AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್- ಕೊಹ್ಲಿಗೆ ಸ್ಥಾನ..!

IND vs AFG: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಇಂದು 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ಇದು ಭಾರತದ ಕೊನೆಯ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿರಿವುದರಿಂದ ತಂಡಕ್ಕೆ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ.

Breaking: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್- ಕೊಹ್ಲಿಗೆ ಸ್ಥಾನ..!
ರೋಹಿತ್, ಕೊಹ್ಲಿ
ಪೃಥ್ವಿಶಂಕರ
|

Updated on:Jan 07, 2024 | 8:45 PM

Share

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಇಂದು 16 ಸದಸ್ಯರ ಟೀಂ ಇಂಡಿಯಾವನ್ನು (India vs Afghanistan)  ಪ್ರಕಟಿಸಿದೆ. ಟಿ20 ವಿಶ್ವಕಪ್‌ಗೂ (T20 World Cup 2024) ಮುನ್ನ ಇದು ಭಾರತದ ಕೊನೆಯ ಅಂತಾರಾಷ್ಟ್ರೀಯ ಟಿ20 ಸರಣಿಯಾಗಿರಿವುದರಿಂದ ತಂಡಕ್ಕೆ ಈ ಸರಣಿ ಅಂತ್ಯತ ಮಹತ್ವದ್ದಾಗಿದೆ. ಜನವರಿ 11 ರಿಂದ ಜನವರಿ 17 ರವರೆಗೆ ಎರಡೂ ತಂಡಗಳ ನಡುವೆ ಎಲ್ಲಾ ಮೂರು ಪಂದ್ಯಗಳು ನಡೆಯಲಿವೆ. ಇನ್ನು ಆಯ್ಕೆಯಾದ ತಂಡದ ಬಗ್ಗೆ ಹೇಳುವುದಾದರೆ,, ನಿರೀಕ್ಷೆಯಂತೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ತಂಡದ ನಾಯಕತ್ವ ನೀಡಲಾಗಿದೆ. ಹಾಗೆಯೇ ವಿರಾಟ್ ಕೊಹ್ಲಿ (Virat Kohli) ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

14 ತಿಂಗಳ ನಂತರ ತಂಡದಲ್ಲಿ ಅವಕಾಶ!

ಆಯ್ಕೆಯಾಗಿರುವ ತಂಡದಲ್ಲಿ ಯುವ ಆಟಗಾರರ ದಂಡೆ ತುಂಬಿದೆ. ಆದರೆ ಕೋಟ್ಯಾಂತರ ಅಭಿಮಾನಿಗಳ ನಿರೀಕ್ಷೆಗೆ ಬಿಸಿಸಿಐ ನೀರೆರಿದಿದೆ. ಅದರಂತೆ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸುಮಾರು 14 ತಿಂಗಳುಗಳ ನಂತರ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ವಾಸ್ತವವಾಗಿ ರೋಹಿತ್ ಹಾಗೂ ವಿರಾಟ್ 2022 ರಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಈ ಚುಟುಕು ಮಾದರಿಯಿಂದ ದೂರ ಉಳಿದಿದ್ದರು. ಅಲ್ಲದೆ ಈ ಇಬ್ಬರು ಈ ಮಾದರಿಯಲ್ಲಿ ಇನ್ನು ಮುಂದೆ ಆಡುವುದು ಅನುಮಾನ ಎಂತಲೂ ಭಾವಿಸಲಾಗಿತ್ತು. ಆದರೆ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಬಿಸಿಸಿಐ ಈ ಇಬ್ಬರಿಗೆ ಅವಕಾಶ ನೀಡಿದೆ.

IND vs AFG: ಸೂರ್ಯ, ಪಾಂಡ್ಯ ಸೇರಿದಂತೆ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಟಿ20 ಸರಣಿಗೆ ಅಲಭ್ಯ..!

ಪಾಂಡ್ಯ, ಸೂರ್ಯ, ರುತುರಾಜ್​ಗೆ ಇಂಜುರಿ

ಮುಂಚೆಯೇ ವರದಿಯಾದಂತೆ ಈ ಟಿ20 ಸರಣಿಯಿಂದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಹೊರಗುಳಿದಿದ್ದಾರೆ. ಈ ಮೂವರು ಆಟಗಾರರು ಇಂಜುರಿಯಿಂದ ಬಳಲುತ್ತಿದ್ದು, ಅವರಿನ್ನು ಸಂಪೂರ್ಣವಾಗಿ ಫಿಟ್ ಆಗದ ಕಾರಣ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾಯಕತ್ವದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಆಯ್ಕೆದಾರರಿಗೆ ಇನ್ನಷ್ಟು ಸುಲಭವಾಗಿದ್ದು, ರೋಹಿತ್ ಶರ್ಮಾ ಅವರಿಗೆ ಈ ಜವಾಬ್ದಾರಿ ಸಿಕ್ಕಿದೆ.

ಟಿ20 ಸರಣಿಗೆ ಉಭಯ ತಂಡಗಳು

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಷಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾಲ್, ಫಜಲ್ ಹಕ್ಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.

Published On - 7:26 pm, Sun, 7 January 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ