AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಏನಾದ್ರು ಪ್ಲೇಆಫ್​ಗೆ ಹೋದ್ರೆ… ಅಂಬಾಟಿ ರಾಯುಡು ಅಚ್ಚರಿಯ ಹೇಳಿಕೆ

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2025) ಸೀಸನ್​-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ 5 ರಲ್ಲಿ ಗೆಲುವು ದಾಖಲಿಸಿದೆ. ಆರ್​ಸಿಬಿ ಈ 5 ಪಂದ್ಯಗಳನ್ನು ಗೆದ್ದಿರುವುದು ಎದುರಾಳಿಗಳ ತವರು ಮೈದಾನದಲ್ಲಿ ಎಂಬುದು ವಿಶೇಷ.

IPL 2025: RCB ಏನಾದ್ರು ಪ್ಲೇಆಫ್​ಗೆ ಹೋದ್ರೆ... ಅಂಬಾಟಿ ರಾಯುಡು ಅಚ್ಚರಿಯ ಹೇಳಿಕೆ
Rcb - Ambati Rayudu
ಝಾಹಿರ್ ಯೂಸುಫ್
|

Updated on: Apr 22, 2025 | 10:32 AM

Share

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುತ್ತಿದೆ. ಅದರಲ್ಲೂ ತವರಿನಲ್ಲಿ ಸೋಲುತ್ತಿರುವ ಆರ್​ಸಿಬಿ ತಂಡವು ಎದುರಾಳಿಗಳ ತವರು ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನೊಂದಿಗೆ ಆರ್​ಸಿಬಿ ತಂಡವು 8 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ದಾಖಲಿಸಿದೆ.

ಈ ಐದು ಗೆಲುವುಗಳೊಂದಿಗೆ 10 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲುವ ನಿರೀಕ್ಷೆಯಲ್ಲಿದೆ. ಒಂದು ವೇಳೆ ಆರ್​ಸಿಬಿ ಪಡೆ ಇದೇ ಪ್ರದರ್ಶನ ಮುಂದುವರೆಸಿದರೆ, ಅವರು ಪ್ಲೇಆಫ್ ಹಂತಕ್ಕೇರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಹೀಗಂದಿದ್ದು ಮತ್ಯಾರೂ ಅಲ್ಲ, ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಖಾಸಗಿ ಚಾನೆಲ್​ ಚರ್ಚೆಯಲ್ಲಿ ಮಾತನಾಡಿದ ಅಂಬಾಟಿ ರಾಯುಡು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೇ ಪ್ರದರ್ಶನದೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟರೆ ಅವರನ್ನು ತಡೆಯುವುದು ಕಷ್ಟ. ಆರ್​ಸಿಬಿ ಏನಾದ್ರೂ ಪ್ಲೇಆಫ್ ಹಂತಕ್ಕೇರಿದರೆ, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸಿಕೊಳ್ಳಲಿದೆ.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಒಂದು ವೇಳೆ ಆರ್​ಸಿಬಿ ತಂಡವು ತನ್ನ ತವರಿನಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರುವುದು ಸುಲಭವಾಗಲಿದೆ. ಆದರೆ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮೂರು ಪಂದ್ಯ ಸೋತಿರುವುದೇ ಈಗ ಅವರ ದೊಡ್ಡ ಚಿಂತೆ. ಇದಾಗ್ಯೂ ಮುಂದಿನ ಪಂದ್ಯಗಳಲ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಆರ್​ಸಿಬಿ ಗೆಲುವು ದಾಖಲಿಸಿದರೆ, ನಾಕೌಟ್ ಹಂತಕ್ಕೇರುವುದನ್ನು ಎದುರು ನೋಡಬಹುದು.

ಇನ್ನು ಪ್ಲೇಆಫ್ ಹಂತಕ್ಕೇರಿದರೆ, ಆರ್​ಸಿಬಿ ತಂಡವನ್ನು ಫೈನಲ್​ನಲ್ಲಿ ಎದುರು ನೋಡಬಹುದು. ಏಕೆಂದರೆ ಪ್ಲೇಆಫ್‌ ಪಂದ್ಯಗಳು ಹೈದರಾಬಾದ್ ಮತ್ತು ಕೋಲ್ಕತ್ತಾದಲ್ಲಿ ನಡೆಯಲಿದೆ. ಹೀಗಾಗಿ ಈ ಪಂದ್ಯಗಳಲ್ಲಿ ಆರ್​ಸಿಬಿ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನ ಆರ್​ಸಿಬಿ ತಂಡ ಗೆಲ್ಲಬಾರದು ಎಂದು ಅಂಬಾಟಿ ರಾಯುಡು ಆಗ್ರಹಿಸಿದ್ದರು. ಪೋಡ್​ ಕಾಸ್ಟ್​ವೊಂದರಲ್ಲಿ ಮಾತನಾಡಿದ ರಾಯುಡು, ಆರ್​ಸಿಬಿ ತಂಡವು ಒಂದು ದಿನ ಕಪ್ ಗೆಲ್ಲಬಹುದು ಎಂದು ನಾನು ಭಾವಿಸುತ್ತೇನೆ. ಆದರೆ ಈ ವರ್ಷ ಅವರು ಕಪ್ ಗೆಲ್ಲದಿರಲಿ ಎಂದು ನಾನು ಆಶಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

ನನ್ನ ಪ್ರಕಾರ ಈ ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲಬೇಕು. ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಆಗಬಹುದು. ಹೀಗಾಗಿ ನಾನು ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಆಶಿಸುತ್ತೇನೆ ಎಂದು ರಾಯುಡು ಹೇಳಿದ್ದರು. ಆದರೀಗ ಸಿಎಸ್​ಕೆ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ.

ಇದನ್ನೂ ಓದಿ: VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ

ಇದರ ಬೆನ್ನಲ್ಲೇ ಉಲ್ಟಾ ಹೊಡೆದಿರುವ ಅಂಬಾಟಿ ರಾಯುಡು, ಈ ಬಾರಿ ಆರ್​ಸಿಬಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟರೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ