AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023: ಭಾರತದ ತೀರ ಪ್ರದೇಶಗಳಲ್ಲಿ ಮಾನ್ಸೂನ್ ಕಾರಣ ಮಳೆಯಾಗುತ್ತಿದ್ದು, ಹೀಗಾಗಿ ಈ ಪಂದ್ಯಗಳಿಗೂ ಮಳೆ ಅಡಚಣೆಯನ್ನುಂಟು ಮಾಡಲಿದೆಯಾ ಎಂಬ ಭೀತಿ ಎದುರಾಗಿದೆ. ಆದರೆ ಈ ಭೀತಿಯ ನಡುವೆ ಐಸಿಸಿ ನಿಯಮದಂತೆ ಪಂದ್ಯ ನಡೆಯುವುದು ಖಚಿತ.

ಸೆಮಿಫೈನಲ್​ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ICC World Cup 2023
TV9 Web
| Edited By: |

Updated on: Nov 13, 2023 | 7:28 PM

Share

ಏಕದಿನ ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 15 ರಂದು ಮುಂಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ನವೆಂಬರ್ 16 ರಂದು ಕೊಲ್ಕತ್ತಾದಲ್ಲಿ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಈ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

ಇತ್ತ ಭಾರತದ ತೀರ ಪ್ರದೇಶಗಳಲ್ಲಿ ಮಾನ್ಸೂನ್ ಕಾರಣ ಮಳೆಯಾಗುತ್ತಿದ್ದು, ಹೀಗಾಗಿ ಈ ಪಂದ್ಯಗಳಿಗೂ ಮಳೆ ಅಡಚಣೆಯನ್ನುಂಟು ಮಾಡಲಿದೆಯಾ ಎಂಬ ಭೀತಿ ಎದುರಾಗಿದೆ. ಆದರೆ ಈ ಭೀತಿಯ ನಡುವೆ ಐಸಿಸಿ ನಿಯಮದಂತೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಸೆಮಿಫೈನಲ್ ಪಂದ್ಯಗಳ ಫಲಿತಾಂಶ ನಿರ್ಣಯಕ್ಕಾಗಿ ಐಸಿಸಿ ನಿಯಮಗಳನ್ನು ಪರಿಚಯಿಸಿದೆ. ಆ ನಿಯಮಗಳಂತೆ ಈ ಬಾರಿ ಕೂಡ ನಾಕೌಟ್ ಹಂತದ ಪಂದ್ಯಗಳು ನಡೆಯಲಿದೆ. ಆ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

  • 1- ಮೀಸಲು ದಿನದಾಟ: ಸೆಮಿಫೈನಲ್ ಪಂದ್ಯಗಳ ವೇಳೆ ಮಳೆ ಬಂದರೆ ಮೀಸಲು ದಿನದಾಟದಲ್ಲಿ ಮ್ಯಾಚ್ ಮುಂದುವರೆಯಲಿದೆ. ಅಂದರೆ ಬುಧವಾರ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಗುರುವಾರ ಮ್ಯಾಚ್ ನಡೆಯಲಿದೆ.
  • 2- ಪಂದ್ಯ ಮುಂದುವರಿಕೆ: ಒಂದು ವೇಳೆ ಮಳೆಯಿಂದಾಗಿ ಪಂದ್ಯ ಅರ್ಧದಲ್ಲೇ ಸ್ಥಗಿತಗೊಂಡರೆ, ಮರುದಿನ ಪಂದ್ಯ ಮುಂದುವರೆಯಲಿದೆ. ಇಲ್ಲಿ ಯಾವ ಹಂತದಲ್ಲಿ ಪಂದ್ಯ ಸ್ಥಗಿತವಾಗಿತ್ತೊ ಅಲ್ಲಿಂದಲೇ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಉದಾಹರಣೆಗೆ- ಟೀಮ್ ಇಂಡಿಯಾ 25 ಓವರ್​ಗಳಲ್ಲಿ 200 ರನ್​ಗಳಿಸಿದ್ದಾಗ ಮಳೆ ಬಂದು ಪಂದ್ಯ ನಿಂತರೆ, ಮರುದಿನ ಟೀಮ್ ಇಂಡಿಯಾ ಇನಿಂಗ್ಸ್​ 26ನೇ ಓವರ್​ನಿಂದ ಶುರುವಾಗಲಿದೆ.
  • 3- ಹೆಚ್ಚುವರಿ 120 ನಿಮಿಷಗಳು: ಸೆಮಿಫೈನಲ್ ಪಂದ್ಯಗಳಿಗೆ ಹೆಚ್ಚುವರಿಯಾಗಿ 2 ಗಂಟೆ ನಿಗದಿ ಮಾಡಲಾಗಿದೆ. ಉದಾಹರಣೆಗೆ, ಪಂದ್ಯವು 6 ಗಂಟೆಗೆ ನಿಂತ ಬಳಿಕ 8 ಗಂಟೆಗೆ ಮತ್ತೆ ಶುರುವಾದರೆ ಯಾವುದೇ ಓವರ್​ಗಳ ಕಡಿತ ಇರುವುದಿಲ್ಲ.
  • 4- ಓವರ್​ಗಳ ಕಡಿತ: ಈ ಮೇಲೆ ಹೇಳಿದಂತೆ 2 ಗಂಟೆಗಳ ಹೆಚ್ಚುವರಿ ಸಮಯ ಕಳೆದ ಬಳಿಕವಷ್ಟೇ ಓವರ್​ಗಳ ಕಡಿತವಾಗಲಿದೆ. ಅಂದರೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಗಳವರೆಗೆ ಯಾವುದೇ ಓವರ್​ಗಳ ಕಡಿತ ಮಾಡುವುದಿಲ್ಲ. ಆ ಬಳಿಕ ಪ್ರತಿ 5 ನಿಮಿಷಕ್ಕೆ ಒಂದು ಓವರ್ ಅನ್ನು ಕಡಿತ ಮಾಡಲಾಗುತ್ತದೆ.
  • 5- 20 ಓವರ್​ಗಳ ಬಳಿ ಫಲಿತಾಂಶ: ಸೆಮಿಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಧರಿಸಲು ಉಭಯ ತಂಡಗಳು ಕನಿಷ್ಠ 20 ಓವರ್​ಗಳನ್ನು ಆಡಿರಬೇಕು. ಅಂದರೆ ಮೊದಲ ಇನಿಂಗ್ಸ್​ ಬಳಿಕ ಮಳೆ ಬಂದು ಪಂದ್ಯ ಸ್ಥಗಿತವಾಗಿದ್ದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡಿದ ತಂಡ ಕನಿಷ್ಠ 20 ಓವರ್​ಗಳನ್ನು ಆಡಿರಬೇಕು.
  • 6- ಲೀಗ್ ಹಂತದ ಪಾಯಿಂಟ್ಸ್​: ಒಂದು ವೇಳೆ ಸೆಮಿಫೈನಲ್​ ಪಂದ್ಯವು ಸಂಪೂರ್ಣ ಮಳೆಗೆ ಅಹುತಿಯಾಗಿ, ಮೀಸಲು ದಿನಾಟದಲ್ಲೂ ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಮಾತ್ರ ಅಂಕ ಪಟ್ಟಿಯಲ್ಲಿ ಹೆಚ್ಚಿನ ಪಾಯಿಂಟ್ಸ್​ ಹೊಂದಿರುವ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಉದಾಹರಣೆಗೆ- ಭಾರತ-ನ್ಯೂಝಿಲೆಂಡ್ ನಡುವಣ ಸೆಮಿಫೈನಲ್​ ಪಂದ್ಯವು ಮಳೆಯಿಂದಾಗಿ ರದ್ದಾದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಫೈನಲ್​ಗೆ ಅರ್ಹತೆ ಪಡೆಯಲಿದೆ.
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?