AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮಂತ ಕೋಚ್ ನಮಗೆ ಬೇಡ: ಗಂಭೀರ್​ನ ಅಣಕಿಸಿದ ​ಐಸ್‌ಲ್ಯಾಂಡ್ ಕ್ರಿಕೆಟ್

Team India: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಐರ್ಲೆಂಡ್ ತಂಡ ಭಾರತದ ವಿರುದ್ಧ ಜಯ ಸಾಧಿಸಿದೆ. ಅದು ಕೂಡ ಎರಡು ಪಂದ್ಯಗಳಲ್ಲಿ. ಈ ಎರಡು ಗೆಲುವುಗಳೊಂದಿಗೆ ಐರ್ಲೆಂಡ್ ತಂಡವು ಚೊಚ್ಚಲ ಬಾರಿ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದುಕೊಂಡಿದೆ.

ನಿಮ್ಮಂತ ಕೋಚ್ ನಮಗೆ ಬೇಡ: ಗಂಭೀರ್​ನ ಅಣಕಿಸಿದ ​ಐಸ್‌ಲ್ಯಾಂಡ್ ಕ್ರಿಕೆಟ್
Gautam GambhirImage Credit source: AFP
ಝಾಹಿರ್ ಯೂಸುಫ್
|

Updated on: Jun 29, 2026 | 12:36 PM

Share

ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ 34 ರನ್​ಗಳಿಂದ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 1 ರನ್​ನಿಂದ ಸೋಲೊಪ್ಪಿಕೊಂಡಿದೆ. ಈ ಎರಡು ಸೋಲುಗಳೊಂದಿಗೆ ಭಾರತ ತಂಡವು ಇದೇ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸರಣಿ ಸೋತಂತಾಗಿದೆ. ಈ ಸೋಲಿನ ಬೆನ್ನಲ್ಲೇ ಐಸ್‌ಲ್ಯಾಂಡ್ ಕ್ರಿಕೆಟ್ ವ್ಯಂಗ್ಯಭರಿತ ಪೋಸ್ಟ್​ವೊಂದು ಹಂಚಿಕೊಂಡು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಕಾಲೆಳೆದಿದ್ದಾರೆ.

ಐಸ್‌ಲ್ಯಾಂಡ್ ಕ್ರಿಕೆಟ್ ಪೋಸ್ಟ್:

ಕ್ರಿಕೆಟ್ ಅಂಗಳದಲ್ಲಿ ನಡೆಯುವ ಕೆಲ ಸನ್ನಿವೇಶಗಳಿಗೆ ತಮ್ಮ ಚುರುಕಾದ ಹಾಸ್ಯಪ್ರಜ್ಞೆಯ ಮೂಲಕ ಪ್ರತಿಕ್ರಿಯಿಸುವ ಐಸ್‌ಲ್ಯಾಂಡ್ ಕ್ರಿಕೆಟ್ ಸೋಷಿಯಲ್ ಮೀಡಿಯಾ ಖಾತೆಯ ಅಡ್ಮಿನ್ ಈ ಬಾರಿ ಗುರಿಯಾಗಿಸಿದ್ದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರನ್ನು.

“ನಾವು ಗೌತಮ್ ಗಂಭೀರ್ ಅವರನ್ನು ನಮ್ಮ ಕೋಚಿಂಗ್ ಸಿಬ್ಬಂದಿಗೆ ಸೇರಿಸಿಕೊಳ್ಳಲು ಬಯಸುವುದಿಲ್ಲ ಎಂದು ಖಚಿತಪಡಿಸುತ್ತೇವೆ. ಆದರೆ ಅವರಲ್ಲಿ ಅದ್ಭುತ ಪ್ರತಿಭೆಯಂತೂ ಇದೆ. ಅಂತಹ ಸ್ಟಾರ್ ಭಾರತೀಯ ಆಟಗಾರರನ್ನು ಇಟ್ಟುಕೊಂಡು, ಐರ್ಲೆಂಡ್‌ನಲ್ಲಿ ಇಂತಹ ರಿಸಲ್ಟ್ ತರುವುದು ನಿಜಕ್ಕೂ ಸಾಮಾನ್ಯ ವಿಷಯವಲ್ಲ!” ಎಂದು ಐಸ್​ಲ್ಯಾಂಡ್ ಕ್ರಿಕೆಟ್, ಟೀಮ್ ಇಂಡಿಯಾ​ ಕೋಚ್​ ಅನ್ನು ಕಾಲೆಳೆದಿದ್ದಾರೆ.

ಇತಿಹಾಸ ಬರೆದ ಐರ್ಲೆಂಡ್

  • ಚಾರಿತ್ರಿಕ ಕ್ಲೀನ್ ಸ್ವೀಪ್: ಬೆಲ್‌ಫಾಸ್ಟ್‌ನ ಸ್ಟೋರ್ಮಾಂಟ್ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಎರಡೂ ಪಂದ್ಯಗಳನ್ನು ಗೆದ್ದ ಐರ್ಲೆಂಡ್, ಭಾರತದ ವಿರುದ್ಧ ಮೊದಲ ಬಾರಿಗೆ ದ್ವಿಪಕ್ಷೀಯ ಸರಣಿ ಜಯಿಸಿ ಇತಿಹಾಸ ಬರೆದಿದೆ.
  • ವಿಶ್ವ ದಾಖಲೆಗೆ ಬ್ರೇಕ್: ಈ ಗೆಲುವಿನೊಂದಿಗೆ ಐರ್ಲೆಂಡ್ ತಂಡವು ಭಾರತ ತಂಡದ ವಿಶ್ವ ದಾಖಲೆಯ ದ್ವಿಪಕ್ಷೀಯ ಸರಣಿ ಗೆಲುವಿಗೆ ಬ್ರೇಕ್ ಹಾಕಿದೆ. ಅಂದರೆ ಟೀಮ್ ಇಂಡಿಯಾ ಕಳೆದ 3 ವರ್ಷಗಳಲ್ಲಿ ಸತತವಾಗಿ ಬರೋಬ್ಬರಿ 16 ಸರಣಿ ಗೆದ್ದುಕೊಂಡಿತ್ತು. ಇದೀಗ ಈ ಸರಣಿ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

ಫ್ಯಾನ್ಸ್ ‘ಗಂಭೀರ’ ಆಕ್ರೋಶ:

ಟೀಮ್ ಇಂಡಿಯಾದ  ಹೀನಾಯ ಪ್ರದರ್ಶನಕ್ಕೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೇ ಕಾರಣ ಎಂದು ಕ್ರಿಕೆಟ್ ಪ್ರೇಮಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಗಂಭೀರ್ ಅವರ ಅತಿಯಾದ ಪ್ರಯೋಗಗಳು,  ಆಟಗಾರರ ಆಯ್ಕೆ ಹಾಗೂ ಸ್ಪೆಷಲಿಸ್ಟ್ ಬ್ಯಾಟರ್‌ಗಳ ಬದಲಿಗೆ ಅತಿಯಾಗಿ ಆಲ್‌ರೌಂಡರ್‌ಗಳ ಮೇಲೆ ನಂಬಿಕೆ ಇಟ್ಟಿದ್ದೇ ಈ ಐತಿಹಾಸಿಕ ಮುಖಭಂಗಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಟೀಮ್ ಇಂಡಿಯಾದ ವಿಶ್ವ ದಾಖಲೆಯ ನಾಗಾಲೋಟಕ್ಕೆ ಬ್ರೇಕ್!

ಒಟ್ಟಾರೆಯಾಗಿ ಟೀಮ್ ಇಂಡಿಯಾ ಅನಿರೀಕ್ಷಿತವಾಗಿ ಐರ್ಲೆಂಡ್ ವಿರುದ್ಧ ಸೋತಿದೆ. ಈ ಸೋಲಿನ ಬೆನ್ನಲ್ಲೇ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಲು ಸಜ್ಜಾಗಿದೆ. ಈ ಸರಣಿ ಮೂಲಕ ಟೀಮ್ ಇಂಡಿಯಾ ಟೀಕಾಗಾರರಿಗೆ ಪ್ರತ್ಯುತ್ತರ ನೀಡಲಿದ್ದಾರಾ ಕಾದು ನೋಡಬೇಕಿದೆ.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ