AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ 450/2, ಭಾರತ 65ಕ್ಕೆ ಆಲ್‌ಔಟ್: ಫೈನಲ್​ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಿಚೆಲ್‌ ಮಾರ್ಷ್‌!

2023ರ ಐಪಿಎಲ್​​ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಪಾಡ್​ಕಾಸ್ಟ್​​ನಲ್ಲಿ ಮಿಚೆಲ್‌ ಮಾರ್ಷ್‌ ಅವರು ಭಾಗವಹಿಸಿದ್ದರು. ಈ ವೇಳೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್​ ನಷ್ಟಕ್ಕೆ 450 ರನ್​​ ಗಳಿಸಲಿದೆ. ಭಾರತ 65 ರನ್​​ಗಳಿಗೆ ಆಲ್‌ಔಟ್​ ಆಗಲಿದೆ ಎಂದು ಮಿಚೆಲ್‌ ಮಾರ್ಷ್‌ ಅವರು ಭವಿಷ್ಯ ನುಡಿದಿದ್ದರು.

ಆಸ್ಟ್ರೇಲಿಯಾ 450/2, ಭಾರತ 65ಕ್ಕೆ ಆಲ್‌ಔಟ್: ಫೈನಲ್​ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಿಚೆಲ್‌ ಮಾರ್ಷ್‌!
ಮಿಚೆಲ್‌ ಮಾರ್ಷ್‌, ಭಾರತ ತಂಡದ ಆಟಗಾರರು
ಗಂಗಾಧರ​ ಬ. ಸಾಬೋಜಿ
|

Updated on:Nov 17, 2023 | 6:23 PM

Share

ಕೋಲ್ಕತ್ತಾದ ಈಡನ್​​ ಗಾರ್ಡನ್ಸ್​​ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್​ (ICC World Cup 2023) ಟೂರ್ನಿಯ ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಗೆಲುವು ಸಾಧಿಸಿದೆ. ಆ ಮೂಲಕ ಫೈನಲ್​ಗೆ ಪ್ರವೇಶ ಪಡೆದಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಟ ನಡೆಸಲಿವೆ. ಆದರೆ ಅದಕ್ಕೂ ಮುನ್ನ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್‌ ಮಾರ್ಷ್‌ ಅವರ ಆ ಒಂದು ಹೇಳಿಕೆ ಮಾತ್ರ ಸಾಕಷ್ಟು ವೈರಲ್​ ಆಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶ ಪಡೆಯುತ್ತಿದ್ದಂತೆ ಮಿಚೆಲ್‌ ಮಾರ್ಷ್‌ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೈನಲ್​​ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಅದರಲ್ಲಿ ಅವರು  ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಐಸಿಸಿ ವಿಶ್ವಕಪ್ ಫೈನಲ್: ವಿಮಾನಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್; ಅಹ್ಮದಾಬಾದ್​ಗೆ ಫ್ಲೈಟ್ ಬೆಲೆ ಗಗನಕ್ಕೆ

2023ರ ಐಪಿಎಲ್​​ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಪಾಡ್​ಕಾಸ್ಟ್​​ನಲ್ಲಿ ಮಿಚೆಲ್‌ ಮಾರ್ಷ್‌ ಅವರು ಭಾಗವಹಿಸಿದ್ದರು. ಈ ವೇಳೆ ‘ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್​ ನಷ್ಟಕ್ಕೆ 450 ರನ್​​ ಗಳಿಸಲಿದೆ. ಭಾರತ 65 ರನ್​​ಗಳಿಗೆ ಆಲ್‌ಔಟ್​ ಆಗಲಿದೆ’ ಎಂದು ಮಿಚೆಲ್‌ ಮಾರ್ಷ್‌ ಅವರು ಭವಿಷ್ಯ ನುಡಿದಿದ್ದರು. ಸದ್ಯ ಈ ಹಳೆಯ ವಿಡಿಯೋ ವೈರಲ್ ಆಗಿದೆ.

ಗುರುವಾರ ಕೋಲ್ಕತ್ತಾದಲ್ಲಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್​​ಗಳ ನಷ್ಟಕ್ಕೆ ಸೋಲಿಸಿದ ಬಳಿಕ ಮಿಚೆಲ್​ ಅವರು ಪ್ರತಿಕ್ರಿಯಿಸಿದ್ದು, ‘ನಾವು ಅತ್ಯುತ್ತಮವಾದದ್ದನ್ನು ಮಾತ್ರ ತೆಗೆದುಕೊಳ್ಳಲು ಬಯಸುತ್ತೇವೆ’ ಎಂದು ಹೇಳಿದ್ದರು.

ಇದನ್ನೂ ಓದಿ: ಮಿಂಚುತ್ತಿದೆ ‘ಬ್ರ್ಯಾಂಡ್’ ಶಮಿ; ಜಾಹೀರಾತಿಗಾಗಿ ಎಡೆತಾಕುತ್ತಿರುವ ಕಂಪನಿಗಳು; ಮೊಹಮ್ಮದ್ ಶಮಿಗೆ ಹರಿದುಬರುತ್ತಿದೆ ಹಣದ ಹೊಳೆ

‘ಭಾರತ ತಂಡ ಪ್ರಸ್ತುತ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದೆ. ನಾವು ಅವರನ್ನು ಫೈನಲ್​ನಲ್ಲಿ ಎದುರಿಸಲಿದ್ದೇವೆ. ಫೈನಲ್​​ ಪಂದ್ಯದಲ್ಲಿ ನಮ್ಮನ್ನು ನಾವು ಕೊಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಎರಡು ತಂಡಗಳಿಗೂ ವಿಶ್ವಕಪ್​​ ತುಂಬಾ ಮುಖ್ಯ. ಹಾಗಾಗಿ ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದು ಮಿಚೆಲ್​ ಮಾರ್ಷ್​ ಹೇಳಿದ್ದರು.

ಭಾರತ ತಂಡ 10 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಭಾನುವಾರ ಆಸ್ಟ್ರೇಲಿಯಾ ತಂಡದೊಂದಿಗೆ ಕಣಕ್ಕಿಳಿಯಲಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ 2003ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ಕೂಡ ಮಾಡಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:20 pm, Fri, 17 November 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ