AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: 3 ಗೆಲುವು, ಸತತ ಸೋಲು: ಝಿಂಬಾಬ್ವೆ ತಂಡದ ವಿಶ್ವಕಪ್​ ಕನಸು ಭಗ್ನ..!

ICC World Cup 2023: 2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು.

ICC World Cup 2023: 3 ಗೆಲುವು, ಸತತ ಸೋಲು: ಝಿಂಬಾಬ್ವೆ ತಂಡದ ವಿಶ್ವಕಪ್​ ಕನಸು ಭಗ್ನ..!
Zimbabwe
TV9 Web
| Edited By: |

Updated on: Jul 04, 2023 | 10:07 PM

Share

ICC World Cup 2023: ಈ ಬಾರಿಯ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವ ಫೇವರೇಟ್​ ತಂಡಗಳಲ್ಲಿ ಗುರುತಿಸಿಕೊಂಡಿದ್ದ ಝಿಂಬಾಬ್ವೆ ಇದೀಗ ಹೊರಬಿದ್ದಿದೆ. ಅರ್ಹತಾ ಸುತ್ತಿನ ಮೊದಲ ಮೂರು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಝಿಂಬಾಬ್ವೆ ಸೂಪರ್ ಸಿಕ್ಸ್ ಹಂತದಲ್ಲಿ ಮುಗ್ಗರಿಸಿದೆ. ಅದರಲ್ಲೂ ನಿರ್ಣಾಯಕವಾಗಿದ್ದ ಸ್ಕಾಟ್​ಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ 31 ರನ್​ಗಳಿಂದ ಸೋಲನುಭವಿಸಿದೆ. ಇದರೊಂದಿಗೆ ಭಾರತದಲ್ಲಿ ಏಕದಿನ ವಿಶ್ವಕಪ್​ ಆಡುವ ಕನಸು ಕೂಡ ಕಮರಿದೆ.

2015 ರಲ್ಲಿ ಆಸ್ಟ್ರೇಲಿಯಾ-ನ್ಯೂಝಿಲ್ಯಾಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಝಿಂಬಾಬ್ವೆ ಈ ಬಾರಿ ಕೂಡ ಅರ್ಹತೆ ಪಡೆಯುವ ವಿಶ್ವಾಸದಲ್ಲಿತ್ತು. ಆದರೆ ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಸ್ಕಾಟ್​ಲ್ಯಾಂಡ್ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿದೆ.

ಅತ್ತ ಇದೀಗ ಸ್ಕಾಟ್​ಲ್ಯಾಂಡ್ ಹಾಗೂ ನೆದರ್​ಲ್ಯಾಂಡ್ಸ್ ನಡುವೆ ಕೊನೆಯ ಪಂದ್ಯ ನಡೆಯಲಿದ್ದು, ಇದರಲ್ಲಿ ಸ್ಕಾಟ್​ಲ್ಯಾಂಡ್ ಗೆದ್ದರೆ ವಿಶ್ವಕಪ್​ಗೆ ಅರ್ಹತೆ ಪಡೆಯಲಿದೆ. ಆದರೆ ಇಲ್ಲಿ ನೆದರ್​ಲ್ಯಾಂಡ್ಸ್ ಗೆದ್ದರೂ ಸ್ಕಾಟ್​ಲ್ಯಾಂಡ್​ಗಿಂತ ಹೆಚ್ಚಿನ ನೆಟ್​ ರನ್​ ರೇಟ್ ಪಡೆದರೆ ಮಾತ್ರ ವಿಶ್ವಕಪ್​ಗೆ ಅರ್ಹತೆ ಪಡೆಯಬಹುದು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೆ 15 ಸದಸ್ಯರ ಭಾರತ ಸಂಭಾವ್ಯ ತಂಡ ಹೀಗಿದೆ

ಏಕೆಂದರೆ ಸ್ಕಾಟ್​ಲ್ಯಾಂಡ್ ಒಟ್ಟು 6 ಅಂಕಗಳನ್ನು ಹೊಂದಿದ್ದು, ನೆದರ್​ಲ್ಯಾಂಡ್ಸ್ 4 ಅಂಕಗಳನ್ನು ಕಲೆಹಾಕಿದೆ. ಇದೀಗ ಕೊನೆಯ ಪಂದ್ಯದಲ್ಲಿ ನೆದರ್​ಲ್ಯಾಂಡ್ಸ್ ಗೆದ್ದರೆ ಒಟ್ಟು 6 ಅಂಕ ಪಡೆದರೂ, ಹೆಚ್ಚಿನ ನೆಟ್​ ರನ್ ರೇಟ್ ಹೊಂದಿದ್ದರೆ ಮಾತ್ರ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯಬಹುದು. ಹೀಗಾಗಿ ಅರ್ಹತಾ ಸುತ್ತಿನ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ