AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಭರ್ಜರಿ ಸಿಕ್ಸ್, 13 ಫೋರ್​: ಇಂಗ್ಲೆಂಡ್ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿದ ಆಯುಷ್

India U19 vs England U19: ಭಾರತ ಮತ್ತು ಇಂಗ್ಲೆಂಡ್ ನಡುವಣ ಅಂಡರ್-19 ಯೂತ್ ಟೆಸ್ಟ್ ಸರಣಿಯು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಸರಣಿಯ ಮೊದಲ ಮ್ಯಾಚ್ ಡ್ರಾನಲ್ಲಿ ಅಂತ್ಯವಾದರೆ, ದ್ವಿತೀಯ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ. ಈ ಎರಡು ಮ್ಯಾಚ್​ಗಳಲ್ಲೂ ಶತಕ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಯಂಗ್ ಕ್ಯಾಪ್ಟನ್ ಆಯುಷ್ ಮ್ಹಾತ್ರೆ ಸಂಚಲನ ಸೃಷ್ಟಿಸಿದ್ದಾರೆ.

6 ಭರ್ಜರಿ ಸಿಕ್ಸ್, 13 ಫೋರ್​: ಇಂಗ್ಲೆಂಡ್ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿದ ಆಯುಷ್
Ayush Mhatre
ಝಾಹಿರ್ ಯೂಸುಫ್
|

Updated on:Jul 24, 2025 | 7:58 AM

Share

ಚೆಲ್ಮ್ಸ್‌ಫೋರ್ಡ್​ನ ಕೌಂಟಿ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ಅಂಡರ್-19 ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಅಂಡರ್-19 ತಂಡದ ನಾಯಕ ಆಯುಷ್ ಮ್ಹಾತ್ರೆ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಆಯುಷ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 64 ಎಸೆತಗಳಲ್ಲಿ ಸೆಂಚುರಿ ಮೂಡಿಬಂತು. ಈ ಶತಕದೊಂದಿಗೆ ಯೂತ್ ಟೆಸ್ಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡರು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 309 ರನ್​ಗಳಿಸಿ ಆಲೌಟ್ ಆಗಿದ್ದರು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಆಯುಷ್ ಮ್ಹಾತ್ರೆ (80) ಅವರ ಅರ್ಧಶತಕ ಹಾಗೂ ವಿಯಾನ್ ಮಲ್ಹೋತ್ರಾ (120) ಅವರ ಶತಕದೊಂದಿಗೆ 279 ರನ್ ಕಲೆಹಾಕಿತು.

30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 324 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 355 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಆಯುಷ್ ಮ್ಹಾತ್ರೆ ಸ್ಫೋಟಕ ಇನಿಂಗ್ಸ್ ಆಡಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಆಯುಷ್ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಕೇವಲ 64 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಆಯುಷ್ ಮ್ಹಾತ್ರೆ 80 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 126 ರನ್​ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದರು.

ಆಯುಷ್ ಮ್ಹಾತ್ರೆ ಅವರ ಈ ಭರ್ಜರಿ ಇನಿಂಗ್ಸ್​ ನೆರವಿನೊಂದಿಗೆ ಟೀಮ್ ಇಂಡಿಯಾ ಕೊನೆಯ ದಿನದಾಟದಲ್ಲಿ 6 ವಿಕೆಟ್ ಕಳೆದುಕೊಂಡು 290 ರನ್​ ಕಲೆಹಾಕಿತು. ಈ ಮೂಲಕ ಇಂಗ್ಲೆಂಡ್ ಅಂಡರ್-19 ವಿರುದ್ಧದ 2ನೇ ಯೂತ್ ಟೆಸ್ಟ್ ಪಂದ್ಯವನ್ನು ಡ್ರಾಗೊಳಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ.

ಇಂಗ್ಲೆಂಡ್ ಅಂಡರ್-19 ಪ್ಲೇಯಿಂಗ್ 11: ಆ್ಯಡಮ್ ಥಾಮಸ್ , ಬೆನ್ ಡಾಕಿನ್ಸ್ , ಆರ್ಯನ್ ಸಾವಂತ್ , ರಾಕಿ ಫ್ಲಿಂಟಾಫ್ , ಬೆನ್ ಮೇಯಸ್ , ಥಾಮಸ್ ರೆವ್ (ನಾಯಕ) , ಏಕಾನ್ಶ್ ಸಿಂಗ್ , ರಾಲ್ಫಿ ಆಲ್ಬರ್ಟ್ , ಜೇಮ್ಸ್ ಮಿಂಟೊ , ಅಲೆಕ್ಸ್ ಗ್ರೀನ್ , ಎಎಮ್ ಫ್ರೆಂಚ್.

ಇದನ್ನೂ ಓದಿ: ಟಾಸ್ ಸೋಲುವುದರಲ್ಲೂ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ ಅಂಡರ್-19 ಪ್ಲೇಯಿಂಗ್ 11: ವೈಭವ್ ಸೂರ್ಯವಂಶಿ , ಆಯುಷ್ ಮ್ಹಾತ್ರೆ (ನಾಯಕ) , ವಿಹಾನ್ ಮಲ್ಹೋತ್ರಾ , ಅಭಿಜ್ಞಾನ್ ಕುಂದು (ವಿಕೆಟ್ ಕೀಪರ್) , ರಾಹುಲ್ ಕುಮಾರ್ , ಹರ್ವಂಶ್ ಪಂಗಾಲಿಯಾ , ಆರ್ ಎಸ್ ಅಂಬ್ರಿಶ್ , ಕಾನಿಷ್ಕ್ ಚೌಹಾಣ್ , ಹೆನಿಲ್ ಪಟೇಲ್ , ನಮನ್ ಪುಷ್ಪಕ್ , ಆದಿತ್ಯ ರಾವತ್.

Published On - 7:53 am, Thu, 24 July 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?