ICC World Cup 2023: ಏಕದಿನ ವಿಶ್ವಕಪ್​​ಗೆ ಅರ್ಹತೆ ಪಡೆದುಕೊಂಡ ಶ್ರೀಲಂಕಾ

ICC World Cup Qualifiers 2023: ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದೆ.

ICC World Cup 2023: ಏಕದಿನ ವಿಶ್ವಕಪ್​​ಗೆ ಅರ್ಹತೆ ಪಡೆದುಕೊಂಡ ಶ್ರೀಲಂಕಾ
Sri Lanka Team
Follow us
| Updated By: ಝಾಹಿರ್ ಯೂಸುಫ್

Updated on: Jul 02, 2023 | 6:10 PM

ICC World Cup Qualifiers 2023: ಹರಾರೆಯಲ್ಲಿ ನಡೆದ ಏಕದಿನ ವಿಶ್ವಕಪ್ (World Cup 2023) ಅರ್ಹತಾ ಸುತ್ತಿನ ಪಂದ್ಯದಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸುವ ಮೂಲಕ ಶ್ರೀಲಂಕಾ (Sri lanka) ತಂಡವು ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಝಿಂಬಾಬ್ವೆ ವಿರುದ್ಧ ನಡೆದ ಸೂಪರ್ ಸಿಕ್ಸ್​ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡ ಪಾಲ್ಗೊಳ್ಳುವುದು ಖಚಿತವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದುಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು ಮಹೀಶ್ ತೀಕ್ಷಣ ಸ್ಪಿನ್ ದಾಳಿಗೆ ತತ್ತರಿಸಿತು. ಕೇವಲ 30 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿದ್ದ ಝಿಂಬಾಬ್ವೆಗೆ ಈ ಹಂತದಲ್ಲಿ ನಾಯಕ ಸೀನ್ ವಿಲಿಯಮ್ಸ್ ಹಾಗೂ ಸಿಕಂದರ್ ರಾಝ ಆಸರೆಯಾದರು. 57 ಎಸೆತಗಳನ್ನು ಎದುರಿಸಿದ ವಿಲಿಯಮ್ಸ್ 56 ರನ್​ ಬಾರಿಸಿ ಮಿಂಚಿದರು. ಈ ಹಂತದಲ್ಲಿ ತೀಕ್ಷಣ ಎಸೆದ ದೂಸ್ರಾ ಎಸೆತವನ್ನು ಗುರುತಿಸುವಲ್ಲಿ ಎಡವಿದ ವಿಲಿಯಮ್ಸ್ ಕ್ಲೀನ್ ಬೌಲ್ಡ್ ಆಗಿ ಹೊರ ನಡೆದರು.

ಇನ್ನು 51 ಎಸೆತಗಳಲ್ಲಿ 31 ರನ್​ ಬಾರಿಸಿ ತಂಡಕ್ಕೆ ಆಸರೆಯಾಗಿದ್ದ ಸಿಕಂದರ್ ರಾಝರನ್ನು ದುಸನ್ ಶಾನಕ ಔಟ್ ಮಾಡಿದರು. ಈ ಮೂಲಕ ಮತ್ತೆ ಮೇಲುಗೈ ಸಾಧಿಸಿದ ಲಂಕಾ ಬೌಲರ್​ಗಳು ಝಿಂಬಾಬ್ವೆ ತಂಡವನ್ನು 32.2 ಓವರ್​ಗಳಲ್ಲಿ 165 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಪರ 8.2 ಓವರ್ ಎಸೆದ ಮಹೀಶ್ ತೀಕ್ಷಣ 25 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ದಿಲ್ಶಾನ್ ಮಧುಶಂಕ 5 ಓವರ್​ಗಳಲ್ಲಿ 15 ರನ್ ನೀಡಿ 3 ವಿಕೆಟ್ ಪಡೆದರು.

ಇನ್ನು 166 ರನ್​ಗಳ ಸುಲಭ ಗುರಿ ಪಡೆದ ಶ್ರೀಲಂಕಾ ತಂಡಕ್ಕೆ ಆರಂಭಿಕರಾದ ಪಾತುಂ ನಿಸ್ಸಾಂಕ ಹಾಗೂ ದಿಮುತ್ ಕರುಣರತ್ನೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್​ಗೆ 103 ರನ್​ಗಳ ಜೊತೆಯಾಟವಾಡಿದ ಈ ಜೋಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಈ ಹಂತದಲ್ಲಿ 30 ರನ್​ಗಳಿಸಿದ್ದ ದಿಮುತ್ ಕರುಣರತ್ನೆ ರಿಚರ್ಡ್ ನಾಗರವ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದರು. ಮತ್ತೊಂದೆಡೆ ಆಕರ್ಷಕ ಅರ್ಧಶತಕ ಬಾರಿಸಿದ ನಿಸ್ಸಾಂಕ ತಂಡದ ಗೆಲುವನ್ನು ಖಚಿತಪಡಿಸಿದರು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಿಂದ ವೆಸ್ಟ್ ಇಂಡೀಸ್ ಔಟ್..!

ಅಂತಿಮವಾಗಿ ಪಾತುಂ ನಿಸ್ಸಾಂಕ (101) ಭರ್ಜರಿ ಶತಕ ಸಿಡಿಸಿದರೆ, ಕುಸಾಲ್ ಮೆಂಡಿಸ್ (25) ಉತ್ತಮ ಸಾಥ್ ನೀಡಿದರು. ಇದರೊಂದಿಗೆ 33.1 ಓವರ್​ಗಳಲ್ಲಿ ಶ್ರೀಲಂಕಾ ತಂಡವು ಗುರಿ ಮುಟ್ಟಿತು. ಈ ಗೆಲುವಿನೊಂದಿಗೆ ಅಕ್ಟೋಬರ್ 5 ರಿಂದ ಭಾರತದಲ್ಲಿ ಶುರುವಾಗಲಿರುವ ಏಕದಿನ ವಿಶ್ವಕಪ್​ಗೆ ಶ್ರೀಲಂಕಾ ತಂಡವು ಅರ್ಹತೆ ಪಡೆದುಕೊಂಡಿದೆ.

ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆದಿರುವ ತಂಡಗಳು:

  • 1- ಭಾರತ
  • 2- ಪಾಕಿಸ್ತಾನ್
  • 3- ಆಸ್ಟ್ರೇಲಿಯಾ
  • 4- ಸೌತ್ ಆಫ್ರಿಕಾ
  • 5- ನ್ಯೂಝಿಲ್ಯಾಂಡ್
  • 6- ಇಂಗ್ಲೆಂಡ್
  • 7- ಬಾಂಗ್ಲಾದೇಶ್
  • 8- ಅಫ್ಘಾನಿಸ್ತಾನ್
  • 9- ಶ್ರೀಲಂಕಾ
  • 10-

ಈ ಬಾರಿಯ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದ್ದು, ಇದರಲ್ಲಿ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದೆ. ಇದೀಗ ಅರ್ಹತಾ ಸುತ್ತಿನ ಮೂಲಕ ಶ್ರೀಲಂಕಾ ತಂಡವು 9ನೇ ತಂಡವಾಗಿ ಎಂಟ್ರಿ ಕೊಟ್ಟಿದೆ. ಇನ್ನು ಒಂದು ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಅರ್ಹತಾ ಸುತ್ತಿನಲ್ಲಿರುವ ಝಿಂಬಾಬ್ವೆ ಹಾಗೂ ಸ್ಕಾಟ್​ಲ್ಯಾಂಡ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ