AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ICC World Cup 2023: ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ
ಟೀಂ ಇಂಡಿಯಾ
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 10:39 PM

Share

ಗುಜರಾತ್​ನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2023ರ ವಿಶ್ವಕಪ್ ಪಂದ್ಯ (ICC World Cup 2023) ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್‌ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​​

ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್​ ಕೂಡ ಟ್ವೀಟ್​ ಮಾಡಿದ್ದು, ಒಳ್ಳೆಯದು ಆಸ್ಟ್ರೇಲಿಯಾ ನೀವು ನಿಜವಾಗಿಯೂ ವಿಶ್ವ ಚಾಂಪಿಯನ್. ಸ್ಪರ್ಧೆಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ತಂಡವನ್ನು ಸೋಲಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಇರ್ಫಾನ್ ಪಠಾಣ್ ಟ್ವೀಟ್​

41ನೇ ಓವರ್​ ಬಳಿಕ 3 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 230 ರನ್​ಗಳನ್ನು ಬಾರಿಸುವ ಮೂಲಕ ವಿಶ್ವಕಪ್​ ಕಿರೀಟವನ್ನು ಮತ್ತೊಮ್ಮೆ ಮುಡಿಗೇರಿಸಿಕೊಂಡಿದೆ. ಟ್ರಾವಿಸ್ ಹೆಡ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದು, ವಿರಾಟ್​ ಕೊಹ್ಲಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ