AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಶ್ರೀಲಂಕಾ ಅಭ್ಯಾಸ ಪಂದ್ಯ; ಉಭಯ ತಂಡಗಳಿಗೆ ಮೊದಲ ದಿನದ ಗೌರವ

IND vs SL Practice Match: ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ನಡುವಿನ ಅಭ್ಯಾಸ ಪಂದ್ಯದ ಮೊದಲ ದಿನ ಶ್ರೀಲಂಕಾ 363/8 ರನ್ ಗಳಿಸಿ ಪ್ರಾಬಲ್ಯ ಸಾಧಿಸಿತು. ನಿಶಾನ್, ರವಿಂದು ಮತ್ತು ಸೋನಲ್ ಅರ್ಧಶತಕ ಗಳಿಸಿದರು. ಭಾರತದ ಪರ ಜಡೇಜಾ, ಕುಲ್ದೀಪ್, ಮಾನವ್ ತಲಾ 2 ವಿಕೆಟ್ ಪಡೆದು ಮಿಂಚಿದರು, ವೇಗಿಗಳು ವಿಕೆಟ್ ಪಡೆಯಲು ವಿಫಲರಾದರು. ಸ್ಪಿನ್ನರ್‌ಗಳ ಯಶಸ್ಸು ಮೊದಲ ದಿನದ ಮುಖ್ಯಾಂಶವಾಗಿದೆ.

IND vs SL: ಭಾರತ- ಶ್ರೀಲಂಕಾ ಅಭ್ಯಾಸ ಪಂದ್ಯ; ಉಭಯ ತಂಡಗಳಿಗೆ ಮೊದಲ ದಿನದ ಗೌರವ
Ind Vs Sl
ಪೃಥ್ವಿಶಂಕರ
|

Updated on:Aug 07, 2026 | 6:14 PM

Share

ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ (India vs Sri Lanka ) ನಡುವಿನ ಮೂರು ಪಂದ್ಯಗಳ ಅಭ್ಯಾಸ ಪಂದ್ಯ ಇಂದಿನಿಂದ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಇಲೆವೆನ್ ತಂಡ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಮೊದಲ ದಿನದಾಟದಂತ್ಯಕ್ಕೆ ಆತಿಥೇಯ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡ 8 ವಿಕೆಟ್‌ಗಳನ್ನು ಕಳೆದುಕೊಂಡು 363 ರನ್ ಕಲೆಹಾಕಿದೆ. ಕೇಸರ ನುವಂತಾ 9 ರನ್‌ ಮತ್ತು ದಿಲುಮ್ ಸುದಿರಾ 1 ರನ್‌ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಇತ್ತ ಭಾರತದ ಪರ ತ್ರಿವಳಿ ಸ್ಪಿನ್ನರ್​ಗಳಾದ ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಹಾಗೂ ಮಾನವ್ ಸುತಾರ್ ತಲಾ 2 ವಿಕೆಟ್‌ಗಳನ್ನು ಪಡೆದರೆ, ವೇಗಿ ಗುರ್ನೂರ್ ಬ್ರಾರ್ 1 ವಿಕೆಟ್ ಪಡೆದರು.

ಮೂವರ ಅರ್ಧಶತಕ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡದ ಬ್ಯಾಟಿಂಗ್‌ ವಿಭಾಗದ ಭಾರತದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿತು. ತಂಡದ ಆರು ಬ್ಯಾಟರ್​ಗಳು ಉತ್ತಮ ಆರಂಭವನ್ನು ಪಡೆದುಕೊಂಡರು. ಆದರೆ ಯಾರಿಗೂ ಶತಕದ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ತಂಡದ ಪರ ಮೂವರು ಬ್ಯಾಟರ್​ಗಳು ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಆರಂಭಿಕ ಆಟಗಾರ ನಿಶಾನ್ ಫೆರ್ನಾಂಡೊ 65 ಎಸೆತಗಳಲ್ಲಿ 66 ರನ್​ಗಳ ಚುರುಕಾದ ಇನ್ನಿಂಗ್ಸ್ ಆಡಿವುದರ ಜೊತೆಗೆ ಮತ್ತೊಬ್ಬ ಆರಂಭಿಕ ರವಿಂದು ರಸಂತ ಅವರೊಂದಿಗೆ 110 ರನ್‌ಗಳ ಆರಂಭಿಕ ಪಾಲುದಾರಿಕೆಯನ್ನು ಹಂಚಿಕೊಂಡರು. ರಸಂತ 143 ಎಸೆತಗಳಲ್ಲಿ 71 ರನ್ ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಸೋನಲ್ ದಿನುಷಾ 72 ಎಸೆತಗಳಲ್ಲಿ 52 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಹಾಗೆಯೇ ದಿನುಷಾ, ರಮೇಶ್ ಮೆಂಡಿಸ್ (32) ಅವರೊಂದಿಗೆ ಏಳನೇ ವಿಕೆಟ್‌ಗೆ 64 ರನ್ ಸೇರಿಸಿದರು.

ಸ್ಪಿನ್ನರ್​ಗಳ ಮೇಲುಗೈ

ಇತ್ತ ಭಾರತೀಯ ಬೌಲರ್‌ಗಳು ಆರಂಭದಲ್ಲಿ ಶ್ರೀಲಂಕಾದ ಬ್ಯಾಟ್ಸ್‌ಮನ್‌ಗಳ ವಿರುದ್ಧ ಹೋರಾಡಿದರು. ಆದರೆ ಸ್ಪಿನ್ನರ್‌ಗಳು ದಿನದ ಕೊನೆಯ ಸೆಷನ್​ನಲ್ಲಿ ಮೇಲುಗೈ ಸಾಧಿಸಿದರು. ಕುಲ್ದೀಪ್ ಯಾದವ್ 18 ಓವರ್‌ಗಳಲ್ಲಿ 76 ರನ್‌ ನೀಡಿ ಎರಡು ವಿಕೆಟ್‌ಗಳನ್ನು ಪಡೆದರೆ, ಎಡಗೈ ಸ್ಪಿನ್ನರ್ ಮಾನವ್ ಸುತಾರ್ 13 ಓವರ್‌ಗಳಲ್ಲಿ 33 ರನ್‌ ನೀಡಿ 2 ವಿಕೆಟ್ ಪಡೆದರು. ಅನುಭವಿ ರವೀಂದ್ರ ಜಡೇಜಾ ಕೂಡ 15 ಓವರ್‌ಗಳಲ್ಲಿ 64 ರನ್‌ ನೀಡಿ ಎರಡು ವಿಕೆಟ್‌ಗಳನ್ನು ಪಡೆದರು.

ಮೊದಲ ದಿನದಾಟದಲ್ಲಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಿದರೆ ವೇಗದ ಬೌಲರ್​ಗಳು ಯಶಸ್ವಿಯಾಗಲಿಲ್ಲ. ಸುಮಾರು ಐದು ವಾರಗಳ ನಂತರ ರೆಡ್-ಬಾಲ್ ಕ್ರಿಕೆಟ್‌ಗೆ ಮರಳಿರುವ ಭಾರತೀಯ ವೇಗದ ಬೌಲರ್‌ಗಳಿಗೆ ವಿಕೆಟ್ ಸಿಗಲಿಲ್ಲ. ಮೊಹಮ್ಮದ್ ಸಿರಾಜ್ 13 ಓವರ್‌ಗಳಲ್ಲಿ 44 ರನ್‌ಗಳನ್ನು ಬಿಟ್ಟುಕೊಟ್ಟರೆ, ಪ್ರಸಿದ್ಧ್ ಕೃಷ್ಣ ಎಂಟು ಓವರ್‌ಗಳಲ್ಲಿ 32 ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಯಾರೂ ವಿಕೆಟ್ ಪಡೆಯಲಿಲ್ಲ. ಗೊರ್ನೂರ್ ಬ್ರಾರ್ 12 ಓವರ್‌ಗಳಲ್ಲಿ 49 ರನ್‌ ನೀಡಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Fri, 7 August 26

Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​