AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ನಾಲ್ಕು ಅರ್ಧಶತಕ, ಐದು ವಿಕೆಟ್; ಟೀಂ ಇಂಡಿಯಾದ ಗೆಲುವಿನಲ್ಲಿ ಈ ಐವರೇ ಹೀರೋಗಳು

IND vs AUS: ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

ಪೃಥ್ವಿಶಂಕರ
|

Updated on: Sep 23, 2023 | 7:45 AM

Share
ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

1 / 6
ಇಂದಿನ ಪಂದ್ಯದಲ್ಲಿ ಕೀಪಿಂಗ್ ವಿಷಯದಲ್ಲಿ ಕೆಎಲ್ ರಾಹುಲ್​ಗೆ ಇದು ಶುಭ ದಿನವಾಗಿರಲಿಲ್ಲ. ಆದರೆ ಈ ಪಂದ್ಯದಲ್ಲಿ ರಾಹುಲ್ ಅವರ ಬ್ಯಾಟಿಂಗ್ ಸಾಕಷ್ಟು ಪರಿಣಾಮ ಬೀರಿತು. ನಾಯಕನ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಇಶಾನ್ ಮತ್ತು ಸೂರ್ಯ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. 63 ಎಸೆತಗಳಲ್ಲಿ 58 ರನ್ ಬಾರಿಸಿದ ರಾಹುಲ್ ಸಿಕ್ಸರ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇಂದಿನ ಪಂದ್ಯದಲ್ಲಿ ಕೀಪಿಂಗ್ ವಿಷಯದಲ್ಲಿ ಕೆಎಲ್ ರಾಹುಲ್​ಗೆ ಇದು ಶುಭ ದಿನವಾಗಿರಲಿಲ್ಲ. ಆದರೆ ಈ ಪಂದ್ಯದಲ್ಲಿ ರಾಹುಲ್ ಅವರ ಬ್ಯಾಟಿಂಗ್ ಸಾಕಷ್ಟು ಪರಿಣಾಮ ಬೀರಿತು. ನಾಯಕನ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಇಶಾನ್ ಮತ್ತು ಸೂರ್ಯ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. 63 ಎಸೆತಗಳಲ್ಲಿ 58 ರನ್ ಬಾರಿಸಿದ ರಾಹುಲ್ ಸಿಕ್ಸರ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

2 / 6
ಸೂರ್ಯಕುಮಾರ್ ಯಾದವ್ ಸುದೀರ್ಘ ಸಮಯದ ನಂತರ ಏಕದಿನ ಮಾದರಿಯಲ್ಲಿ ಅರ್ಧಶತಕ ಬಾರಿಸಿದರು. 49 ಎಸೆತಗಳಲ್ಲಿ 50 ರನ್ ಚಚ್ಚಿದ ಸೂರ್ಯ, ನಾಯಕ ರಾಹುಲ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು.

ಸೂರ್ಯಕುಮಾರ್ ಯಾದವ್ ಸುದೀರ್ಘ ಸಮಯದ ನಂತರ ಏಕದಿನ ಮಾದರಿಯಲ್ಲಿ ಅರ್ಧಶತಕ ಬಾರಿಸಿದರು. 49 ಎಸೆತಗಳಲ್ಲಿ 50 ರನ್ ಚಚ್ಚಿದ ಸೂರ್ಯ, ನಾಯಕ ರಾಹುಲ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು.

3 / 6
ಶುಭ್‌ಮನ್ ಗಿಲ್ ತಮ್ಮ ಅರ್ಧಶತಕದೊಂದಿಗೆ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು.  ತವರು ನೆಲದಲ್ಲಿ ಶತಕ ವಂಚಿತರಾದ ಗಿಲ್, 63 ಎಸೆತಗಳಲ್ಲಿ 74 ರನ್ ಗಳಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

ಶುಭ್‌ಮನ್ ಗಿಲ್ ತಮ್ಮ ಅರ್ಧಶತಕದೊಂದಿಗೆ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು. ತವರು ನೆಲದಲ್ಲಿ ಶತಕ ವಂಚಿತರಾದ ಗಿಲ್, 63 ಎಸೆತಗಳಲ್ಲಿ 74 ರನ್ ಗಳಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

4 / 6
Ruturaj Gaikwad

Asian Games Mens T20I 2023 India vs Nepal Quarter Final 1 Ruturaj and Jaiswal Good Start for India

5 / 6
ಸಿರಾಜ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಐದು ವಿಕೆಟ್ ಕಬಳಿಸಿ ಆಸೀಸ್ ತಂಡವನ್ನು 276 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಿರಾಜ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಐದು ವಿಕೆಟ್ ಕಬಳಿಸಿ ಆಸೀಸ್ ತಂಡವನ್ನು 276 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್