AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನೇ ಮರೆತು ಬಿಡುತ್ತಾರೆ’; ಶಾಹಿದ್ ಅಫ್ರಿದಿ

Champions Trophy 2025: ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನು ಮರೆತು ಬಿಡುತ್ತಾರೆ. ವಿರಾಟ್ ಕೊಹ್ಲಿಗೆ ಭಾರತದಲ್ಲಿ ಸಾಕಷ್ಟು ಕ್ರೇಜ್ ಇದೆ. ಪಾಕಿಸ್ತಾನದ ಜನರು ಅವರನ್ನು ತುಂಬಾ ಇಷ್ಟಪಡುತ್ತಾರೆ. ಅವರು ನನ್ನ ನೆಚ್ಚಿನ ಆಟಗಾರ ಕೂಡ. ಆದರೆ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಿಂದ ನಿವೃತ್ತಿಯಾಗಬಾರದಿತ್ತು ಎಂದು ಅಫ್ರಿದಿ ಹೇಳಿದ್ದಾರೆ.

‘ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನೇ ಮರೆತು ಬಿಡುತ್ತಾರೆ’; ಶಾಹಿದ್ ಅಫ್ರಿದಿ
ಶಾಹಿದ್ ಅಫ್ರಿದಿ, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on: Jul 12, 2024 | 11:00 PM

Share

ಟಿ20 ವಿಶ್ವಕಪ್ ಬಳಿಕ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ನಡೆದಿದೆ. 2025 ರ ಫೆಬ್ರವರಿ 19 ರಿಂದ ಮಾರ್ಚ್ 9 ರ ನಡುವೆ ನಡೆಯಲ್ಲಿರುವ ಈ ಸಮರಕ್ಕೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಆದರೆ, ಈ ಟೂರ್ನಿಯಲ್ಲಿ ಭಾಗವಹಿಸಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಾಗಿಲ್ಲ. ಹೀಗಾಗಿ ಏಷ್ಯಾಕಪ್​ನಂತೆಯೇ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಅಂದರೆ ಭಾರತದ ಪಂದ್ಯಗಳನ್ನು ದುಬೈ ಅಥವಾ ಶ್ರೀಲಂಕಾದಂತಹ ತಟಸ್ಥ ಸ್ಥಳಗಳಲ್ಲಿ ನಡೆಸಬೇಕೆಂದು ಬಿಸಿಸಿಐ ಕೋರಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಮಾಜಿ ನಾಯಕ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ.

ಟೀಂ ಇಂಡಿಯಾಗೆ ಸ್ವಾಗತ

ಮೊದಲು ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಮಾತನಾಡಿದ ಶಾಹಿದ್ ಅಫ್ರಿದಿ, ‘ನಾನು ಭಾರತ ತಂಡವನ್ನು ಸ್ವಾಗತಿಸುತ್ತೇನೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಬೇಕು. ಪಾಕಿಸ್ತಾನ ತಂಡವೂ ಪ್ರವಾಸ ಕೈಗೊಂಡಾಗ ಭಾರತದಲ್ಲಿ ಗೌರವ ಮತ್ತು ಪ್ರೀತಿ ಸಿಗುತ್ತಿತ್ತು. ಅದೇ ರೀತಿ ಭಾರತ ತಂಡ ಪಾಕಿಸ್ತಾನಕ್ಕೆ ಬಂದಾಗ ಅವರಿಗೂ ಪ್ರೀತಿ, ಗೌರವ ಸಿಕ್ಕಿತು. ಎಲ್ಲರೂ ತುಂಬಾ ಎಂಜಾಯ್ ಮಾಡಿದರು. ಕ್ರಿಕೆಟಿಗರ ಪ್ರವಾಸಗಳನ್ನು ರಾಜಕೀಯದಿಂದ ದೂರವಿಡಬೇಕು. ದೇಶದಲ್ಲಿ ಪರಸ್ಪರ ಕ್ರಿಕೆಟ್ ಆಡುವುದಕ್ಕಿಂತ ಉತ್ತಮ ರಾಜಕೀಯ ಮತ್ತೊಂದಿಲ್ಲ. ಕ್ರಿಕೆಟ್‌ಗಿಂತ ಉತ್ತಮ ರಾಜತಾಂತ್ರಿಕತೆ ಇನ್ನೊಂದಿಲ್ಲ ಎಂದು ನಾನು ಯಾವಾಗಲೂ ಹೇಳುತ್ತೇನೆ’ ಎಂದರು.

ಕೊಹ್ಲಿ ಬಗ್ಗೆ ಅಫ್ರಿದಿ ಮಾತು

ಇನ್ನು ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ ಶಾಹಿದ್, ‘ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲಿ ಆಡಿದರೆ ಭಾರತದಲ್ಲಿ ಸಿಕ್ಕ ಪ್ರೀತಿಯನ್ನು ಮರೆತು ಬಿಡುತ್ತಾರೆ. ವಿರಾಟ್ ಕೊಹ್ಲಿಗೆ ಭಾರತದಲ್ಲಿ ಸಾಕಷ್ಟು ಕ್ರೇಜ್ ಇದೆ. ಪಾಕಿಸ್ತಾನದ ಜನರು ಅವರನ್ನು ತುಂಬಾ ಇಷ್ಟಪಡುತ್ತಾರೆ. ಅವರು ನನ್ನ ನೆಚ್ಚಿನ ಆಟಗಾರ ಕೂಡ. ಆದರೆ ಕೊಹ್ಲಿ ಅಂತಾರಾಷ್ಟ್ರೀಯ ಟಿ20ಯಿಂದ ನಿವೃತ್ತಿಯಾಗಬಾರದಿತ್ತು. ಕೊಹ್ಲಿ ಅದ್ಭುತ ಫಾರ್ಮ್​ನಲ್ಲಿದ್ದು ಫಿಟ್ ಕೂಡ ಆಗಿದ್ದಾರೆ. ಹೀಗಾಗಿ ಅವರು ಟಿ20 ಆಡಬೇಕು. ಅವರ ಉಪಸ್ಥಿತಿಯು ಇತರ ಆಟಗಾರರಿಗೆ ಬೆಂಬಲವನ್ನು ನೀಡುತ್ತದೆ. ವಿರಾಟ್‌ನಿಂದ ಕಲಿಯಬಲ್ಲವರು ಬೇರೆಯವರಿಂದ ಕಲಿಯಲು ಸಾಧ್ಯವಿಲ್ಲ’ ಎಂದಿದ್ದಾರೆ.

ಬಿಸಿಸಿಐ ನಿರ್ಧಾರದ ಮೇಲೆ ಎಲ್ಲರ ಕಣ್ಣು

2008 ರ ಏಷ್ಯಾಕಪ್ ಮತ್ತು ಕಳೆದ ವರ್ಷ ನಡೆದ ಏಷ್ಯಾಕಪ್​ನ ಕೆಲವು ಪಂದ್ಯಗಳನ್ನು ಆತಿಥ್ಯ ವಹಿಸಿದ್ದರೂ, 1996 ರ ನಂತರ ಪಾಕಿಸ್ತಾನವು ಪ್ರಮುಖ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಐಸಿಸಿ ಟೂರ್ನಿಗಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಬಿಸಿಸಿಐ ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ. ಮಂಡಳಿಯ ಈ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಬಿಸಿಸಿಐ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ, ಆದರೆ ತಂಡವು ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ