ಈ ಬಾರಿಯ ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿನ ಫಲಿತಾಂಶ ಯಾರ ಪರವಿತ್ತು? ಇಲ್ಲಿದೆ ಮಾಹಿತಿ

ICC World Cup 2023: ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಾದ ನಾಲ್ಕು ಮ್ಯಾಚ್​ಗಳಲ್ಲಿ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 300+ ಸ್ಕೋರ್​ಗಳಿಸಿದೆ. ಹೀಗಾಗಿ ಈ ಸಲ ಕೂಡ ಬೃಹತ್ ಮೊತ್ತದೊಂದಿಗೆ ಪಂದ್ಯ ಗೆಲ್ಲಲು ಉಭಯ ತಂಡಗಳು ಪ್ಲ್ಯಾನ್ ರೂಪಿಸಬಹುದು.

ಈ ಬಾರಿಯ ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿನ ಫಲಿತಾಂಶ ಯಾರ ಪರವಿತ್ತು? ಇಲ್ಲಿದೆ ಮಾಹಿತಿ
ICC World Cup 2023
Follow us
| Updated By: ಝಾಹಿರ್ ಯೂಸುಫ್

Updated on: Nov 14, 2023 | 10:55 PM

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಣಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸಲಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಾಗಿದೆ.

ಈ ನಾಲ್ಕು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವೇ ಗೆದ್ದಿದೆ. ಇನ್ನು ಒಂದು ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅಂದರೆ ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು.

ಏಕೆಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಾದ ನಾಲ್ಕು ಮ್ಯಾಚ್​ಗಳಲ್ಲಿ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 300+ ಸ್ಕೋರ್​ಗಳಿಸಿದೆ. ಹೀಗಾಗಿ ಈ ಸಲ ಕೂಡ ಬೃಹತ್ ಮೊತ್ತದೊಂದಿಗೆ ಪಂದ್ಯ ಗೆಲ್ಲಲು ಉಭಯ ತಂಡಗಳು ಪ್ಲ್ಯಾನ್ ರೂಪಿಸಬಹುದು.

ಈ ಬಾರಿಯ ವಿಶ್ವಕಪ್​ನಲ್ಲಿ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯಗಳ ಫಲಿತಾಂಶ ಹೀಗಿದೆ:

ಸೌತ್ ಆಫ್ರಿಕಾ vs ಇಂಗ್ಲೆಂಡ್: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ 7 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 22 ಓವರ್​ಗಳಲ್ಲಿ 170 ರನ್​ಗಳಿಗೆ ಆಲೌಟ್ ಆಗಿತ್ತು. ಅದರಂತೆ ಸೌತ್ ಆಫ್ರಿಕಾ 229 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

ಸೌತ್ ಆಫ್ರಿಕಾ vs ಬಾಂಗ್ಲಾದೇಶ್: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸೌತ್ ಆಫ್ರಿಕಾ ಕಲೆಹಾಕಿದ್ದು ಬರೋಬ್ಬರಿ 382 ರನ್​ಗಳು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಬಾಂಗ್ಲಾದೇಶ್ ತಂಡವು 233 ರನ್​ಗಳಿಗೆ ಆಲೌಟ್ ಆಯಿತು. ಈ ಪಂದ್ಯದಲ್ಲೂ ಸೌತ್ ಆಫ್ರಿಕಾ 149 ರನ್​ಗಳ ಭರ್ಜರಿ ಗೆಲುವು ದಾಖಲಿಸಿತು.

ಭಾರತ vs ಶ್ರೀಲಂಕಾ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 357 ರನ್ ಕಲೆಹಾಕಿತು. ಇನ್ನು ಶ್ರೀಲಂಕಾ ತಂಡವನ್ನು ಕೇವಲ 55 ರನ್​ಗಳಿಗೆ ಆಲೌಟ್ ಮಾಡಿ ಟೀಮ್ ಇಂಡಿಯಾ 302 ರನ್​ಗಳ ಬೃಹತ್ ಅಂತರದ ಜಯ ಸಾಧಿಸಿತು.

ಆಸ್ಟ್ರೇಲಿಯಾ vs ಅಫ್ಘಾನಿಸ್ತಾನ್: ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ್ 5 ವಿಕೆಟ್ ಕಳೆದುಕೊಂಡು 291 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 91 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಗ್ಲೆನ್ ಮ್ಯಾಕ್ಸ್​ವೆಲ್ ಅವರ ದ್ವಿಶತಕದ (201) ನೆರವಿನಿಂದ ರೋಚಕ ಜಯ ಸಾಧಿಸಿತ್ತು.

ಅಂದರೆ ಇಲ್ಲಿ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 350+ ಸ್ಕೋರ್​ಗಳಿಸಿದರೆ, ಒಂದು ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ದ ಅಫ್ಘಾನಿಸ್ತಾನ್ 291 ರನ್ ಪೇರಿಸಿದೆ. ಅಷ್ಟೇ ಅಲ್ಲದೆ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಒಂದು ಹಂತದವರೆಗೆ ಕಟ್ಟಿ ಹಾಕುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿತ್ತು.

ಕೇವಲ 91 ರನ್​ಗಳಿಗೆ 7 ವಿಕೆಟ್ ಉರುಳಿಸಿ ಪಂದ್ಯವನ್ನು ಗೆಲ್ಲುವತ್ತ ಹೊರಟಿದ್ದ ಅಫ್ಘಾನ್ ಪಾಲಿಗೆ ಕಂಟಕವಾಗಿದ್ದು ಗ್ಲೆನ್ ಮ್ಯಾಕ್ಸ್​ವೆಲ್. ಈ ಪಂದ್ಯದಲ್ಲಿ ದ್ವಿಶತಕ ಸಿಡಿಸುವ ಮೂಲಕ ಮ್ಯಾಕ್ಸ್​ವೆಲ್ ಅಫ್ಘಾನಿಸ್ತಾನ್ ತಂಡದ ಗೆಲುವನ್ನು ಕಸಿದುಕೊಂಡಿದ್ದರು.

ಇದನ್ನೂ ಓದಿ: ದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮುಂದಿದೆ ಮೂರು ವಿಶ್ವ ದಾಖಲೆಗಳು

ಆಸ್ಟ್ರೇಲಿಯಾ ತಂಡದ ಈ ಒಂದು ಗೆಲುವನ್ನು ಹೊರತುಪಡಿಸಿದರೆ, ಉಳಿದ ಮೂರು ಮ್ಯಾಚ್​ಗಳಲ್ಲೂ ಮೊದಲು ಬ್ಯಾಟ್ ಮಾಡಿದ ತಂಡವೇ ಗೆದ್ದಿದೆ. ಅದರಲ್ಲೂ ಮೊದಲು ಬ್ಯಾಟಿಂಗ್ ಮಾಡಿದ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಮೊದಲ ಸೆಮಿಫೈನಲ್​ನಲ್ಲಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡುವುದು ಖಚಿತ ಎಂದೇ ಹೇಳಬಹುದು.

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್