AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಮಿಂಚಿನ ವೇಗ, ಹದ್ದಿನ ಕಣ್ಣು… ರಮಣ್​ದೀಪ್ ಹಿಡಿದ ಕ್ಯಾಚ್ ನೋಡಿ ದಂಗಾದ ಪ್ರೇಕ್ಷಕರು..!

India A vs Pakistan A: ಉದಯೋನ್ಮುಖ ತಂಡಗಳ ನಡುವಣ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ಎ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 2 ಅಂಕಗಳನ್ನು ಕಲೆಹಾಕಿದೆ.

VIDEO: ಮಿಂಚಿನ ವೇಗ, ಹದ್ದಿನ ಕಣ್ಣು... ರಮಣ್​ದೀಪ್ ಹಿಡಿದ ಕ್ಯಾಚ್ ನೋಡಿ ದಂಗಾದ ಪ್ರೇಕ್ಷಕರು..!
Ramandeep Singh
ಝಾಹಿರ್ ಯೂಸುಫ್
|

Updated on: Oct 20, 2024 | 8:55 AM

Share

ಒಮಾನ್​ನಲ್ಲಿ ನಡೆಯುತ್ತಿರುವ ಎಮರ್ಜಿಂಗ್ ಏಷ್ಯಾಕಪ್ ಟಿ20 ಟೂರ್ನಿಯ 4ನೇ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ಟೀಮ್ ಇಂಡಿಯಾದ ರಮಣ್​ದೀಪ್ ಸಿಂಗ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಭಾರತ ಎ ಮತ್ತು ಪಾಕಿಸ್ತಾನ್ ಎ ತಂಡಗಳ ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡಕ್ಕೆ ಅಭಿಷೇಕ್ ಶರ್ಮಾ (35) ಹಾಗೂ ಪ್ರಭ್​ಸಿಮ್ರಾನ್ (36) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 44 ರನ್ ಬಾರಿಸಿದರು. ಈ ಮೂಲಕ ಭಾರತ ಎ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.

184 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಎ ತಂಡವು ಉತ್ತಮ ಆರಂಭವೇನು ಪಡೆದಿರಲಿಲ್ಲ. ಇದಾಗ್ಯೂ ಯಾಸಿರ್ ಖಾನ್ ಕ್ರೀಸ್ ಕಚ್ಚಿ ನಿಲ್ಲುವ ಮೂಲಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಇದರ ನಡುವೆ ನಿಶಾಂತ್ ಸಿಂಧು ಎಸೆದ 9ನೇ ಓವರ್​ನ ಮೊದಲ ಎಸೆತದಲ್ಲಿ ಯಾಸಿರ್ ಖಾನ್ ಡೀಪ್ ಮಿಡ್ ವಿಕೆಟ್​ನತ್ತ ಭರ್ಜರಿಯಾಗಿ ಬಾರಿಸಿದ್ದರು. ಇನ್ನೇನು ಚೆಂಡು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಬಂದ ರಮಣ್​ದೀಪ್ ಸಿಂಗ್ ಅದ್ಭುತ ಡೈವಿಂಗ್​ನೊಂದಿಗೆ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದರು.

ರಮಣ್​ದೀಪ್ ಅವರ ಈ ಮಿಂಚಿನ ಫೀಲ್ಡಿಂಗ್ ನೋಡಿ ಇಡೀ ಪ್ರೇಕ್ಷಕರು ಮೂಕವಿಸ್ಮಿತರಾದರು. ಇದೀಗ ಈ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಇತಿಹಾಸದ ಅತ್ಯುತ್ತಮ ಕ್ಯಾಚ್​ಗಳಲ್ಲಿ ಇದು ಕೂಡ ಒಂದು ಎಂದು ಅನೇಕರು ಬಣ್ಣಿಸಿದ್ದಾರೆ.

ರಮಣ್​ದೀಪ್ ಸಿಂಗ್ ಕ್ಯಾಚ್ ವಿಡಿಯೋ:

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 184 ರನ್​​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ಎ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ಎ ತಂಡ 7 ರನ್​ಗಳ ರೋಚಕ ಜಯ ಸಾಧಿಸಿದೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ