AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ ಪಂದ್ಯ ಸ್ಥಳಾಂತರ..!

ICC World cup 2023: 2016 ರಲ್ಲಿ ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ವೇಳೆ ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿತ್ತು. ಅಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಕೋರಿಕೆಯ ಮೇರೆಗೆ ಐಸಿಸಿ ಕೊಲ್ಕತ್ತಾಗೆ ಸ್ಥಳಾಂತರಿಸಿತ್ತು.

ICC World Cup 2023: ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ ಪಂದ್ಯ ಸ್ಥಳಾಂತರ..!
Pakistan Team
TV9 Web
| Edited By: |

Updated on: Oct 01, 2023 | 5:07 PM

Share

ಏಕದಿನ ವಿಶ್ವಕಪ್ ರಂಗೇರಲು ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಫೈನಲಿಸ್ಟ್​ ತಂಡಗಳಾದ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಕಣಕ್ಕಿಳಿಯಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಒಟ್ಟು ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ 45 ಪಂದ್ಯಗಳು ನಡೆಯಲಿದೆ. ಅಂದರೆ ಪ್ರತಿ ತಂಡಗಳು ಉಳಿದ 9 ತಂಡಗಳ ವಿರುದ್ಧ ಒಂದೊಂದು ಪಂದ್ಯವಾಡಲಿದೆ. ಇದಾದ ಬಳಿಕ ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್​ಗೇರಲಿದೆ. ಅದರಂತೆ ನವೆಂಬರ್ 15 ಮತ್ತು 16 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದೆ.

ಇಲ್ಲಿ ಮೊದಲ ಸೆಮಿಫೈನಲ್​ಗೆ ಮುಂಬೈನ ವಾಂಖೆಡೆ ಮೈದಾನವನ್ನು ನಿಗದಿ ಮಾಡಲಾಗಿದ್ದರೆ, 2ನೇ ಸೆಮಿಫೈನಲ್​ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ ಸ್ಟೇಡಿಯಂ ಬದಲಾಗಲಿದೆ.

ಪಾಕ್​ಗೆ ಕೊಲ್ಕತ್ತಾದಲ್ಲಿ ಪಂದ್ಯ:

ಒಂದು ವೇಳೆ ಪಾಕಿಸ್ತಾನ್ ತಂಡವು ಮೊದಲ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯವು ಮುಂಬೈ ಬದಲಿಗೆ ಕೊಲ್ಕತ್ತಾದಲ್ಲಿ ನಡೆಯಲಿದೆ. ಈ ಹಿಂದೆಯೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಇಂತಹದೊಂದು ಕೋರಿಕೆಯನ್ನು ಸಲ್ಲಿಸಿತ್ತು. ಅದರಂತೆ ಮೊದಲ ಸೆಮಿಫೈನಲ್​ಗೆ ಪಾಕಿಸ್ತಾನ್ ಅರ್ಹತೆ ಪಡೆದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಒಂದು ವೇಳೆ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ನಲ್ಲಿ ಮುಖಾಮುಖಿಯಾದರೂ ಕೂಡ ಆ ಪಂದ್ಯ ಕೊಲ್ಕತ್ತಾದಲ್ಲೇ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಹಾಗೆಯೇ 2ನೇ ಸೆಮಿಫೈನಲ್ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗುತ್ತದೆ.

ಇನ್ನು ಪಾಕಿಸ್ತಾನ್ ತಂಡ 2ನೇ ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಆ ಪಂದ್ಯವನ್ನು ಸ್ಥಳಾಂತರ ಮಾಡುವುದಿಲ್ಲ. ಏಕೆಂದರೆ 2ನೇ ಸೆಮಿಫೈನಲ್​ಗೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿಪಡಿಸಲಾಗಿದೆ.

2016 ರಲ್ಲೂ ಬದಲಾಗಿದ್ದ ಸ್ಟೇಡಿಯಂ:

2016 ರಲ್ಲಿ ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ವೇಳೆ ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿತ್ತು. ಅಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಕೋರಿಕೆಯ ಮೇರೆಗೆ ಐಸಿಸಿ ಕೊಲ್ಕತ್ತಾಗೆ ಸ್ಥಳಾಂತರಿಸಿತ್ತು. ಇದೀಗ ಈ ಬಾರಿಯ ವಿಶ್ವಕಪ್​ನಲ್ಲೂ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲೇ ಸೆಮಿಫೈನಲ್ ಆಡಲು ಪಾಕಿಸ್ತಾನ್ ತಂಡ ನಿರ್ಧರಿಸಿರುವುದು ವಿಶೇಷ.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಫೈನಲ್​ ಪಂದ್ಯ ಯಾವಾಗ?

ಪಾಕಿಸ್ತಾನ್ ಮೊದಲ ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಮಾತ್ರ ಸ್ಟೇಡಿಯಂ ಬದಲಾಗಲಿದೆ. ಇದಾಗ್ಯೂ ಫೈನಲ್ ಪಂದ್ಯ ನಡೆಯುವುದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ನವೆಂಬರ್ 19 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಯಾರು ಮುಖಾಮುಖಿಯಾಗಲಿದ್ದಾರೆ ಎಂಬುದೇ ಈಗ ಕುತೂಹಲ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ