VIDEO: ಮಿಂಚಿನ ವೇಗ, ಹದ್ದಿನ ಕಣ್ಣು… ರಮಣ್​ದೀಪ್ ಹಿಡಿದ ಕ್ಯಾಚ್ ನೋಡಿ ದಂಗಾದ ಪ್ರೇಕ್ಷಕರು..!

India A vs Pakistan A: ಉದಯೋನ್ಮುಖ ತಂಡಗಳ ನಡುವಣ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ಎ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 2 ಅಂಕಗಳನ್ನು ಕಲೆಹಾಕಿದೆ.

VIDEO: ಮಿಂಚಿನ ವೇಗ, ಹದ್ದಿನ ಕಣ್ಣು... ರಮಣ್​ದೀಪ್ ಹಿಡಿದ ಕ್ಯಾಚ್ ನೋಡಿ ದಂಗಾದ ಪ್ರೇಕ್ಷಕರು..!
Ramandeep Singh
Follow us
|

Updated on: Oct 20, 2024 | 8:55 AM

ಒಮಾನ್​ನಲ್ಲಿ ನಡೆಯುತ್ತಿರುವ ಎಮರ್ಜಿಂಗ್ ಏಷ್ಯಾಕಪ್ ಟಿ20 ಟೂರ್ನಿಯ 4ನೇ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ಟೀಮ್ ಇಂಡಿಯಾದ ರಮಣ್​ದೀಪ್ ಸಿಂಗ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಭಾರತ ಎ ಮತ್ತು ಪಾಕಿಸ್ತಾನ್ ಎ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಅಭಿಷೇಕ್ ಶರ್ಮಾ (35) ಹಾಗೂ ಪ್ರಭ್​ಸಿಮ್ರಾನ್ (36) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 44 ರನ್ ಬಾರಿಸಿದರು. ಈ ಮೂಲಕ ಭಾರತ ಎ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.

184 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಎ ತಂಡವು ಉತ್ತಮ ಆರಂಭವೇನು ಪಡೆದಿರಲಿಲ್ಲ. ಇದಾಗ್ಯೂ ಯಾಸಿರ್ ಖಾನ್ ಕ್ರೀಸ್ ಕಚ್ಚಿ ನಿಲ್ಲುವ ಮೂಲಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಇದರ ನಡುವೆ ನಿಶಾಂತ್ ಸಿಂಧು ಎಸೆದ 9ನೇ ಓವರ್​ನ ಮೊದಲ ಎಸೆತದಲ್ಲಿ ಯಾಸಿರ್ ಖಾನ್ ಡೀಪ್ ಮಿಡ್ ವಿಕೆಟ್​ನತ್ತ ಭರ್ಜರಿಯಾಗಿ ಬಾರಿಸಿದ್ದರು. ಇನ್ನೇನು ಚೆಂಡು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಬಂದ ರಮಣ್​ದೀಪ್ ಸಿಂಗ್ ಅದ್ಭುತ ಡೈವಿಂಗ್​ನೊಂದಿಗೆ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು.

ರಮಣ್​ದೀಪ್ ಅವರ ಈ ಮಿಂಚಿನ ಫೀಲ್ಡಿಂಗ್ ನೋಡಿ ಇಡೀ ಪ್ರೇಕ್ಷಕರು ಮೂಕವಿಸ್ಮಿತರಾದರು. ಇದೀಗ ಈ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಇತಿಹಾಸದ ಅತ್ಯುತ್ತಮ ಕ್ಯಾಚ್​ಗಳಲ್ಲಿ ಇದು ಕೂಡ ಒಂದು ಎಂದು ಅನೇಕರು ಬಣ್ಣಿಸಿದ್ದಾರೆ.

ರಮಣ್​ದೀಪ್ ಸಿಂಗ್ ಕ್ಯಾಚ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 184 ರನ್​​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ಎ ತಂಡ 7 ರನ್​ಗಳ ರೋಚಕ ಜಯ ಸಾಧಿಸಿದೆ.

ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ