ಫೋಟೋಶೂಟ್ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂದ ಫ್ಯಾನ್ಸ್​: ಇದಕ್ಕಿದೆ ಕಾರಣ

India vs Australia: ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯವು ನವೆಂಬರ್ 19 ರಂದು ಭಾನುವಾರ ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಈ ಪಂದ್ಯವು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ.

ಫೋಟೋಶೂಟ್ ಬೆನ್ನಲ್ಲೇ ಈ ಸಲ ಕಪ್ ನಮ್ದೆ ಎಂದ ಫ್ಯಾನ್ಸ್​: ಇದಕ್ಕಿದೆ ಕಾರಣ
India vs Australia
Follow us
| Edited By: Zahir Yusuf

Updated on: Nov 18, 2023 | 8:00 PM

ಏಕದಿನ ವಿಶ್ವಕಪ್​ 2023ರ ಫೈನಲಿಸ್ಟ್ ತಂಡಗಳ ನಾಯಕರುಗಳ ಫೋಟೋಶೂಟ್ ಬೆನ್ನಲ್ಲೇ ಇದೀಗ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ. ಈ ಲೆಕ್ಕಾಚಾರದ ಪ್ರಕಾರ ಈ ಸಲ ಕಪ್ ನಮ್ದೆ ಎನ್ನುತ್ತಿದ್ದಾರೆ ಟೀಮ್ ಇಂಡಿಯಾ ಅಭಿಮಾನಿಗಳು. ಇದಕ್ಕೆ ಮುಖ್ಯ ಕಾರಣ ರೋಹಿತ್ ಶರ್ಮಾ ಟ್ರೋಫಿಯ ಎಡಭಾಗದಲ್ಲಿ ನಿಂತಿರುವುದು.

ಹೌದು, ಏಕದಿನ ವಿಶ್ವಕಪ್​ನ ಕಳೆದ ಮೂರು ಆವೃತ್ತಿಗಳಲ್ಲಿ ಆತಿಥೇಯ ತಂಡಗಳೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಲೆಕ್ಕಾಚಾರದ ಪ್ರಕಾರ ಈ ಸಲ ಭಾರತ ತಂಡದ ಪಾಲಿಗೆ ಕಪ್ ಒಲಿಯಲಿದೆ. ಇದರ ಜೊತೆಗೆ ಇದೀಗ ಕಾಕತಾಳೀಯ ಎಂಬಂತೆ ಫೋಟೋಶೂಟ್​ನಲ್ಲೂ ಟೀಮ್ ಇಂಡಿಯಾ ನಾಯಕ ಎಡಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದರೆ ಕಳೆದ ಮೂರು ಏಕದಿನ ವಿಶ್ವಕಪ್​ನ ಫೈನಲಿಸ್ಟ್​ ನಾಯಕರುಗಳ ಫೋಟೋಶೂಟ್​ನಲ್ಲಿ ಎಡಭಾಗದಲ್ಲಿ ನಿಂತಿದ್ದ ಕ್ಯಾಪ್ಟನ್​ಗಳೇ ಟ್ರೋಫಿಯನ್ನು ಎತ್ತಿ ಹಿಡಿದಿದ್ದರು. ಇದೀಗ ಫೋಟೋಶೂಟ್​ನಲ್ಲಿ ರೋಹಿತ್ ಶರ್ಮಾ ಎಡಭಾಗದಲ್ಲಿ ಕಾಣಿಸಿಕೊಂಡರೆ, ಪ್ಯಾಟ್ ಕಮಿನ್ಸ್ ಬಲಭಾಗದಲ್ಲಿದ್ದಾರೆ.

ಹೀಗಾಗಿಯೇ ಈ ಹಿಂದಿನಂತೆ ಈ ಬಾರಿ ಕೂಡ ಎಡಭಾಗದಲ್ಲಿರುವ ನಾಯಕ ಟ್ರೋಫಿ ಎತ್ತಿ ಹಿಡಿಯಲಿದ್ದಾರೆ ಎಂಬ ವಾದಗಳನ್ನು ಟೀಮ್ ಇಂಡಿಯಾ ಅಭಿಮಾನಿಗಳು ಮುಂದಿಡುತ್ತಿದ್ದಾರೆ. ಅದರಂತೆ ನವೆಂಬರ್ 19 ರಂದು ಭಾರತ ತಂಡ ವಿಶ್ವಕಪ್​ ಕಿರೀಟವನ್ನು ಮುಡಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇದನ್ನೂ ಓದಿ: Virat Kohli: ಸಚಿನ್ ಅವರ 3 ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ