AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಕೆನ್ಸಿಂಗ್ಟನ್ ಓವಲ್ ಪಿಚ್ ಯಾರಿಗೆ ಸಹಕಾರಿ? ಇಲ್ಲಿದೆ ಪಿಚ್ ರಿಪೋರ್ಟ್

T20 World Cup 2024: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಗುರುವಾರ (ಜೂ.19) ನಡೆಯಲಿದ್ದು, ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಈ ಮ್ಯಾಚ್ ಅನ್ನು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಮತ್ತು ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ವೀಕ್ಷಿಸಬಹುದು.

IND vs AFG: ಕೆನ್ಸಿಂಗ್ಟನ್ ಓವಲ್ ಪಿಚ್ ಯಾರಿಗೆ ಸಹಕಾರಿ? ಇಲ್ಲಿದೆ ಪಿಚ್ ರಿಪೋರ್ಟ್
IND vs AFG
ಝಾಹಿರ್ ಯೂಸುಫ್
|

Updated on: Jun 19, 2024 | 1:08 PM

Share

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯಗಳು ಇಂದಿನಿಂದ (ಜೂ.19) ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಯುಎಸ್​ಎ ತಂಡಗಳು ಸೆಣಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಜೂನ್ 20 ರಂದು ಅಫ್ಘಾನಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ದ್ವಿತೀಯ ಸುತ್ತಿನ ಅಭಿಯಾನ ಆರಂಭಿಸಲಿದೆ.

ಈ ಪಂದ್ಯವು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವುದು ವಿಶೇಷ. ಅಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ತಂಡವು ತನ್ನೆಲ್ಲಾ ಪಂದ್ಯಗಳನ್ನು ಅಮೆರಿಕದಲ್ಲಿ ಆಡಿತ್ತು. ಇದೀಗ ದ್ವಿತೀಯ ಸುತ್ತಿನ ಪಂದ್ಯಗಳಿಗಾಗಿ ಟೀಮ್ ಇಂಡಿಯಾ ಕೆರಿಬಿಯನ್ ದ್ವೀಪಕ್ಕೆ ಬಂದಿಳಿದಿದೆ. ಅದರಂತೆ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ತನ್ನ ಮೊದಲ ಪಂದ್ಯವಾಡಲಿದೆ. ಹಾಗಿದ್ರೆ ಈ ಮೈದಾನದ ವಿಶೇಷಗಳತೇನು ಎಂದು ತಿಳಿಯೋಣ…

ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಎಷ್ಟು ಪಂದ್ಯಗಳು ನಡೆದಿವೆ?

ಈ ಮೈದಾನದಲ್ಲಿ ಈವರೆಗೆ ಒಟ್ಟು 27 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಾಗಿದೆ. ಇದರಲ್ಲಿ 17 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದ್ದರೆ, 8 ರಲ್ಲಿ ಎರಡನೇ ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಇನ್ನು ಎರಡು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ.

ಕೆನ್ಸಿಂಗ್ಟನ್ ಪಿಚ್ ಯಾರಿಗೆ ಸಹಕಾರಿ?

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನ ಪಿಚ್​ನಲ್ಲಿ ಸ್ಪೋಟಕ ಆರಂಭ ಪಡೆಯುವುದು ಕಷ್ಟಕರ. ಏಕೆಂದರೆ ಈ ಪಿಚ್​​ ಹೊಸ ಬಾಲ್​ಗಳಲ್ಲಿ ಉತ್ತಮ ಸೀಮ್ ಚಲನೆಯನ್ನು ನೀಡುತ್ತದೆ. ಇದರಿಂದಾಗಿ ಪವರ್​ಪ್ಲೇನಲ್ಲಿ ಕ್ರೀಸ್​ನಲ್ಲಿ ನೆಲೆ ನಿಲ್ಲುವುದು ಬ್ಯಾಟರ್​ಗಳಿಗೆ ಸವಾಲಾಗಲಿದೆ.

ಹಾಗೆಯೇ ಇಲ್ಲಿನ ಪಿಚ್​ನಲ್ಲಿ ಹೆಚ್ಚುವರಿ ಬೌನ್ಸರ್ ಅನ್ನು ಕೂಡ ನಿರೀಕ್ಷಿಸಬಹುದು.​ ಇಂತಹ ಅನಿರೀಕ್ಷಿತ ಬೌನ್ಸ್ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ಉಂಟುಮಾಡಬಹುದು.

ಇನ್ನು ಪರಿಸ್ಥಿತಿಗೆ ಹೊಂದಿಕೊಂಡ ಬಳಿಕ ಈ ಮೈದಾನದಲ್ಲಿ ಉತ್ತಮ ಸ್ಕೋರ್ ಕಲೆಹಾಕಬಹುದು. ಅಂದರೆ ಮೊದಲ 10 ಓವರ್​ಗಳ ಬಳಿಕ ಈ ಪಿಚ್​ನಲ್ಲಿ ಬ್ಯಾಟರ್​ಗಳ ಅಬ್ಬರವನ್ನು ನಿರೀಕ್ಷಿಸಬಹುದು.

ಸರಾಸರಿ ಸ್ಕೋರ್ ಎಷ್ಟು?

ಈ ಮೈದಾನದಲ್ಲಿ ಸರಾಸರಿ ಸ್ಕೋರ್ 150 ದಾಟಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಗರಿಷ್ಠ ಸ್ಕೋರ್ ಎಷ್ಟು?

ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ 2022ರಲ್ಲಿ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ 224 ರನ್​ ಬಾರಿಸಿರುವುದು ಗರಿಷ್ಠ ಸ್ಕೋರ್. ಹಾಗೆಯೇ ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 204 ರನ್ ಬಾರಿಸಿತ್ತು ಎಂಬುದು ವಿಶೇಷ.

ಕೊನೆಯ ಪಂದ್ಯದ ಫಲಿತಾಂಶ?

ಈ ಮೈದಾನದಲ್ಲಿ ಕೊನೆಯ ಪಂದ್ಯವಾಡಿದ್ದು ನಮೀಬಿಯಾ ಮತ್ತು ಸ್ಕಾಟ್ಲೆಂಡ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 156 ರನ್ ಕಲೆಹಾಕಿತ್ತು. ಈ ಗುರಿಯನ್ನು 18.3 ಓವರ್​ಗಳಲ್ಲಿ ಚೇಸ್ ಮಾಡಿ ಸ್ಕಾಟ್ಲೆಂಡ್ ತಂಡ ಜಯ ಸಾಧಿಸಿತ್ತು. ಅಂದರೆ ಈ ಮೈದಾನದಲ್ಲಿ ನಡೆಯುವ ಪಂದ್ಯಗಳಲ್ಲಿ ಕನಿಷ್ಠ 150 ರನ್​ಗಳನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

ಭಾರತ-ಅಫ್ಘಾನಿಸ್ತಾನ್ ಮುಖಾಮುಖಿ ಯಾವಾಗ?

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯವು ಗುರುವಾರ (ಜೂ.19) ನಡೆಯಲಿದ್ದು, ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಈ ಮ್ಯಾಚ್ ಅನ್ನು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಮತ್ತು ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ವೀಕ್ಷಿಸಬಹುದು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ