AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Predicted Playing XI: ಮೊದಲ ಚುಟುಕು ಸಮರಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

IND vs AUS Predicted Playing XI: ಟಿ20 ವಿಶ್ವಕಪ್​ ತಂಡದಲ್ಲಿ ಆರಂಭಿಕರು ಯಾರಾಗಲಿದ್ದಾರೆ ಎಂಬುದಕ್ಕೆ ಉತ್ತರಿಸಿರುವ ನಾಯಕ ರೋಹಿತ್, ರಾಹುಲ್​ಗೆ ಹೆಚ್ಚಿನ ಆದ್ಯತೆ ನೀಡಿ, ಕೊಹ್ಲಿಗೆ 3ನೇ ಕ್ರಮಾಂಕ ಫಿಕ್ಸ್ ಎಂದಿದ್ದರು.

IND vs AUS Predicted Playing XI: ಮೊದಲ ಚುಟುಕು ಸಮರಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
Ind Vs Aus
TV9 Web
| Edited By: |

Updated on:Sep 19, 2022 | 2:44 PM

Share

ಏಷ್ಯಾಕಪ್ (Asia Cup) ಬಳಿಕ ಇದೀಗ ಟೀಂ ಇಂಡಿಯಾ (Team India) ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಚುಟುಕು ಮಾದರಿಯಲ್ಲಿ ಎದುರಿಸುತ್ತಿದೆ. ಮೂರು ಪಂದ್ಯಗಳ ಟಿ20 ಸರಣಿ ಮಂಗಳವಾರದಿಂದ ಮೊಹಾಲಿಯಲ್ಲಿ ಆರಂಭವಾಗಲಿದ್ದು, ಟಿ20 ವಿಶ್ವಕಪ್‌ (T20 World Cup) ದೃಷ್ಟಿಯಿಂದ ಭಾರತಕ್ಕೆ ಈ ಟಿ20 ಸರಣಿ ಅತ್ಯಂತ ಮಹತ್ವದ್ದಾಗಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾಗೆ (Rohit Sharma) ಕಾಡುತ್ತಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅವಕಾಶವಿದೆ. ಆದಾಗ್ಯೂ, ಆಡುವ XI ನಲ್ಲಿ ಹಿಟ್​ಮ್ಯಾನ್ ಯಾರಿಗೆ ಅವಕಾಶ ನೀಡುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.ಈ ಸರಣಿಯಲ್ಲಿ ಈ ಬಾರಿಯೂ ದಿನೇಶ್ ಕಾರ್ತಿಕ್‌ಗಿಂತ ರಿಷಬ್ ಪಂತ್‌ಗೆ (Rishabh Pant) ಪ್ರಾಶಸ್ತ್ಯ ಸಿಗುತ್ತದೆಯೇ ಎಂಬ ಪ್ರಶ್ನೆ ಕಾಡಲಿದೆ. ಜೊತೆಗೆ ಅಕ್ಷರ್ ಪಟೇಲ್ ಮತ್ತು ದೀಪಕ್ ಹೂಡಾ, ಈ ಇಬ್ಬರಲ್ಲಿ ಯಾರು ಆಡುತ್ತಾರೆ? ಎಂಬುದು ಕೂಡ ಕುತೂಹಲಕಾರಿಯಾಗಿದೆ.

ಬ್ಯಾಟಿಂಗ್ ಆರ್ಡರ್ ಹೇಗಿರಲಿದೆ?

ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಟಿ20 ವಿಶ್ವಕಪ್​ ತಂಡದಲ್ಲಿ ಆರಂಭಿಕರು ಯಾರಾಗಲಿದ್ದಾರೆ ಎಂಬುದಕ್ಕೆ ಉತ್ತರಿಸಿರುವ ನಾಯಕ ರೋಹಿತ್, ರಾಹುಲ್​ಗೆ ಹೆಚ್ಚಿನ ಆದ್ಯತೆ ನೀಡಿ, ಕೊಹ್ಲಿಗೆ 3ನೇ ಕ್ರಮಾಂಕ ಫಿಕ್ಸ್ ಎಂದಿದ್ದರು. ಹೀಗಾಗಿ ಈ ಸರಣಿಯಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಅವರನ್ನು ಕಣಕ್ಕಿಳಿಸುವುದಂತೂ ಖಚಿತ. ಹೀಗಾಗಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಆಡಿದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಭಾರತದ ಆಲ್ ರೌಂಡರ್ ಕೋಟಾದಲ್ಲಿ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ
Image
ಶಕ ಬೂಮ್ ಹಾಡಿಗೆ ತಮ್ಮದೇ ಸ್ಟೈಲ್​ನಲ್ಲಿ ಸ್ಟೆಪ್ ಹಾಕಿದ ಹಾರ್ದಿಕ್- ಕೊಹ್ಲಿ; ವಿಡಿಯೋ ನೋಡಿ
Image
IND vs AUS: ಆಸೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ; ಫೋಟೋ ನೋಡಿ
Image
Virat Kohli: 98 ರನ್​ಗಳಷ್ಟೇ ಬೇಕು; ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಪರ ವಿಶ್ವ ದಾಖಲೆ ಬರೆಯಲಿದ್ದಾರೆ ಕೊಹ್ಲಿ..!

ವಿಕೆಟ್ ಕೀಪರ್ ಯಾರು?

ಏಷ್ಯಾಕಪ್ ಸಮಯದಲ್ಲಿ ರೋಹಿತ್ ಶರ್ಮಾ ಆಡುವ XI ನಲ್ಲಿ ದಿನೇಶ್ ಕಾರ್ತಿಕ್‌ಗಿಂತ ಪಂತ್‌ಗೆ ಹೆಚ್ಚಿ ಆದ್ಯತೆ ನೀಡಿದರು. ಮೊದಲ ಪಂದ್ಯವನ್ನು ಬಿಟ್ಟರೆ ಮಿಕ್ಕ ಪಂದ್ಯಗಳಲ್ಲಿ ಕಾರ್ತಿಕ್​ಗೆ ಅವಕಾಶವೇ ಸಿಗಲಿಲ್ಲ. ಇತ್ತ ಸ್ಥಾನ ಗಿಟ್ಟಿಸಿಕೊಂಡ ಪಂತ್ ಕೂಡ ಬ್ಯಾಟಿಂಗ್‌ನಲ್ಲಿ ವಿಫಲರಾಗಿದ್ದರು. ಆದ್ದರಿಂದ ರೋಹಿತ್ ಶರ್ಮಾ ಈಗ ಕಾರ್ತಿಕ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಹಸ್ತಾಂತರಿಸುತ್ತಾರೆಯೇ? ಎಂಬುದು ನಾಳಿನ ಪಂದ್ಯದಲ್ಲಿಯೇ ಗೊತ್ತಾಗಲಿದೆ. ಇದರ ಹೊರತಾಗಿ, ಸ್ಪಿನ್ ಆಲ್​ರೌಂಡರ್ ಕೋಟಾದಲ್ಲಿ ಅಕ್ಷರ್ ಪಟೇಲ್ ಮತ್ತು ದೀಪಕ್ ಹೂಡಾ ನಡುವೆ ಫೈಪೋಟಿ ಹೆಚ್ಚಾಗಿದ್ದು, ಅಕ್ಷರ್ ಪಟೇಲ್​ಗೆ ಇಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ಧಟ್ಟವಾಗಿವೆ.

ಬುಮ್ರಾ-ಹರ್ಷಲ್​ಗೆ ಸ್ಥಾನ ಖಚಿತ

ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡುವುದಾದರೆ, ಇಂಜುರಿಯಿಂದ ಚೇತರಿಸಿಕೊಂಡು ತಂಡಕ್ಕೆ ಎಂಟ್ರಿಕೊಟ್ಟಿರುವ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್​ಗೆ ಅವಕಾಶ ಸಿಗುವುದಂತೂ ಖಚಿತ. ಇವರ ಜೊತೆಗೆ 2022ರ ಏಷ್ಯಾಕಪ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭುವನೇಶ್ವರ್ ಕುಮಾರ್ ಕೂಡ ತಂಡದ ಭಾಗವಾಗಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಯುಜುವೇಂದ್ರ ಚಹಾಲ್‌ಗೆ ಅವಕಾಶ ನೀಡಬಹುದು.

ಆಸೀಸ್ ತಂಡ ಹೇಗಿರಲಿದೆ?

ಮೊದಲ ಹಣಾಹಣಿಗೆ ಆಸ್ಟ್ರೇಲಿಯಾ ತಂಡ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಆದರೆ ಕಾಂಗರೂಗಳ ಪ್ರಮುಖ ಹಿನ್ನಡೆಯೆಂದರೆ, ಈ ತಂಡದಲ್ಲಿ ವಾರ್ನರ್ ಹಾಗೂ ಸ್ಟಾರ್ಕ್​ ಇಲ್ಲದಿರುವುದು. ಡೇವಿಡ್ ವಾರ್ನರ್ ಮತ್ತು ಮಿಕ್ಥೆಲ್ ಸ್ಟಾರ್ಕ್ ಇಂಜುರಿಯಿಂದಾಗಿ ಈ ಸರಣಿಯಲ್ಲಿ ತಂಡದ ಭಾಗವಾಗಿಲ್ಲ. ಇನ್ನುಳಿದಂತೆ ತಂಡದ ಪ್ರಮುಖ ಅಸ್ತ್ರವೆಂದರೆ ಅದು ಪವರ್-ಹಿಟ್ಟರ್ ಆಗಿರುವ ಟಿಮ್ ಡೇವಿಡ್. ಈ ಸರಣಿಯಲ್ಲಿ ಅಬ್ಬರಿಸುವ ಮೂಲಕ ಟಿ20 ವಿಶ್ವಕಪ್​ಗೆ ನಾನು ಸಿದ್ದ ಎನ್ನುವ ಸಿಗ್ನಲ್ ಕೊಡುವ ಕಾತುರದಲ್ಲಿ ಡೇವಿಡ್ ಇದ್ದಾರೆ. ಇವರನ್ನು ಹೊರತುಪಡಿಸಿ ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸ ಮುಖಗಳಾಗಿದ್ದು, ಈ ಸರಣಿಯಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗಿಳಿಯಲ್ಲಿದ್ದಾರೆ.

ಉಭಯ ತಂಡಗಳ ಸಂಭಾವ್ಯ ಇಲೆವೆನ್

ಟೀಂ ಇಂಡಿಯಾದ ಸಂಭಾವ್ಯ XI – ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್

ಆಸೀಸ್ ಸಂಭಾವ್ಯ ತಂಡ: ಆರನ್ ಫಿಂಚ್, ಮ್ಯಾಥ್ಯೂ ವೇಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಆಡಮ್ ಝಂಪಾ, ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜಲ್‌ವುಡ್, ಸೀನ್ ಅಬಾಟ್, ಆಸ್ಟನ್ ಅಗರ್

Published On - 2:40 pm, Mon, 19 September 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!