AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟಾಸ್ ಗೆದ್ದ ಪಾಂಡ್ಯ, ರಾಹುಲ್​ಗೆ ಅವಕಾಶ; ಹೀಗಿದೆ ಭಾರತ ತಂಡ

IND vs AUS: ಈಗಾಗಲೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಭಾರತದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಪಟ್ಟಿಯೂ ಹೊರಬಿದ್ದಿದೆ.

IND vs AUS: ಟಾಸ್ ಗೆದ್ದ ಪಾಂಡ್ಯ, ರಾಹುಲ್​ಗೆ ಅವಕಾಶ; ಹೀಗಿದೆ ಭಾರತ ತಂಡ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Mar 17, 2023 | 1:23 PM

Share

ಭಾರತ ಮತ್ತು ಆಸ್ಟ್ರೇಲಿಯಾ (India Vs Australia) ನಡುವೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದು ನಡೆಯುತ್ತಿದೆ. ರೋಹಿತ್ ಶರ್ಮಾ (Rohit Sharma) ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಭಾರತ ತಂಡದ ನಾಯಕತ್ವ ವಹಿಸಲಿದ್ದು, ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ (Steve Smith) ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ವಿಶ್ವಕಪ್ (World Cup) ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಇದರೊಂದಿಗೆ ಎರಡೂ ತಂಡಗಳು ವಿಶ್ವಕಪ್‌ಗೆ ತಮ್ಮ ಸಿದ್ಧತೆಯನ್ನು ಪರೀಕ್ಷಿಸುವ ಅವಕಾಶವನ್ನು ಪಡೆದುಕೊಂಡಿವೆ. ಈಗಾಗಲೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಭಾರತದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಪಟ್ಟಿಯೂ ಹೊರಬಿದ್ದಿದೆ.

ಭಾರತ-ಆಸ್ಟ್ರೇಲಿಯಾ ಮುಖಾಮುಖಿ ವರದಿ

ಭಾರತ ಮತ್ತು ಆಸ್ಟ್ರೇಲಿಯ ನಡುವೆ ಈ ಪಂದ್ಯದಲ್ಲಿ ನಿಕಟ ಹೋರಾಟ ನಡೆಯುವುದು ನಿಶ್ಚಿತ. ಏಕದಿನ ಮಾದರಿಯಲ್ಲಿ, ಉಭಯ ತಂಡಗಳು ತಮ್ಮ ಕೊನೆಯ ಐದು ಪಂದ್ಯಗಳನ್ನು ಗೆದ್ದಿವೆ. ಮತ್ತೊಂದೆಡೆ, ಈ ಎರಡು ತಂಡಗಳ ನಡುವಿನ ಕೊನೆಯ ಐದು ಏಕದಿನ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ ಎರಡು ಪಂದ್ಯಗಳನ್ನು ಗೆದ್ದಿದೆ.

IND vs AUS 1st ODI Live Score: ಟಾಸ್ ಗೆದ್ದ ಭಾರತ; ಉಭಯ ತಂಡಗಳು ಹೀಗಿವೆ

ಮುಂಬೈನಲ್ಲಿ ಟೀಂ ಇಂಡಿಯಾಗೆ ಸೋಲು

ಕಳೆದ ಬಾರಿ ಮುಂಬೈನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿಯಾದಾಗ ಆತಿಥೇಯ ತಂಡ ಹೀನಾಯವಾಗಿ ಸೋಲನುಭವಿಸಿತ್ತು. 256 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ಕೇವಲ 38 ಓವರ್‌ಗಳಲ್ಲಿ ಸಾಧಿಸಿತ್ತು. ಫಿಂಚ್ ಮತ್ತು ವಾರ್ನರ್ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾಕ್ಕೆ 10 ವಿಕೆಟ್ ಜಯ ತಂದುಕೊಟ್ಟಿದ್ದರು.

ಭಾರತ ತಂಡ

ಶುಭ್​ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಮೊಹಮದ್ ಸಿರಾಜ್,ಕುಲ್ದೀಪ್ ಯಾದವ್.

ಆಸ್ಟ್ರೇಲಿಯಾ ತಂಡ

ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Fri, 17 March 23

Follow Us
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ, ಹಲ್ಲೆ!
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್