AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಹೆಸರಿಸಿದ ಸಂಜಯ್​ ಮಂಜ್ರೇಕರ್

ICC World Cup 2023: ಏಕದಿನ ವಿಶ್ವಕಪ್​ಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ 15 ಸದಸ್ಯರ ಬಳಗವನ್ನು ಹೆಸರಿಸಿದ್ದಾರೆ.

ICC World Cup 2023: ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾವನ್ನು ಹೆಸರಿಸಿದ ಸಂಜಯ್​ ಮಂಜ್ರೇಕರ್
Team India
TV9 Web
| Edited By: |

Updated on: Aug 03, 2023 | 5:38 PM

Share

ಏಕದಿನ ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅದರಂತೆ ಅಕ್ಟೋಬರ್ 5 ರಿಂದ ಏಕದಿನ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ. ಇತ್ತ ಈ ಕ್ರಿಕೆಟ್​ ಕದನಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನು ರೂಪಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಲವು ಪ್ರಯೋಗಗಳನ್ನು ಮಾಡಲಾಗಿತ್ತು.

ಈ ಪ್ರಯೋಗಗಳ ನಡುವೆ ಏಕದಿನ ವಿಶ್ವಕಪ್​ಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್​ ಮಂಜ್ರೇಕರ್. ಈ ಟೂರ್ನಿಗಾಗಿ 15 ಸದಸ್ಯರನ್ನು ಆಯ್ಕೆ ಮಾಡಿರುವ ಮಂಜ್ರೇಕರ್ ಕೆಲ ಪ್ರಮುಖ ಆಟಗಾರರನ್ನು ಕೈ ಬಿಟ್ಟಿರುವುದು ವಿಶೇಷ.

ಸಂಜಯ್​ ಮಂಜ್ರೇಕರ್ ಪ್ರಕಾರ, ಏಕದಿನ ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಜೊತೆ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಇಲ್ಲಿ ಶಿಖರ್ ಧವನ್ ಅವರನ್ನೂ ಕೂಡ 15 ಸದಸ್ಯರ ಬಳಗದಲ್ಲಿ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇದೇ ವೇಳೆ ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇನ್ನು ಕೆಎಲ್ ರಾಹುಲ್​, ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಆಲ್​ರೌಂಡರ್​ಗಳಾಗಿ ಈ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇವರಲ್ಲದೆ ಟೀಮ್ ಇಂಡಿಯಾದ ವೇಗದ ಬೌಲರ್​ಗಳಾಗಿ ಸಂಜಯ್ ಮಂಜ್ರೇಕರ್ ಆಯ್ಕೆ ಮಾಡಿರುವುದು, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಎಂಬುದು ವಿಶೇಷ. ಅದರಂತೆ ಏಕದಿನ ವಿಶ್ವಕಪ್​ಗೆ ಸಂಜಯ್ ಮಂಜ್ರೇಕರ್ ಹೆಸರಿಸಿರುವ 15 ಸದಸ್ಯರ ಭಾರತ ತಂಡ ಈ ಕೆಳಗಿನಂತಿದೆ.

ಇದನ್ನೂ ಓದಿ: ICC Test Rankings: ಐಸಿಸಿ ಟೆಸ್ಟ್​ ರ‍್ಯಾಂಕಿಂಗ್: ಟಾಪ್-3 ಗೆ ಜೋ ರೂಟ್, ಸ್ಟೀವ್ ಸ್ಮಿತ್ ಎಂಟ್ರಿ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಸಂಜು ಸ್ಯಾಮ್ಸನ್, ಪ್ರಸಿದ್ಧ್ ಕೃಷ್ಣ.

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ