AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಟೀಮ್ ಇಂಡಿಯಾ ಸೋತರೂ, ಹಲವು ದಾಖಲೆ ಬರೆದ ಕೆಎಲ್ ರಾಹುಲ್..!

IND vs AUS, 1st T20I: 209 ರನ್​ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾಗೆ ಆರೋನ್ ಫಿಂಚ್ ಹಾಗೂ ಕ್ಯಾಮರೋನ್ ಗ್ರೀನ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 39 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು.

KL Rahul: ಟೀಮ್ ಇಂಡಿಯಾ ಸೋತರೂ, ಹಲವು ದಾಖಲೆ ಬರೆದ ಕೆಎಲ್ ರಾಹುಲ್..!
KL Rahul
TV9 Web
| Edited By: |

Updated on:Sep 21, 2022 | 11:26 AM

Share

IND vs AUS, 1st T20I: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ (KL Rahul) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 55 ರನ್​ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 2 ಸಾವಿರ ರನ್​ ಪೂರೈಸಿದ 2ನೇ ಬ್ಯಾಟ್ಸ್​​ಮನ್ ಎಂಬ ದಾಖಲೆಯನ್ನು ಕೆಎಲ್​ಆರ್​ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಕೇವಲ 56 ಇನಿಂಗ್ಸ್​ ಮೂಲಕ ವಿರಾಟ್ ಕೊಹ್ಲಿ 2 ಸಾವಿರ ರನ್​ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಕೆಎಲ್ ರಾಹುಲ್ 58 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್ ಬಾರಿಸಿದ 3ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನೂ ಕೂಡ ಬರೆದರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಾತ್ರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಈ ಸಾಧನೆ ಮಾಡಿದ್ದರು.

ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಪೂರೈಸಿದ ವಿಶ್ವದ ನಾಲ್ಕನೇ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಕೆಎಲ್​ ರಾಹುಲ್ ಪಾತ್ರರಾಗಿದ್ದಾರೆ. ಸದ್ಯ ಅತೀ ವೇಗವಾಗಿ 2 ಸಾವಿರ ರನ್ ಬಾರಿಸಿದ ದಾಖಲೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (52) ಹಾಗೂ ಮೊಹಮ್ಮದ್ ರಿಜ್ವಾನ್ (52) ಹೆಸರಿನಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (56) ಇದ್ದು, ನಾಲ್ಕನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು. ಆದರೆ 11 ರನ್​ಗಳಿಸಿದ್ದ ವೇಳೆ ಹಿಟ್​ಮ್ಯಾನ್ ಕ್ಯಾಚ್ ನೀಡಿ ಹೊರನಡೆಯಬೇಕಾಯಿತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (2) ಕೂಡ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಪ್ರದರ್ಶಿಸಿದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೆಎಲ್ ರಾಹುಲ್​ಗೆ ಉತ್ತಮ ಸಾಥ್ ನೀಡಿದ ಸೂರ್ಯ ಕುಮಾರ್ ಯಾದವ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಅರ್ಧಶತಕದ ಬೆನ್ನಲ್ಲೇ ಕೆಎಲ್ ರಾಹುಲ್ (55) ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್​ ಬಾರಿಸಿ ಗಮನ ಸೆಳೆದರು. ಇದಾಗ್ಯೂ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೂರ್ಯಕುಮಾರ್ ಯಾದವ್ 4 ಸಿಕ್ಸ್​ನೊಂದಿಗೆ 25 ಎಸೆತಗಳಲ್ಲಿ 45 ರನ್​ ಬಾರಿಸಿದರು. ಆದರೆ ಹಾಫ್ ಸೆಂಚುರಿ ಹೊಸ್ತಿಲ್ಲಲಿ ಕೀಪರ್​ಗೆ ಕ್ಯಾಚ್ ನೀಡಿದರು.

5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ ಅಕ್ಷರಶಃ ಅಬ್ಬರಿಸಿದರು. ಆಸೀಸ್ ಬೌಲರ್​ಗಳ ಬೆಂಡೆತ್ತಿದ ಪಾಂಡ್ಯ ಕೇವಲ 25 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಅಷ್ಟೇ ಅಲ್ಲದೆ 5 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಬಾರಿಸುವ ಮೂಲಕ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತವನ್ನು 208 ಕ್ಕೆ ತಂದು ನಿಲ್ಲಿಸಿದರು.

209 ರನ್​ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾಗೆ ಆರೋನ್ ಫಿಂಚ್ ಹಾಗೂ ಕ್ಯಾಮರೋನ್ ಗ್ರೀನ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 39 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಫಿಂಚ್ (22) ಔಟಾದ ಬೆನ್ನಲ್ಲೇ ಅಬ್ಬರಿಸಲಾರಂಭಿಸಿದ ಕ್ಯಾಮರೋನ್ ಗ್ರೀನ್ ಟೀಮ್ ಇಂಡಿಯಾ ಬೌಲರ್​ಗಳನ್ನು ದಂಡಿಸಿದರು. ಈ ನಡುವೆ ಅಕ್ಷರ್ ಪಟೇಲ್ ಕೈಬಿಟ್ಟ ಕ್ಯಾಚ್​ನ ಸಂಪೂರ್ಣ ಲಾಭ ಪಡೆದ ಗ್ರೀನ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಆಸ್ಟ್ರೇಲಿಯಾ ಮೊತ್ತವು 10 ಓವರ್​ಗಳಲ್ಲಿ 100 ರ ಗಡಿದಾಟಿತ್ತು.

ಇದಾಗ್ಯೂ ಕೊನೆಯ 6 ಓವರ್​ಗಳಲ್ಲಿ ಆಸ್ಟ್ರೇಲಿಯಾಗೆ 64 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದಿದ್ದ ಎಡಗೈ ದಾಂಡಿಗ ಮ್ಯಾಥ್ಯೂವೇಡ್ 21 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 45 ರನ್​ ಚಚ್ಚಿದರು. ವೇಡ್​ಗೆ ಉತ್ತಮ ಸಾಥ್ ನೀಡಿದ ಟಿಮ್ ಡೇವಿಡ್ 14 ಎಸೆತಗಳಲ್ಲಿ 18 ರನ್​ ಬಾರಿಸಿದರು. ಅದರಂತೆ ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 19.2 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್​ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

Published On - 11:25 am, Wed, 21 September 22

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ