AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಧರ್ಮಶಾಲಾಗೆ ತೆರಳಿದ ಟೀಂ ಇಂಡಿಯಾ

IND vs NZ, ICC World Cup 2023: ಬಾಂಗ್ಲಾ ವಿರುದ್ಧ ಪುಣೆಯಲ್ಲಿ ಪಂದ್ಯವನ್ನಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯುವ ಸಲುವಾಗಿ ಧರ್ಮಶಾಲಾಗೆ ಹಾರಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡಕ್ಕೆ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಸಿಗಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಗೆಲುವು ಅವಶ್ಯಕವಾಗಿದೆ.

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಧರ್ಮಶಾಲಾಗೆ ತೆರಳಿದ ಟೀಂ ಇಂಡಿಯಾ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Oct 21, 2023 | 8:11 AM

Share

ಬಾಂಗ್ಲಾದೇಶದ ವಿರುದ್ಧ ಸುಲಭ ಜಯ ಸಾಧಿಸಿ, ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ (India vs Bangladesh) ಇದೀಗ ತನ್ನ ಮುಂದಿನ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ಪಡೆಯನ್ನು ಎದುರಿಸಲು ಸಜ್ಜಾಗಿದೆ. ಬಾಂಗ್ಲಾ ವಿರುದ್ಧ ಪುಣೆಯಲ್ಲಿ ಪಂದ್ಯವನ್ನಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ನ್ಯೂಜಿಲೆಂಡ್ (India vs New zealand) ವಿರುದ್ಧ ಕಣಕ್ಕಿಳಿಯುವ ಸಲುವಾಗಿ ಧರ್ಮಶಾಲಾಗೆ ಹಾರಿದೆ. ಇದೇ ಭಾನುವಾರ, ಅಂದರೆ ಅಕ್ಟೋಬರ್ 22 ರಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಪಂದ್ಯ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡಕ್ಕೆ ವಿಶ್ವಕಪ್ (ICC World Cup 2023) ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಸಿಗಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಗೆಲುವು ಅವಶ್ಯಕವಾಗಿದೆ.

ಧರ್ಮಶಾಲಾದಲ್ಲಿ ಉಭಯ ತಂಡಗಳು

ಭಾರತೀಯ ಕ್ರಿಕೆಟಿಗರು ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಏತನ್ಮಧ್ಯೆ, ಭಾರತ ತಂಡ ಧರ್ಮಶಾಲಾ ತಲುಪಿದ್ದು, ಶನಿವಾರ ಅಭ್ಯಾಸ ಸೆಷನ್‌ಗಳಲ್ಲಿ ಭಾಗವಹಿಸಲಿದೆ. ಮತ್ತೊಂದೆಡೆ ತನ್ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆದ್ದಿದ್ದ ನ್ಯೂಜಿಲೆಂಡ್ ಈಗಾಗಲೇ ಧರ್ಮಶಾಲಾದಲ್ಲಿ ಅಭ್ಯಾಸ ಆರಂಭಿಸಿದೆ.

ವಿಶ್ವಕಪ್ ವೇಳೆ ಟೀಂ ಇಂಡಿಯಾ ಆಟಗಾರರಿಗೆ ರಜೆ ನೀಡಲು ಮುಂದಾದ ಬಿಸಿಸಿಐ! ಕಾರಣವೇನು ಗೊತ್ತಾ?

ಪಾಂಡ್ಯ ಅಲಭ್ಯ

ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಗಾಯಕ್ಕೆ ತುತ್ತಾಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಿವೀಸ್ ವಿರುದ್ಧ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಅವರು ತಂಡದೊಂದಿಗೆ ಧರ್ಮಶಾಲಾಗೆ ಪ್ರಯಾಣಿಸಿಲ್ಲ. ಬಾಂಗ್ಲಾದೇಶದ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನಲ್ಲಿ ಪಾಂಡ್ಯ ಅವರು ತಮ್ಮ ಫಾಲೋ-ಥ್ರೂನಲ್ಲಿ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡರು. ಇದರ ಪರಿಣಾಮದಿಂದಾಗಿ ಅವರು ಇಡೀ ಪಂದ್ಯದಿಂದ ಹೊರಗುಳಿದಿದ್ದರು.

ಪಾಂಡ್ಯ ಬದಲು ಯಾರಿಗೆ ಅವಕಾಶ?

ಇಂಗ್ಲೆಂಡ್‌ನ ತಜ್ಞ ವೈದ್ಯರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ಹಾರ್ದಿಕ್ ಅವರ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಪಾಂಡ್ಯ ಅನುಪಸ್ಥಿತಿಯಲ್ಲಿ ಆಯ್ಕೆ ಮಂಡಳಿ ಕಿವೀಸ್ ವಿರುದ್ಧ ಯಾವ ಆಟಗಾರನನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ, ಶಾರ್ದೂಲ್ ಠಾಕೂರ್ ಬದಲಿಗೆ ಪಾಂಡ್ಯ ಮತ್ತು ಮೊಹಮ್ಮದ್ ಶಮಿ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ / ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 am, Sat, 21 October 23

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ