AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಆಯ್ಕೆ ಮಾಡಲಿ, ನಾನಂತು ರೆಡಿ ಇದ್ದೇನೆ: ಭುವನೇಶ್ವರ್ ಕುಮಾರ್

Bhuvneshwar Kumar: ಟೀಮ್ ಇಂಡಿಯಾದಿಂದ ಕರೆ ಬಂದರೆ ನಾನು ಖಂಡಿತವಾಗಿಯೂ ಆಡಲು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ತಮ್ಮ ಅಂತರರಾಷ್ಟ್ರೀಯ ಪುನರಾಗಮನದ ಆಸೆಯನ್ನು ಬಿಚ್ಚಿಟ್ಟಿದ್ದಾರೆ. ಕಳೆದ ಕೆಲವು ಸಮಯದಿಂದ ರಾಷ್ಟ್ರೀಯ ತಂಡದಿಂದ ದೂರ ಉಳಿದಿದ್ದರೂ, ಮುಂಬರುವ ಏಕದಿನ ವಿಶ್ವಕಪ್​ಗೂ ಮುನ್ನ ಭಾರತದ ಪರ ಮತ್ತೆ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮೊದಲು ಆಯ್ಕೆ ಮಾಡಲಿ, ನಾನಂತು ರೆಡಿ ಇದ್ದೇನೆ: ಭುವನೇಶ್ವರ್ ಕುಮಾರ್
Bhuvneshwar KumarImage Credit source: IPL
ಝಾಹಿರ್ ಯೂಸುಫ್
|

Updated on: Aug 10, 2026 | 10:28 AM

Share

ಭಾರತ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮತ್ತೊಮ್ಮೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಸಿದ್ಧ ಎಂದು ಹೇಳಿದ್ದಾರೆ. ಯುಪಿ ಟಿ20 (UP T20) ಲೀಗ್‌ಗೂ ಮುನ್ನ ಲಕ್ನೋ ಫಾಲ್ಕನ್ಸ್ ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ 36 ವರ್ಷದ ಈ ಸ್ವಿಂಗ್ ಮಾಂತ್ರಿಕ, ರಾಷ್ಟ್ರೀಯ ತಂಡಕ್ಕೆ ಮರಳುವ ತಮ್ಮ ಇಂಗಿತವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.

ಆಯ್ಕೆಗಾರರ ನಿರ್ಧಾರಕ್ಕೆ ಕಾಯುತ್ತಿರುವ ‘ಭುವಿ’:

ರಾಷ್ಟ್ರೀಯ ತಂಡಕ್ಕೆ ಮರಳಿ ಆಯ್ಕೆಯಾಗುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಭುವನೇಶ್ವರ್, “ನನಗೆ ಮತ್ತೆ ಕರೆ ಬಂದರೆ ನಾನು ಬೇಡ ಎನ್ನಲು ಹೇಗೆ ಸಾಧ್ಯ? ನಾನು ಆಡಲು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ. ಆದರೆ, ತಂಡದಲ್ಲಿ ಸ್ಥಾನ ಸಿಗುತ್ತದೆಯೇ ಇಲ್ಲವೇ ಎಂಬುದು ಸಂಪೂರ್ಣವಾಗಿ ಆಯ್ಕೆಗಾರರ ಕೈಯಲ್ಲಿದೆ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.

“ಆಯ್ಕೆ ಮಾಡುವುದಾದರೆ, ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ನಾನಂತು ರೆಡಿ ಇದ್ದೇನೆ. ಮೊದಲು ಆಯ್ಕೆ ಮಾಡಲಿ, ಆಯ್ಕೆ ಮಾಡಬೇಡಿ ಎಂದು ನಾನಂತು ಹೇಳಿಲ್ಲ. ಹಾಗೆ ಹೇಳಲು ಹೇಗೆ ಸಾಧ್ಯ. ಹೀಗಾಗಿ ನಾನು ಸಹ ಕಂಬ್ಯಾಕ್ ಅನ್ನು ಎದುರು ನೋಡುತ್ತಿದ್ದೇನೆ” ಎಂದು ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

ಐಪಿಎಲ್ 2026ರ ಭರ್ಜರಿ ಪ್ರದರ್ಶನವೇ ಪ್ರೇರಣೆ:

ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಆಡಿದ್ದ ಭುವನೇಶ್ವರ್ ಕುಮಾರ್, ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು. ಹೊಸ ಚೆಂಡಿನಲ್ಲಿ ಅವರು ತೋರಿದ ಸ್ವಿಂಗ್ ಜಾದೂ, ಅವರು ಇಂದಿಗೂ ವಿಶ್ವದರ್ಜೆಯ ಬೌಲರ್ ಎಂಬುದನ್ನು ಸಾಬೀತುಪಡಿಸಿದೆ. ಇದೇ ಕಾರಣಕ್ಕೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅವರ ಕಂಬ್ಯಾಕ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ಒತ್ತಡವಿಲ್ಲದ ಆಟ, ಮನಸ್ಸಿಗೆ ನೆಮ್ಮದಿ:

ಭಾರತ ತಂಡಕ್ಕೆ ಮರಳುವ ಆಸೆ ಇದ್ದರೂ, ಅದನ್ನೇ ಯೋಚಿಸುತ್ತಾ ತಮಗೆ ತಾವೇ ಒತ್ತಡ ಹೇರಿಕೊಳ್ಳುತ್ತಿಲ್ಲ ಎಂದು ಭುವಿ ಹೇಳಿದ್ದಾರೆ. “ನಾನು ಈಗಾಗಲೇ ಭಾರತದ ಪರ ಆಡುವ ನನ್ನ ಕನಸನ್ನು ನನಸು ಮಾಡಿಕೊಂಡಿದ್ದೇನೆ. ಈಗ ನಾನು ಕೇವಲ ಕ್ರಿಕೆಟ್ ಮೇಲಿನ ಪ್ರೀತಿಗಾಗಿ ಆಡುತ್ತಿದ್ದೇನೆ. ಸದ್ಯ ನನ್ನ ವೃತ್ತಿಜೀವನ ಇರುವ ಸ್ಥಿತಿಯ ಬಗ್ಗೆ ನನಗೆ ತೃಪ್ತಿ ಮತ್ತು ನೆಮ್ಮದಿಯಿದೆ” ಎಂದು ಅವರು ತಮ್ಮ ಬದಲಾದ ಮನಸ್ಥಿತಿಯನ್ನು ಹಂಚಿಕೊಂಡಿದ್ದಾರೆ.

ಅಶ್ವಿನ್ ಹಾಗೂ ಕೈಫ್ ಬೆಂಬಲ!

ಭುವನೇಶ್ವರ್ ಕುಮಾರ್ ಅವರ ಈ ಫಾರ್ಮ್ ನೋಡಿ ಮಾಜಿ ಆಟಗಾರರಾದ ರವಿಚಂದ್ರನ್ ಅಶ್ವಿನ್ ಮತ್ತು ಮೊಹಮ್ಮದ್ ಕೈಫ್ ಕೂಡ ಭುವಿ ಪರ ಧ್ವನಿ ಎತ್ತಿದ್ದಾರೆ. ಮುಂಬರುವ 2027ರ ಏಕದಿನ ವಿಶ್ವಕಪ್‌ ಯೋಜನೆಗೆ ಭುವನೇಶ್ವರ್ ಅವರಂತಹ ಅನುಭವಿ ಬೌಲರ್ ತಂಡಕ್ಕೆ ಅಗತ್ಯವಿದ್ದು, ವಿಶೇಷವಾಗಿ ಸೌತ್ ಆಫ್ರಿಕಾದಂತಹ ಪಿಚ್‌ಗಳಲ್ಲಿ ಅವರ ಸ್ವಿಂಗ್ ಭಾರತಕ್ಕೆ ನೆರವಾಗಲಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: RCB ಮಾಸ್ಟರ್​ಮೈಂಡ್​ಗಳ ರಣತಂತ್ರ ಉಲ್ಟಾ ಪಲ್ಟಾ!

ಮುಂದಿನ ನಡೆ ಏನು?

ಸದ್ಯ ತಮ್ಮ ಫಿಟ್‌ನೆಸ್ ಕಾಯ್ದುಕೊಳ್ಳುವತ್ತ ಗಮನ ಹರಿಸಿರುವ ಭುವನೇಶ್ವರ್ ಕುಮಾರ್, ಯುಪಿ ಟಿ20 ಲೀಗ್‌ನಲ್ಲಿ ಲಕ್ನೋ ಫಾಲ್ಕನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇದಾದ ನಂತರ ಉತ್ತರ ಪ್ರದೇಶ ತಂಡದ ಪರವಾಗಿ ದೇಶಿ ಕ್ರಿಕೆಟ್‌ನ ರೆಡ್-ಬಾಲ್ ಮತ್ತು ವೈಟ್-ಬಾಲ್ ಪಂದ್ಯಾವಳಿಗಳಲ್ಲೂ ಅವರು ಕಣಕ್ಕಿಳಿಯಲಿದ್ದಾರೆ. ಇದರ ನಡುವೆ ಆಯ್ಕೆಗಾರರು ಭುವಿಯನ್ನು ಮತ್ತೆ ಟೀಮ್ ಇಂಡಿಯಾಗೆ ಕರೆತರಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Follow Us
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ HDD ಸಾಥ್
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು