೆ ಕಂಡುಬಂದರು. ಅನೇಕರು ಕಣ್ಣೀರು ಹಾಕುತ್ತಿದ್ದರು, ಪರಸ್ಪರ ಸಮಾಧಾನಪಡಿಸಿಕೊಳ್ಳುತ್ತಿದ್ದರು. ಪಂದ್ಯದಲ್ಲಿ ಶತಕ ಗಳಿಸಿದ ನಾಯಕಿ ಲಾರಾ ವೋಲ್ವಾರ್ಡ್ಟ್ ಒಂದು ಮೂಲೆಯಲ್ಲಿ ಶಾಂತವಾಗಿ ಕುಳಿತಿದ್ದರು, ಅವರು ನಿರಾಶೆಗೊಂಡಿದ್ದರು.

ದಕ್ಷಿಣ ಆಫ್ರಿಕಾ ಆಟಗಾರ್ತಿಯನ್ನು ತಬ್ಬಿಕೊಂಡ ಭಾರತೀಯ ಆಟಗಾರ್ತಿಯರ ವಿಡಿಯೋ:

View this post on Instagram

A post shared by ICC (@icc)

ವಿಜಯದ ನಂತರ ಭಾರತೀಯ ಆಟಗಾರ್ತಿಯರು ಭರ್ಜರಿಯಾಗಿ ಆಚರಿಸುತ್ತಿದ್ದರೆ, ದಕ್ಷಿಣ ಆಫ್ರಿಕಾದ ಆಟಗಾರ್ತಿಯರು ಅಳುತ್ತಿರುವುದು ಕಂಡುಬಂದಿತು. ನಂತರ ಭಾರತೀಯ ಆಟಗಾರ್ತಿಯರು ಆಫ್ರಿಕನ್ ಆಟಗಾರ್ತಿಯರನ್ನು ಅಪ್ಪಿಕೊಂಡು ಸಾಂತ್ವನ ಹೇಳಿದರು. ಕೊನೆಯ ವಿಕೆಟ್ ಪತನದ ನಂತರ ಇಡೀ ಕ್ರೀಡಾಂಗಣವು ಸಂಭ್ರಮಾಚರಣೆಯಲ್ಲಿ ಮುಳುಗಿದಾಗ ಹಲವಾರು ದಕ್ಷಿಣ ಆಫ್ರಿಕಾದ ಆಟಗಾರರು ಭಾವುಕರಾದರು. ಅವರು ಪಂದ್ಯಾವಳಿ ಮತ್ತು ಫೈನಲ್ ಉದ್ದಕ್ಕೂ ಬಲವಾದ ಹೋರಾಟವನ್ನು ನೀಡಿದ್ದರು.

Harmanpreet Kaur: ಟ್ರೋಫಿ ತೆಗೆದುಕೊಳ್ಳುವಾಗ ಜಯ್ ಶಾಗೆ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ಏನು ಮಾಡಿದ್ರು ನೋಡಿ

ಭಾರತೀಯ ಆಟಗಾರ್ತಿಯರು ತಮ್ಮ ಎದುರಾಳಿಗಳತ್ತ ಧಾವಿಸಿ, ಅವರನ್ನು ಅಪ್ಪಿಕೊಂಡು, ಸಮಾಧಾನಪಡಿಸಿ, ಬೆಂಬಲ ವ್ಯಕ್ತಪಡಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಇತರ ಹಿರಿಯ ಮತ್ತು ಯುವ ಆಟಗಾರ್ತಿಯರು ದಕ್ಷಿಣ ಆಫ್ರಿಕಾ ತಂಡದ ಪ್ರಯತ್ನ ಮತ್ತು ಫೈನಲ್‌ಗೆ ಪ್ರಯಾಣ ಬೆಳೆಸಿದ್ದಕ್ಕಾಗಿ ಶ್ಲಾಘಿಸಿದರು.

ಬಳಿಕ ಭಾರತೀಯ ಆಟಗಾರರಿಗೆ ತಮ್ಮ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇಡೀ ಕ್ರೀಡಾಂಗಣವು “ವಂದೇ ಮಾತರಂ, ಮಾ ತುಜೆ ಸಲಾಮ್, ಮತ್ತು ಲಹರಾ ದೋ ಸರ್ಕಾಶಿ ಕಾ ಪರ್ಚಮ್ ಲಹರಾ ದೋ” ಎಂದು ಒಗ್ಗಟ್ಟಿನಿಂದ ಹಾಡಲು ಪ್ರಾರಂಭಿಸಿದರು. ಕ್ರೀಡಾಂಗಣದಲ್ಲಿ ಹಾಜರಿದ್ದ ಭಾರತದ ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಭಾರತದ ಧ್ವಜವನ್ನು ಬೀಸುತ್ತಿರುವುದು ಕಂಡುಬಂದಿತು.

ಈ ಹಿಂದೆ 2005 ಮತ್ತು 2017 ರಲ್ಲಿ ಇತಿಹಾಸ ಸೃಷ್ಟಿಸುವ ಅವಕಾಶವನ್ನು ಕಳೆದುಕೊಂಡಿದ್ದ ಭಾರತ ತಂಡವು, ಭಾನುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಅದನ್ನು ತಪ್ಪಿಸಿಕೊಳ್ಳಲಿಲ್ಲ ಮತ್ತು 52 ರನ್‌ಗಳಿಂದ ಗೆದ್ದು ಮಹಿಳಾ ಏಕದಿನ ಕ್ರಿಕೆಟ್‌ನ ಹೊಸ ವಿಶ್ವ ಚಾಂಪಿಯನ್ ಆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Mon, 3 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ