AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ? ಸುಳ್ಳು ವದಂತಿ ಹಬ್ಬಿಸಿದ ಪಾಕಿಸ್ತಾನದ ಮಾಧ್ಯಮಗಳು

Cylinders blast in Bangalore: ಪಾಕ್ ತಂಡ ಕೂಡ ಕೆಲವು ದಿನಗಳ ಹಿಂದೆಯೇ ಬೆಂಗಳೂರಿಗೆ ಆಗಮನಿಸಿದ್ದು, ಅಭ್ಯಾಸದಲ್ಲಿ ನಿರತವಾಗಿದೆ. ಇದೀಗ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ಸ್ಫೋಟ ನಡೆದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ತಪ್ಪು ಮಾಹಿತಿಯನ್ನು ಹರಡಿದ್ದು, ಈ ಘಟನೆ ಇದೀಗ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ? ಸುಳ್ಳು ವದಂತಿ ಹಬ್ಬಿಸಿದ ಪಾಕಿಸ್ತಾನದ ಮಾಧ್ಯಮಗಳು
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on:Oct 19, 2023 | 6:15 PM

Share

ಅಹಮದಾಬಾದ್‌ನಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ವಿಶ್ವಕಪ್ (ICC World Cup 2023) ಪಂದ್ಯದ ವೇಳೆ ಟೀಂ ಇಂಡಿಯಾ ಅಭಿಮಾನಿಗಳು ಪಾಕ್ ಕ್ರಿಕೆಟಿಗರ ಬಳಿ ಅನುಚಿತ ವರ್ತನೆ ತೋರಿದ್ದರು ಎಂದು ಪಿಸಿಬಿ (PCB), ಐಸಿಸಿಗೆ ದೂರು ಸಲ್ಲಿಸಿದ ಬಳಿಕ ಇದೀಗ ಪಾಕಿಸ್ತಾನದ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಬಿತ್ತರಿಸಿ ಪೇಚಿಗೆ ಸಿಲುಕಿವೆ. ವಾಸ್ತವವಾಗಿ ನಿನ್ನೆ ಅಂದರೆ ಅಕ್ಟೋಬರ್ 18 ರಂದು ಬೆಂಗಳೂರಿನ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿತ್ತು. ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್​ಗಳು ಸ್ಫೋಟಗೊಂಡಿದ್ದವು. ಇದೀಗ ಇದೇ ವಿಡಿಯೋವನ್ನು ಬಳಸಿಕೊಂಡಿರುವ ಪಾಕಿಸ್ತಾನ ಮಾಧ್ಯಮಗಳು, ಪಾಕ್ ಕ್ರಿಕೆಟ್ ತಂಗಿರುವ ಹೋಟೆಲ್ ಬಳಿ ಭಾರಿ ಬಾಂಬ್ ಸ್ಫೋಟ ನಡೆದಿದೆ ಎಂಬ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿವೆ.

ವಾಸ್ತವವಾಗಿ ನಾಳೆ ಅಂದರೆ, ಅಕ್ಟೋಬರ್ 20 ರಂದು ಪಾಕಿಸ್ತಾನ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಕದನಕ್ಕಾಗಿ ಉಭಯ ತಂಡಗಳು ಈಗಾಗಲೇ ಬೆಂಗಳೂರಿಗೆ ಬಂದಿಳಿದಿವೆ. ಪಾಕ್ ತಂಡ ಕೂಡ ಕೆಲವು ದಿನಗಳ ಹಿಂದೆಯೇ ಬೆಂಗಳೂರಿಗೆ ಆಗಮನಿಸಿದ್ದು, ಅಭ್ಯಾಸದಲ್ಲಿ ನಿರತವಾಗಿದೆ. ಇದೀಗ ಪಂದ್ಯಕ್ಕೂ ಮುನ್ನ ಬೆಂಗಳೂರಿನಲ್ಲಿ ಸ್ಫೋಟ ನಡೆದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ತಪ್ಪು ಮಾಹಿತಿಯನ್ನು ಹರಡಿದ್ದು, ಈ ಘಟನೆ ಇದೀಗ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಪತ್ರಕರ್ತರಿಂದ ಸುಳ್ಳು ವದಂತಿ

ಪಾಕಿಸ್ತಾನ ಮೂಲದ ಕೆಲವು ಹೆಸರಾಂತ ಪತ್ರಕರ್ತರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ತಪ್ಪು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ, ಬೆಂಗಳೂರಿನಲ್ಲಿ ನಡೆದ ಸ್ಫೋಟವು ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಇತರ ತಂಡಗಳಿಗೆ ಭದ್ರತಾ ಕಾಳಜಿಯನ್ನು ಹೆಚ್ಚಿಸಿದೆ ಎಂದು ಬರೆದುಕೊಂಡಿದ್ದರೆ, ಇನ್ನು ಕೆಲವರು ಬೆಂಗಳೂರಿನ ಮಡ್‌ಪೈಪ್ ಕೆಫೆಯಲ್ಲಿ ಭಾರಿ ಸ್ಫೋಟ ನಡೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಭಾವಿಸುತ್ತೇವೆ. ಪಾಕಿಸ್ತಾನ ತಂಡ ಇಂದು ಬೆಂಗಳೂರಿನಲ್ಲಿ ಅಭ್ಯಾಸ ನಡೆಸಲ್ಲಿದ್ದು, ಇನ್ನೆರಡು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನಾಡಲಿದೆ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ?

ಮೇಲೆ ಹೇಳಿದಂತೆ ಬೆಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆಯೇ ಹೊರತು, ಬಾಂಬ್ ಸ್ಫೋಟ ನಡೆದಿಲ್ಲ. ಆದರೆ ಪಾಕಿಸ್ತಾನ ತಂಡದ ಆಟಗಾರರು ತಂಗಿದ್ದ ಟೀಮ್ ಹೋಟೆಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಚಾರ ಮಾಡಿವೆ.

ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ನಾಳೆ ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ. ಹೀಗಾಗಿ ಪಂದ್ಯ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಲ್ಲದೆ ಪಂದ್ಯದ ಒಂದು ದಿನಕ್ಕೂ ಮುನ್ನ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರಿಂದ ಭಧ್ರತೆ ಪರಿಶೀಲನೆ ನಡೆಯಿತು. ಅವರೊಂದಿಗೆ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದ್ದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್ ರಿಂದ ಭದ್ರತಾ ಪರಿಶೀಲನೆ ನಡೆಸಲಾಯಿತು. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ ಮಾಡಲಾಗಿದ್ದು ಇದರಲ್ಲಿ, 9 ಎಸಿಪಿ, 25 ಜನ ಇನ್ಸ್ಪೆಕ್ಟರ್, 86 ಜನ ಪಿಎಸ್ಐ, 404 ಜನ ಕಾನ್ಸ್ಟೇಬಲ್​ಗಳು ಸೇರಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Thu, 19 October 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ