AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: 3 ಗೆಲುವು, ಸತತ ಸೋಲು: ಝಿಂಬಾಬ್ವೆ ತಂಡದ ವಿಶ್ವಕಪ್​ ಕನಸು ಭಗ್ನ..!

ICC World Cup 2023: 2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು.

ICC World Cup 2023: 3 ಗೆಲುವು, ಸತತ ಸೋಲು: ಝಿಂಬಾಬ್ವೆ ತಂಡದ ವಿಶ್ವಕಪ್​ ಕನಸು ಭಗ್ನ..!
Zimbabwe
TV9 Web
| Edited By: |

Updated on: Jul 04, 2023 | 10:07 PM

Share

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವ ಫೇವರೇಟ್​ ತಂಡಗಳಲ್ಲಿ ಗುರುತಿಸಿಕೊಂಡಿದ್ದ ಝಿಂಬಾಬ್ವೆ ಇದೀಗ ಹೊರಬಿದ್ದಿದೆ. ಅರ್ಹತಾ ಸುತ್ತಿನ ಮೊದಲ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಝಿಂಬಾಬ್ವೆ ಸೂಪರ್ ಸಿಕ್ಸ್ ಹಂತದಲ್ಲಿ ಮುಗ್ಗರಿಸಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಸ್ಕಾಟ್​ಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ 31 ರನ್​ಗಳಿಂದ ಸೋಲನುಭವಿಸಿದೆ. ಇದರೊಂದಿಗೆ ಭಾರತದಲ್ಲಿ ಏಕದಿನ ವಿಶ್ವಕಪ್​ ಆಡುವ ಕನಸು ಕೂಡ ಕಮರಿದೆ.

2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು. ಆದರೆ ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಸ್ಕಾಟ್​ಲ್ಯಾಂಡ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ.

ಅತ್ತ ಇದೀಗ ಸ್ಕಾಟ್​ಲ್ಯಾಂಡ್ ಹಾಗೂ ನೆದರ್​ಲ್ಯಾಂಡ್ಸ್ ನಡುವೆ ಕೊನೆಯ ಪಂದ್ಯ ನಡೆಯಲಿದ್ದು, ಇದರಲ್ಲಿ ಸ್ಕಾಟ್​ಲ್ಯಾಂಡ್ ಗೆದ್ದರೆ ವಿಶ್ವಕಪ್​ಗೆ ಅರ್ಹತೆ ಪಡೆಯಲಿದೆ. ಆದರೆ ಇಲ್ಲಿ ನೆದರ್​ಲ್ಯಾಂಡ್ಸ್ ಗೆದ್ದರೂ ಸ್ಕಾಟ್​ಲ್ಯಾಂಡ್​ಗಿಂತ ಹೆಚ್ಚಿನ ನೆಟ್​ ರನ್​ ರೇಟ್ ಪಡೆದರೆ ಮಾತ್ರ ವಿಶ್ವಕಪ್​ಗೆ ಅರ್ಹತೆ ಪಡೆಯಬಹುದು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೆ 15 ಸದಸ್ಯರ ಭಾರತ ಸಂಭಾವ್ಯ ತಂಡ ಹೀಗಿದೆ

ಏಕೆಂದರೆ ಸ್ಕಾಟ್​ಲ್ಯಾಂಡ್ ಒಟ್ಟು 6 ಅಂಕಗಳನ್ನು ಹೊಂದಿದ್ದು, ನೆದರ್​ಲ್ಯಾಂಡ್ಸ್ 4 ಅಂಕಗಳನ್ನು ಕಲೆಹಾಕಿದೆ. ಇದೀಗ ಕೊನೆಯ ಪಂದ್ಯದಲ್ಲಿ ನೆದರ್​ಲ್ಯಾಂಡ್ಸ್ ಗೆದ್ದರೆ ಒಟ್ಟು 6 ಅಂಕ ಪಡೆದರೂ, ಹೆಚ್ಚಿನ ನೆಟ್​ ರನ್ ರೇಟ್ ಹೊಂದಿದ್ದರೆ ಮಾತ್ರ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯಬಹುದು. ಹೀಗಾಗಿ ಅರ್ಹತಾ ಸುತ್ತಿನ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ