AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ICC World Cup 2023: ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದು, ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ
ಟೀಂ ಇಂಡಿಯಾ
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 10:39 PM

Share

ಗುಜರಾತ್​ನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2023ರ ವಿಶ್ವಕಪ್ ಪಂದ್ಯ (ICC World Cup 2023) ದಲ್ಲಿ 6ನೇ ಬಾರಿಗೆ ಆಸ್ಟ್ರೇಲಿಯಾ ತಂಡ ವಿಶ್ವ ಚಾಂಪಿಯನ್‌ ಆಗಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನವಾಗಿದೆ. ಅಜೇಯವಾಗಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ಟೀಂ ಇಂಡಿಯಾಗೆ ವಿರೋಚಿತ ಸೋಲು ಎದುರಾಗಿದೆ. ಈ ಸಂದರ್ಭದಲ್ಲಿ ಇಂದು ಮತ್ತು ಯಾವಾಗಲೂ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್​​

ಭಾರತ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್​ ಕೂಡ ಟ್ವೀಟ್​ ಮಾಡಿದ್ದು, ಒಳ್ಳೆಯದು ಆಸ್ಟ್ರೇಲಿಯಾ ನೀವು ನಿಜವಾಗಿಯೂ ವಿಶ್ವ ಚಾಂಪಿಯನ್. ಸ್ಪರ್ಧೆಯ ಅತ್ಯುತ್ತಮ ತಂಡಗಳಲ್ಲಿ ಒಂದಾದ ತಂಡವನ್ನು ಸೋಲಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಇರ್ಫಾನ್ ಪಠಾಣ್ ಟ್ವೀಟ್​

41ನೇ ಓವರ್​ ಬಳಿಕ 3 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 230 ರನ್​ಗಳನ್ನು ಬಾರಿಸುವ ಮೂಲಕ ವಿಶ್ವಕಪ್​ ಕಿರೀಟವನ್ನು ಮತ್ತೊಮ್ಮೆ ಮುಡಿಗೇರಿಸಿಕೊಂಡಿದೆ. ಟ್ರಾವಿಸ್ ಹೆಡ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದು, ವಿರಾಟ್​ ಕೊಹ್ಲಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ. ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?