Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: 14 ತಿಂಗಳ ನಂತರ ರೋಹಿತ್, ಕೊಹ್ಲಿ ರೀ ಎಂಟ್ರಿ; ಟಿ20 ವಿಶ್ವಕಪ್ ಆಡುವುದು ಖಚಿತ

IND vs AFG: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 14 ತಿಂಗಳ ನಂತರ ಈ ಸರಣಿಯೊಂದಿಗೆ ಟಿ20 ಕ್ರಿಕೆಟ್​ಗೆ ಮರಳಿದ್ದಾರೆ. ಇಬ್ಬರೂ 2022 ರ ವಿಶ್ವಕಪ್‌ನ ಸೆಮಿ-ಫೈನಲ್ ಪಂದ್ಯದಲ್ಲಿ ತಮ್ಮ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಈ ಚುಟುಕು ಮಾದರಿಯಿಂದ ದೂರ ಸರಿದಿದ್ದರು.

IND vs AFG: 14 ತಿಂಗಳ ನಂತರ ರೋಹಿತ್, ಕೊಹ್ಲಿ ರೀ ಎಂಟ್ರಿ; ಟಿ20 ವಿಶ್ವಕಪ್ ಆಡುವುದು ಖಚಿತ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Jan 08, 2024 | 10:40 PM

ಅಜಿತ್ ಅಗರ್ಕರ್ ನೇತೃತ್ವದ ಹಿರಿಯ ಆಯ್ಕೆ ಸಮಿತಿಯು ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧ (India vs Afghanistan) ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) 14 ತಿಂಗಳ ನಂತರ ಈ ಸರಣಿಯೊಂದಿಗೆ ಟಿ20 ಕ್ರಿಕೆಟ್​ಗೆ ಮರಳಿದ್ದಾರೆ. ಇಬ್ಬರೂ 2022 ರ ವಿಶ್ವಕಪ್‌ನ ಸೆಮಿ-ಫೈನಲ್ ಪಂದ್ಯದಲ್ಲಿ ತಮ್ಮ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಆ ನಂತರ ಈ ಚುಟುಕು ಮಾದರಿಯಿಂದ ದೂರ ಸರಿದಿದ್ದರು. ನಿರೀಕ್ಷೆಯಂತೆ ರೋಹಿತ್ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದು, ವಿರಾಟ್ ಕೊಹ್ಲಿ ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಯ್ಕೆಗಾರರ ​​ಈ ನಿರ್ಧಾರದ ನಂತರ ಇಬ್ಬರೂ ಈ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲೂ (T20 World Cup 2024) ಆಡುವುದು ಭಾಗಶಃ ಖಚಿತವಾಗಿದೆ.

ಈ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಮತ್ತು ವಿರಾಟ್ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬ ಚರ್ಚೆ ಭಾರತೀಯ ಕ್ರಿಕೆಟ್‌ನಲ್ಲಿ ಬಹಳ ದಿನಗಳಿಂದ ಇತ್ತು. ಇದಕ್ಕೆ ಕಾರಣ ಇಬ್ಬರೂ 14 ತಿಂಗಳ ಕಾಲ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಂದ ವಿರಾಮ ಪಡೆದಿದ್ದರು. ಅಫ್ಘಾನಿಸ್ತಾನ ಸರಣಿಗೆ ಆಯ್ಕೆಯಾಗಿರುವ ತಂಡವು ಇಬ್ಬರಿಗೂ ಟಿ20 ಭವಿಷ್ಯವಿದೆ ಎಂಬುದನ್ನು ಸೂಚಿಸುವಂತಿದೆ.

Breaking: ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ರೋಹಿತ್- ಕೊಹ್ಲಿಗೆ ಸ್ಥಾನ..!

ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ?

ಕೆಲವು ದಿನಗಳ ಹಿಂದೆ, ಟಿ20 ವಿಶ್ವಕಪ್‌ನಲ್ಲಿ ರೋಹಿತ್ ತನ್ನ ಪಾತ್ರದ ಬಗ್ಗೆ ಆಯ್ಕೆಗಾರರಿಂದ ಸ್ಪಷ್ಟತೆ ಕೇಳಿದ್ದಾರೆ ಎಂದು ಹಲವು ಮಾಧ್ಯಮ ವರದಿ ಮಾಡಿದ್ದವು. ಏಕೆಂದರೆ ಕಳೆದ ಟಿ20 ವಿಶ್ವಕಪ್‌ನಿಂದ ಹೆಚ್ಚಿನ ಟಿ20 ಸರಣಿಗಳಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರು. ಅದಕ್ಕಾಗಿಯೇ ರೋಹಿತ್ ಆಯ್ಕೆ ಮಂಡಳಿ ಎದುರು ಈ ಪ್ರಶ್ನೆ ಕೇಳಿದ್ದರು ಎಂದು ವರದಿಯಾಗಿತ್ತು. ರೋಹಿತ್ ಜೊತೆಗೆ ವಿರಾಟ್ ಕೂಡ ಟಿ20 ವಿಶ್ವಕಪ್‌ಗೆ ಸಂಪೂರ್ಣವಾಗಿ ಲಭ್ಯವಿರುವುದಾಗಿ ಆಯ್ಕೆಗಾರರಿಗೆ ತಿಳಿಸಿದ್ದರು. ಆದ್ದರಿಂದ ಇವರಿಬ್ಬರನ್ನು ಟಿ20 ವಿಶ್ವಕಪ್‌ನಲ್ಲಿ ನೇರವಾಗಿ ಆಡಿಸದೆ, ಅಫ್ಘಾನಿಸ್ತಾನ ಸರಣಿಯಲ್ಲಿ ತಯಾರಿ ನಡೆಸಲು ಅವಕಾಶ ನೀಡಿದ್ದಾರೆ.

ಐಪಿಎಲ್ ಮೇಲೆ ಕಣ್ಣು

ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಈ ಇವರಿಬ್ಬರು ಆಯ್ಕೆಯಾಗಿದ್ದರೂ, ಈ ಇಬ್ಬರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡುವ ಅಂತಿಮ ನಿರ್ಧಾರವು ಇತರ ಕೆಲವು ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ರೋಹಿತ್ ಮತ್ತು ವಿರಾಟ್ ಹೇಗೆ ಆಡುತ್ತಾರೆ ಮತ್ತು ಮುಂಬರುವ ಐಪಿಎಲ್‌ನಲ್ಲಿ ಇವರಿಬ್ಬರ ಫಾರ್ಮ್ ಹೇಗಿರಲಿದೆ ಎಂಬುದನ್ನು ಆಯ್ಕೆಗಾರರು ಗಮನಿಸಲಿದ್ದಾರೆ. ಇದರ ಆಧಾರದ ಮೇಲೆ ಇಬ್ಬರೂ ವಿಶ್ವಕಪ್‌ನಲ್ಲಿ ಆಡುವುದು ಅಂತಿಮವಾಗಲಿದೆ. ಆದರೆ ಪ್ರಸ್ತುತ ಈ ಇಬ್ಬರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಿರುವುದನ್ನು ಗಮನಿಸಿದರೆ, ಆಯ್ಕೆದಾರರು ಟಿ20 ವಿಶ್ವಕಪ್‌ಗಾಗಿ ಇಬ್ಬರನ್ನೂ ಆಯ್ಕೆ ಮಾಡುವ ಇರಾದೆಯಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Sun, 7 January 24

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ