Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ICC World Cup 2023: ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ
ಟೀಂ ಇಂಡಿಯಾ
Follow us
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 10:39 PM

ಗುಜರಾತ್​ನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2023ರ ವಿಶ್ವಕಪ್ ಪಂದ್ಯ (ICC World Cup 2023) ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್‌ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​​

ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್​ ಕೂಡ ಟ್ವೀಟ್​ ಮಾಡಿದ್ದು, ಒಳ್ಳೆಯದು ಆಸ್ಟ್ರೇಲಿಯಾ ನೀವು ನಿಜವಾಗಿಯೂ ವಿಶ್ವ ಚಾಂಪಿಯನ್. ಸ್ಪರ್ಧೆಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ತಂಡವನ್ನು ಸೋಲಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಇರ್ಫಾನ್ ಪಠಾಣ್ ಟ್ವೀಟ್​

41ನೇ ಓವರ್​ ಬಳಿಕ 3 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 230 ರನ್​ಗಳನ್ನು ಬಾರಿಸುವ ಮೂಲಕ ವಿಶ್ವಕಪ್​ ಕಿರೀಟವನ್ನು ಮತ್ತೊಮ್ಮೆ ಮುಡಿಗೇರಿಸಿಕೊಂಡಿದೆ. ಟ್ರಾವಿಸ್ ಹೆಡ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದು, ವಿರಾಟ್​ ಕೊಹ್ಲಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ