AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟೀಂ ಇಂಡಿಯಾಗೆ ಬೇರೆ ಬಾಲ್ ನೀಡಲಾಗುತ್ತಿದೆ’; ಪಾಕ್ ಮಾಜಿ ಆಟಗಾರನ ಆರೋಪಕ್ಕೆ ವಾಸಿಂ ಅಕ್ರಂ ಸ್ಪಷ್ಟನೆ

ICC World Cup 2023: ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಇತರ ತಂಡಗಳಿಗೆ ಹೊಲಿಸಿದರೆ ಹೆಚ್ಚು ಸೀಮ್ ಮತ್ತು ಸ್ವಿಂಗ್ ಪಡೆಯುವ ಚೆಂಡುಗಳನ್ನು ಪಡೆಯುತ್ತಿದೆ. ಹೀಗಾಗಿಯೇ ಟೀಂ ಇಂಡಿಯಾ ವೇಗಿಗಳು ಪರಿಣಾಮಕಾರಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ರಝಾ ಅವರ ಹೇಳಿಕೆಗೆ ಅವರದ್ದೇ ದೇಶದ ಲೆಜೆಂಡರಿ ನಾಯಕ ವಾಸಿಂ ಅಕ್ರಮ್ ಸರಿಯಾದ ಪ್ರತಿಕ್ರಿಯೆ ನೀಡಿದ್ದಾರೆ.

‘ಟೀಂ ಇಂಡಿಯಾಗೆ ಬೇರೆ ಬಾಲ್ ನೀಡಲಾಗುತ್ತಿದೆ’; ಪಾಕ್ ಮಾಜಿ ಆಟಗಾರನ ಆರೋಪಕ್ಕೆ ವಾಸಿಂ ಅಕ್ರಂ ಸ್ಪಷ್ಟನೆ
ವಾಸಿಂ ಅಕ್ರಮ್, ಹಸನ್ ರಝಾ
ಪೃಥ್ವಿಶಂಕರ
|

Updated on:Nov 04, 2023 | 12:29 PM

Share

2023ರ ವಿಶ್ವಕಪ್‌ನಲ್ಲಿ (ICC World Cup 2023) ಭಾರತೀಯ ಬೌಲರ್‌ಗಳ ಅದ್ಭುತ ಪ್ರದರ್ಶನವನ್ನು ಪಾಕಿಸ್ತಾನದ ಕೆಲವು ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತದೆ. ಶ್ರೀಲಂಕಾ ವಿರುದ್ಧ ಶಮಿ ಮತ್ತು ಸಿರಾಜ್ ಮಾಡಿದ ಮಾರಕ ಬೌಲಿಂಗ್ ನೋಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಝಾ (Hasan Raza ) ಬಾಲಿಶ ಆರೋಪವನ್ನು ಬಿಸಿಸಿಐ ಹಾಗೂ ಐಸಿಸಿ ವಿರುದ್ಧ ಹೊರಿಸಿದ್ದರು. ರಝಾ ಪ್ರಕಾರ, ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಇತರ ತಂಡಗಳಿಗೆ ಹೊಲಿಸಿದರೆ ಹೆಚ್ಚು ಸೀಮ್ ಮತ್ತು ಸ್ವಿಂಗ್ ಪಡೆಯುವ ಚೆಂಡುಗಳನ್ನು ನೀಡಲಾಗುತ್ತಿದೆ. ಹೀಗಾಗಿಯೇ ಟೀಂ ಇಂಡಿಯಾ ವೇಗಿಗಳು ಹೆಚ್ಚು ಪರಿಣಾಮಕಾರಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು. ರಝಾ ಅವರ ಈ ಹೇಳಿಕೆ ನಂತರ ಈ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿತ್ತು. ಇದೀಗ ರಝಾ ಅವರ ಹೇಳಿಕೆಗೆ ಅವರದ್ದೇ ದೇಶದ ಲೆಜೆಂಡರಿ ನಾಯಕ ವಾಸಿಂ ಅಕ್ರಮ್ (Wasim Akram) ಪ್ರತಿಕ್ರಿಯೆ ನೀಡಿದ್ದಾರೆ.

ರಝಾ ವಿವಾದಾತ್ಮಕ ಹೇಳಿಕೆ

ಸಿರಾಜ್ ಮತ್ತು ಶಮಿ ಬಳಸುತ್ತಿರುವ ಚೆಂಡುಗಳ ಬಗ್ಗೆ ಐಸಿಸಿ ತನಿಖೆ ನಡೆಸಬೇಕು ಎಂದು ಹಸನ್ ರಝಾ ಪಾಕಿಸ್ತಾನದ ಸುದ್ದಿವಾಹಿನಿಯೊಂದರಲ್ಲಿ ಮಾತನಾಡುವಾಗ ಹೇಳಿದ್ದರು. ಈ ಇಬ್ಬರು ಬೌಲರ್‌ಗಳು ಅಲನ್ ಡೊನಾಲ್ಡ್ ಮತ್ತು ಎನ್‌ಟಿನಿಯಂತೆ ಅಪಾಯಕಾರಿಯಾಗಿದ್ದಾರೆ. ಟೀಂ ಇಂಡಿಯಾ ಬ್ಯಾಟಿಂಗ್ ಮಾಡುವಾಗ ಆ ಪಿಚ್, ಬ್ಯಾಟಿಂಗ್ ಪಿಚ್ ಅನಿಸುತ್ತದೆ. ಆದರೆ ಶಮಿ ಹಾಗೂ ಸಿರಾಜ್ ಬೌಲಿಂಗ್​ಗೆ ಇಳಿದಾಗ ಆ ಪಿಚ್, ಬೌಲಿಂಗ್ ಪಿಚ್ ಆಗುತ್ತದೆ. ಹೀಗಾಗಿ ಟೀಂ ಇಂಡಿಯಾ ಬೇರೆಯದ್ದೆ ಚೆಂಡನ್ನು ಉಪಯೋಗಿಸುತ್ತಿದೆ ಎಂದು ರಾಝಾ ಆರೋಪ ಮಾಡಿದ್ದರು.

ವಾಸಿಂ ಅಕ್ರಮ್ ನೀಡಿದ ಉತ್ತರವೇನು?

ರಝಾ ಅವರ ಈ ಭಾಲಿಶ ಹೇಳಿಕೆಯ ನಂತರ, ಪಾಕಿಸ್ತಾನದ ಹಿರಿಯ ಕ್ರಿಕೆಟಿಗರು ರಾಝಾ ಅವರನ್ನು ಟೀಕಿಸಿದ್ದರು. ಇದೀಗ ರಝಾ ಅವರ ಹೇಳಿಕೆಗೆ ಮಾಜಿ ಕ್ರಿಕೆಟಿಗರಾದ ವಾಸಿಂ ಅಕ್ರಮ್ ಪ್ರತಿಕ್ರಿಯಿಸಿದ್ದು, ನೀವು ನಿಮ್ಮಗೆ ಮಾತ್ರವಲ್ಲದೆ ನಮಗೂ ಮುಜುಗರವನ್ನುಂಟು ಮಾಡುತ್ತಿದ್ದೀರಿ. ನೋಡಿ, ಇದು ಸರಳ ವಿಚಾರ. ಪಂದ್ಯ ಆರಂಭಕ್ಕೂ ಮೊದಲು ಅಂಪೈರ್​ಗಳು 12 ಚೆಂಡುಗಳಿರುವ ಬಾಕ್ಸ್‌ನೊಂದಿಗೆ ಮೊದಲು ಬೌಲಿಂಗ್ ಮಾಡುವ ತಂಡದ ಬಳಿಗೆ ಹೋಗುತ್ತಾರೆ. ಈ ವೇಳೆ ಬೌಲಿಂಗ್ ಮಾಡುವ ತಂಡದ ಬೌಲರ್​ಗಳು ತಮ್ಮ ಆದ್ಯತೆಗೆ ಅನುಗುಣವಾಗಿ ಎರಡು ಚೆಂಡುಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಉಳಿದ ಎಂಟು ಚೆಂಡುಗಳನ್ನು ಅಂಪೈರ್​ಗಳು ಡ್ರೆಸ್ಸಿಂಗ್ ಕೋಣೆಗೆ ಕೊಂಡೊಯ್ಯುತ್ತಾರೆ. ಆ ಬಳಿಕ ಮೊದಲು ಬ್ಯಾಟಿಂಗ್ ಮಾಡಿದ ತಂಡ ಬೌಲಿಂಗ್​ಗೆ ಇಳಿದಾಗ ಅವರಿಗೂ ಇದೇ ಕ್ರಮವನ್ನು ಅನುಸರಿಸಲಾಗುತ್ತದೆ. ಇಲ್ಲಿಯೂ ಸಹ ಬೌಲಿಂಗ್ ಮಾಡುವ ತಂಡದ ಬೌಲರ್​ಗಳು ತಮ್ಮ ಆದ್ಯತೆಗೆ ಅನುಗುಣವಾಗಿ ಎರಡು ಚೆಂಡುಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಬಾಕ್ಸ್​ನಲ್ಲಿ ಉಳಿದ ಚೆಂಡುಗಳನ್ನು ನಾಲ್ಕನೇ ಅಂಪೈರ್‌ಗೆ ಹಸ್ತಾಂತರಿಸುತ್ತಾರೆ, ಇತರ ಪಂದ್ಯದ ಅಧಿಕಾರಿಗಳ ಮುಂದೆ ಇದೆಲ್ಲವೂ ನಡೆಯುತ್ತದೆ. ಹೀಗಾಗಿ ಟೀಂ ಇಂಡಿಯಾ ಬೌಲರ್​ಗಳಿಗೆ ಬೇರೆಯದ್ದೆ ಚೆಂಡುಗಳನ್ನು ನೀಡಲಾಗುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದ ಅಕ್ರಮ್ ಹೇಳಿದ್ದಾರೆ.

ಭಾರತದ ಬೌಲರ್‌ಗಳನ್ನು ಹೊಗಳಲೇಬೇಕು

ಆರೋಪಕ್ಕೆ ಸ್ಪಷ್ಟನೆ ನೀಡಿದ ಬಳಿಕ ಟೀಂ ಇಂಡಿಯಾ ವೇಗಿಗಳನ್ನು ಹೊಗಳಿರುವ ಅಕ್ರಮ್, ಭಾರತೀಯ ಬೌಲರ್‌ಗಳನ್ನು ಮೆಚ್ಚಲೇಬೇಕು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಈ ಮೂವರು ವೇಗಿಗಳು ನಮ್ಮ ತಂಡದ ಬೌಲರ್​ಗಳಿಗಿಂತ ಮುಂದಿದ್ದಾರೆ. ನಮ್ಮ ದೇಶ ಸೇರಿದಂತೆ ಇತರ ದೇಶಗಳ ಬೌಲರ್​ಗಳಿಗಿಂತ ಭಾರತದ ವೇಗಿಗಳು ಚೆಂಡಿನ ರಫ್ ಸೈಡ್ ಹಾಗೂ ಶೈನಿ ಸೈಡಿನ ಬಗ್ಗೆ ಹೆಚ್ಚುವರಿಯಾಗಿ ಏನನ್ನಾದರೂ ಕಲಿತಿರಬಹುದು ಎಂದು ನಾನು ಭಾವಿಸುತ್ತೇನೆ. ಹಾಗಾಗಿಯೇ ಭಾರತದ ವೇಗಿಗಳು ಇತರ ತಂಡದ ವೇಗಿಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿರಬಹುದು ಎಂದು ಅಕ್ರಮ್ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Sat, 4 November 23

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ