AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ 450/2, ಭಾರತ 65ಕ್ಕೆ ಆಲ್‌ಔಟ್: ಫೈನಲ್​ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಿಚೆಲ್‌ ಮಾರ್ಷ್‌!

2023ರ ಐಪಿಎಲ್​​ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಪಾಡ್​ಕಾಸ್ಟ್​​ನಲ್ಲಿ ಮಿಚೆಲ್‌ ಮಾರ್ಷ್‌ ಅವರು ಭಾಗವಹಿಸಿದ್ದರು. ಈ ವೇಳೆ ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್​ ನಷ್ಟಕ್ಕೆ 450 ರನ್​​ ಗಳಿಸಲಿದೆ. ಭಾರತ 65 ರನ್​​ಗಳಿಗೆ ಆಲ್‌ಔಟ್​ ಆಗಲಿದೆ ಎಂದು ಮಿಚೆಲ್‌ ಮಾರ್ಷ್‌ ಅವರು ಭವಿಷ್ಯ ನುಡಿದಿದ್ದರು.

ಆಸ್ಟ್ರೇಲಿಯಾ 450/2, ಭಾರತ 65ಕ್ಕೆ ಆಲ್‌ಔಟ್: ಫೈನಲ್​ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಿಚೆಲ್‌ ಮಾರ್ಷ್‌!
ಮಿಚೆಲ್‌ ಮಾರ್ಷ್‌, ಭಾರತ ತಂಡದ ಆಟಗಾರರು
ಗಂಗಾಧರ​ ಬ. ಸಾಬೋಜಿ
|

Updated on:Nov 17, 2023 | 6:23 PM

Share

ಕೋಲ್ಕತ್ತಾದ ಈಡನ್​​ ಗಾರ್ಡನ್ಸ್​​ ಕ್ರೀಡಾಂಗಣದಲ್ಲಿ ಗುರುವಾರ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್​ (ICC World Cup 2023) ಟೂರ್ನಿಯ ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ ಗೆಲುವು ಸಾಧಿಸಿದೆ. ಆ ಮೂಲಕ ಫೈನಲ್​ಗೆ ಪ್ರವೇಶ ಪಡೆದಿದೆ. ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಟ ನಡೆಸಲಿವೆ. ಆದರೆ ಅದಕ್ಕೂ ಮುನ್ನ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್‌ ಮಾರ್ಷ್‌ ಅವರ ಆ ಒಂದು ಹೇಳಿಕೆ ಮಾತ್ರ ಸಾಕಷ್ಟು ವೈರಲ್​ ಆಗುತ್ತಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶ ಪಡೆಯುತ್ತಿದ್ದಂತೆ ಮಿಚೆಲ್‌ ಮಾರ್ಷ್‌ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೈನಲ್​​ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದಾಗಿ ಅದರಲ್ಲಿ ಅವರು  ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಐಸಿಸಿ ವಿಶ್ವಕಪ್ ಫೈನಲ್: ವಿಮಾನಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್; ಅಹ್ಮದಾಬಾದ್​ಗೆ ಫ್ಲೈಟ್ ಬೆಲೆ ಗಗನಕ್ಕೆ

2023ರ ಐಪಿಎಲ್​​ ಟೂರ್ನಿಯ ಸಂದರ್ಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ಪಾಡ್​ಕಾಸ್ಟ್​​ನಲ್ಲಿ ಮಿಚೆಲ್‌ ಮಾರ್ಷ್‌ ಅವರು ಭಾಗವಹಿಸಿದ್ದರು. ಈ ವೇಳೆ ‘ಆಸ್ಟ್ರೇಲಿಯಾ ಭಾರತವನ್ನು ಸೋಲಿಸುತ್ತದೆ. ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ 2 ವಿಕೆಟ್​ ನಷ್ಟಕ್ಕೆ 450 ರನ್​​ ಗಳಿಸಲಿದೆ. ಭಾರತ 65 ರನ್​​ಗಳಿಗೆ ಆಲ್‌ಔಟ್​ ಆಗಲಿದೆ’ ಎಂದು ಮಿಚೆಲ್‌ ಮಾರ್ಷ್‌ ಅವರು ಭವಿಷ್ಯ ನುಡಿದಿದ್ದರು. ಸದ್ಯ ಈ ಹಳೆಯ ವಿಡಿಯೋ ವೈರಲ್ ಆಗಿದೆ.

ಗುರುವಾರ ಕೋಲ್ಕತ್ತಾದಲ್ಲಿ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್​​ಗಳ ನಷ್ಟಕ್ಕೆ ಸೋಲಿಸಿದ ಬಳಿಕ ಮಿಚೆಲ್​ ಅವರು ಪ್ರತಿಕ್ರಿಯಿಸಿದ್ದು, ‘ನಾವು ಅತ್ಯುತ್ತಮವಾದದ್ದನ್ನು ಮಾತ್ರ ತೆಗೆದುಕೊಳ್ಳಲು ಬಯಸುತ್ತೇವೆ’ ಎಂದು ಹೇಳಿದ್ದರು.

ಇದನ್ನೂ ಓದಿ: ಮಿಂಚುತ್ತಿದೆ ‘ಬ್ರ್ಯಾಂಡ್’ ಶಮಿ; ಜಾಹೀರಾತಿಗಾಗಿ ಎಡೆತಾಕುತ್ತಿರುವ ಕಂಪನಿಗಳು; ಮೊಹಮ್ಮದ್ ಶಮಿಗೆ ಹರಿದುಬರುತ್ತಿದೆ ಹಣದ ಹೊಳೆ

‘ಭಾರತ ತಂಡ ಪ್ರಸ್ತುತ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿದೆ. ನಾವು ಅವರನ್ನು ಫೈನಲ್​ನಲ್ಲಿ ಎದುರಿಸಲಿದ್ದೇವೆ. ಫೈನಲ್​​ ಪಂದ್ಯದಲ್ಲಿ ನಮ್ಮನ್ನು ನಾವು ಕೊಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಎರಡು ತಂಡಗಳಿಗೂ ವಿಶ್ವಕಪ್​​ ತುಂಬಾ ಮುಖ್ಯ. ಹಾಗಾಗಿ ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದು ಮಿಚೆಲ್​ ಮಾರ್ಷ್​ ಹೇಳಿದ್ದರು.

ಭಾರತ ತಂಡ 10 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಭಾನುವಾರ ಆಸ್ಟ್ರೇಲಿಯಾ ತಂಡದೊಂದಿಗೆ ಕಣಕ್ಕಿಳಿಯಲಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ 2003ರ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಭರ್ಜರಿ ತಯಾರಿ ಕೂಡ ಮಾಡಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:20 pm, Fri, 17 November 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ