AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭಾರತೀಯ ಬೌಲರ್​ಗಳ ಬೆಂಡೆತ್ತಿದ ಸ್ಪಿನ್ನರ್

India A vs Australia A: ಭಾರತ ಎ ಮತ್ತು ಆಸ್ಟ್ರೇಲಿಯಾ ಎ ನಡುವೆ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಅನಧಿಕೃತ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯದಲ್ಲಿ ಮುಖಾಮುಖಿಯಾಗಿವೆ.

10ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಭಾರತೀಯ ಬೌಲರ್​ಗಳ ಬೆಂಡೆತ್ತಿದ ಸ್ಪಿನ್ನರ್
Todd Murphy
ಝಾಹಿರ್ ಯೂಸುಫ್
|

Updated on: Sep 24, 2025 | 11:54 AM

Share

ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಎ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಎ ತಂಡವು 420 ರನ್​ಗಳಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಧ್ರುವ್ ಜುರೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸೀಸ್ ಪರ ಸ್ಯಾಮ್ ಕೊನ್​ಸ್ಟಾಸ್ 49 ರನ್ ಬಾರಿಸಿದರೆ, ನಾಯಕ ನಾಥನ್ ಮೆಕ್​ಸ್ವೀನಿ 74 ರನ್​ ಚಚ್ಚಿದರು.

ಆ ಬಳಿಕ ಬಂದ ಜಾಕ್ ಎಡ್ವರ್ಡ್ಸ್ ಕೇವಲ 78 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 88 ರನ್ ಬಾರಿಸಿ ಅಬ್ಬರಿಸಿದರು. ಈ ಹಂತದಲ್ಲಿ ಬಿಗು ದಾಳಿ ಸಂಘಟಿಸಿದ ಮಾನವ್ ಸುತಾರ್ ಆಸ್ಟ್ರೇಲಿಯಾ ಬ್ಯಾಟರ್​ಗಳನ್ನು ಬ್ಯಾಕ್ ಟು ಬ್ಯಾಕ್ ಪೆವಿಲಿಯನ್​ಗೆ ಅಟ್ಟಿದರು.

274 ರನ್​ಗಳಿಗೆ 8 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಆಸ್ಟ್ರೇಲಿಯಾ ತಂಡಕ್ಕೆ ಟಾಡ್ ಮರ್ಫಿ ಆಸರೆಯಾಗಿ ನಿಂತರು. 10ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮರ್ಫಿ ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದರು. ಅಲ್ಲದೆ 89 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 76 ರನ್ ಬಾರಿಸಿದರು.

ಈ 76 ರನ್​ಗಳೊಂದಿಗೆ ಕೊನೆಯ ವಿಕೆಟ್​ಗೆ ಹೆನ್ರಿ ಥಾರ್ನ್‌ಟನ್ (32) ಜೊತೆಗೂಡಿ 91 ರನ್​ಗಳ ಅಮೂಲ್ಯ ಜೊತೆಯಾಟವಾಡಿದರು. ಕೊನೆಯ ವಿಕೆಟ್​ನಲ್ಲಿ ಮೂಡಿಬಂದ ಈ ಭರ್ಜರಿ ಜೊತೆಯಾಟದೊಂದಿಗೆ ಆಸ್ಟ್ರೇಲಿಯಾ ಎ ತಂಡವು ಮೊದಲ ಇನಿಂಗ್ಸ್​ನಲ್ಲಿ 420 ರನ್​ಗಳಿಸಿ ಆಲೌಟ್ ಆಗಿದೆ.

ಭಾರತ ಎ ತಂಡದ ಪರ 32 ಓವರ್​ಗಳನ್ನು ಎಸೆದ ಮಾನವ್ ಸುತಾರ್ 107 ರನ್ ನೀಡಿ 5 ವಿಕೆಟ್ ಪಡೆದರೆ, ಗುರ್ನೂರ್ ಬ್ರಾರ್ 13.2 ಓವರ್​ಗಳಲ್ಲಿ 75 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು. 

ಆಸ್ಟ್ರೇಲಿಯಾ ಎ ಪ್ಲೇಯಿಂಗ್ ಇಲೆವೆನ್: ಸ್ಯಾಮ್ ಕೊನ್ಸ್ಟಾಸ್ , ಕ್ಯಾಂಪ್ಬೆಲ್ ಕೆಲ್ಲಾವೇ , ನಾಥನ್ ಮೆಕ್‌ಸ್ವೀನಿ (ನಾಯಕ) , ಆಲಿವರ್ ಪೀಕ್ , ಕೂಪರ್ ಕೊನೊಲಿ , ಜೋಶ್ ಫಿಲಿಪ್ (ವಿಕೆಟ್ ಕೀಪರ್) , ಜ್ಯಾಕ್ ಎಡ್ವರ್ಡ್ಸ್ , ವಿಲ್ ಸದರ್ಲ್ಯಾಂಡ್ , ಕೋರಿ ರೋಚಿಸಿಯೋಲಿ , ಟಾಡ್ ಮರ್ಫಿ , ಹೆನ್ರಿ ಥಾರ್ನ್‌ಟನ್.

ಇದನ್ನೂ ಓದಿ: ಡಕ್​ಮ್ಯಾನ್… ಅನಗತ್ಯ ವಿಶ್ವ ದಾಖಲೆ ಬರೆದ ದಸುನ್ ಶಾನಕ

ಭಾರತ ಎ ಪ್ಲೇಯಿಂಗ್ ಇಲೆವೆನ್: ಎನ್ ಜಗದೀಸನ್ , ಕೆಎಲ್ ರಾಹುಲ್ , ಸಾಯಿ ಸುದರ್ಶನ್ , ದೇವದತ್ ಪಡಿಕ್ಕಲ್ , ನಿತೀಶ್ ಕುಮಾರ್ ರೆಡ್ಡಿ , ಧ್ರುವ್ ಜುರೆಲ್ (ನಾಯಕ) , ಆಯುಷ್ ಬದೋನಿ , ಪ್ರಸಿದ್ಧ್ ಕೃಷ್ಣ , ಮೊಹಮ್ಮದ್ ಸಿರಾಜ್ , ಗುರ್ನೂರ್ ಬ್ರಾರ್ , ಮಾನವ್ ಸುತಾರ್.

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್