AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ ದಾಳಿಗೆ ತತ್ತರಿಸಿದ ಆಸೀಸ್; 177 ರನ್​ಗಳಿಗೆ ಕಾಂಗರೂಗಳು ಆಲೌಟ್!

IND vs AUS: ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ದಾಳಿಗೆ ತತ್ತರಿಸಿರುವ ಪ್ಯಾಟ್ ಕಮಿನ್ಸ್ ಪಡೆ ತಮ್ಮ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಲೌಟ್ ಆಗಿದೆ.

IND vs AUS: ಜಡೇಜಾ ದಾಳಿಗೆ ತತ್ತರಿಸಿದ ಆಸೀಸ್; 177 ರನ್​ಗಳಿಗೆ ಕಾಂಗರೂಗಳು ಆಲೌಟ್!
ಟೀಂ ಇಂಡಿಯಾ
TV9 Web
| Edited By: |

Updated on:Feb 09, 2023 | 3:20 PM

Share

ಬಾರ್ಡರ್-ಗವಾಸ್ಕರ್ ಟ್ರೋಫಿ (Border Gavaskar Trophy) ಟೆಸ್ಟ್ ಸರಣಿ ಅಂಗವಾಗಿ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ದಾಳಿಗೆ ತತ್ತರಿಸಿರುವ ಪ್ಯಾಟ್ ಕಮಿನ್ಸ್ ಪಡೆ ತಮ್ಮ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 177 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ದಾಳಿಗಿಳಿದ ರೋಹಿತ್ ಪಡೆ ಆರಂಭದಿಂದಲೇ ಆಸೀಸ್ ಬ್ಯಾಟರ್​ಗಳಿಗೆ ಮುಕ್ತವಾಗಿ ರನ್​ಗಳಿಸಲು ಅವಕಾಶ ನೀಡಲಿಲ್ಲ. ಅಂತಿಮವಾಗಿ ತಮ್ಮ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 64 ಓವರ್​ಗಳನ್ನಷ್ಟೇ ಆಡಿದ ಕಾಂಗರೂ ಪಡೆ 177 ರನ್​ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ (Ravindra Jadej) 5 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ (Ravichandran Ashwin) 3 ವಿಕೆಟ್ ಪಡೆದು ಮಿಂಚಿದರು.

ವಿಕೆಟ್ ಭೇಟೆ ಆರಂಭಿಸಿದ ಸಿರಾಜ್

ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ 2 ರನ್ ಗಳಿಸುವಷ್ಟರಲ್ಲಿ ಸ್ಟಾರ್ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡಿತು. ನಿರೀಕ್ಷೆಯಂತೆ ಭಾರತದ ವೇಗದ ಬೌಲರ್‌ಗಳು ಆಸ್ಟ್ರೇಲಿಯಾದ ಆರಂಭಕ್ಕೆ ಭಂಗ ತಂದರು. ಉಸ್ಮಾನ್ ಖವಾಜಾ ಮತ್ತು ಡೇವಿಡ್ ವಾರ್ನರ್ ಇಬ್ಬರೂ ಸ್ಟಾರ್ ಆರಂಭಿಕರ ವಿಕೆಟ್ ಪತನವಾಯಿತು. ಆರಂಭಿಕರಿಬ್ಬರೂ ತಲಾ ಒಂದು ರನ್ ಗಳಿಸಿ ಮರಳಿದರು. ಮೊದಲಿಗೆ, ಸಿರಾಜ್ ಪಂದ್ಯದ ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿಯೇ ಖವಾಜಾ ಅವರನ್ನು ಎಲ್​ಬಿ ಬಲೆಗೆ ಬೀಳಿಸುವುದರೊಂದಿಗೆ ವಿಕೆಟ್ ಭೇಟೆ ಆರಂಭಿಸಿದರು. ನಂತರ, ಮೂರನೇ ಓವರ್‌ನ ಆರಂಭದಲ್ಲಿ ಶಮಿ ಡೇವಿಡ್ ವಾರ್ನರ್ ವಿಕೆಟ್ ಪಡೆದರು. ವಾರ್ನರ್ ಅವರನ್ನು ಶಮಿ ಕ್ಲೀನ್ ಬೌಲ್ಡ್ ಮಾಡಿದರು.

IND vs AUS: ಜಡೇಜಾ ದಾಳಿಗೆ ತತ್ತರಿಸಿದ ಆಸೀಸ್; 177 ರನ್​ಗಳಿಗೆ ಕಾಂಗರೂಗಳು ಆಲೌಟ್!

ಲಬುಶೇನ್ ಅತ್ಯಧಿಕ ಸ್ಕೋರ್

ಆರಂಭಿಕ 2 ವಿಕೆಟ್​ಗಳ ಪತನದ ನಂತರ ಜೊತೆಯಾದ ಸ್ಟೀವ್ ಸ್ಮಿತ್ ಹಾಗೂ ಲಬುಶೇನ್ ಉಸಿರುಗಟ್ಟಿದ ಆಸೀಸ್​ ಇನ್ನಿಂಗ್ಸ್​ಗೆ ಮರುಜನ್ಮ ನೀಡಿದರು. ಈ ಇಬ್ಬರು ಮೂರನೇ ವಿಕೆಟ್​ಗೆ 82 ರನ್​ಗಳ ಜೊತೆಯಾಟ ಹಂಚಿಕೊಂಡರು. ಈ ಹಂತದಲ್ಲಿ 49 ರನ್ ಗಳಿಸಿ ಆಡುತ್ತಿದ್ದ ಲಬುಶೇನ್​ಗೆ ಜಡೇಜಾ ಪೆವಿಲಿಯನ್ ಹಾದಿ ತೋರುವ ಮೂಲಕ ಈ ಜೊತೆಯಾಟಕ್ಕೆ ಅಂತ್ಯ ಹಾಡಿದರು. ನಂತರ ಬಂದ ಮ್ಯಾಥ್ಯೂ ರೆನ್‌ಶಾ ಕೂಡ ಒಂದೇ ಎಸೆತಕ್ಕೆ ಎಲ್​ಬಿ ಬಲೆಗೆ ಬಿದ್ದು ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡರು.

ಈ ನಡುವೆ ಆರಂಭದಲ್ಲೇ ಕೊಹ್ಲಿ ನೀಡಿದ ಜೀವದಾನವನ್ನು ಬಳಸಿಕೊಂಡು ಬಿಗ್ ಇನ್ನಿಂಗ್ಸ್ ಆಡುವ ಸೂಚನೆ ನೀಡಿದ್ದ ಸ್ಮಿತ್​ ಕೂಡ ವೈಯಕ್ತಿಕ 37 ರನ್​ಗಳಿಸಿದ್ದಾಗ ಜಡೇಜಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಬಳಿಕ ಪೀಟರ್ ಹ್ಯಾಂಡ್ಸ್ಕಾಂಬ್ (31 ರನ್) ಹಾಗೂ ಅಲೆಕ್ಸ್ ಕ್ಯಾರಿ (36 ರನ್)ಕೊಂಚ ಹೊತ್ತು ಪ್ರತಿರೋಧ ತೋರಿದ್ದು ಬಿಟ್ಟರೆ, ಆಸೀಸ್ ಪಾಳಯದ ಮತ್ತ್ಯಾವ ಬ್ಯಾಟರ್​ಗೂ ಭಾರತದ ದಾಳಿ ಮುಂದೆ ನೆಲೆಯೂರಲಾಗಲಿಲ್ಲ.

ಜಡೇಜಾಗೆ 5 ವಿಕೆಟ್

ಬರೋಬ್ಬರಿ 6 ತಿಂಗಳುಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗುವ ಈ ಪಿಚ್​ನಲ್ಲಿ ತನ್ನ ಹಳೆಯ ಶೈಲಿಯಲ್ಲಿಯೇ ಬೌಲಿಂಗ್ ಮಾಡಿದ ಜಡೇಜಾ ಆಸೀಸ್ ಪಾಳಯದ ಪ್ರಮುಖ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅದರಲ್ಲೂ ತಂಬ್ಸ್ ಅಪ್ ಮಾಡಿ ಜಡೇಜಾರನ್ನು ಕೆರಳಿಸುವ ಕೆಲಸ ಮಾಡಿದ್ದ ಸ್ಟೀವ್ ಸ್ಮಿತ್​ರನ್ನು ನಂತರದ ಎಸೆತದಲ್ಲಿಯೇ ಕ್ಲೀನ್ ಬೌಲ್ಡ್ ಮಾಡಿದ್ದು ಮಾತ್ರ ಎಲ್ಲರನ್ನೂ ಅಚ್ಚರಿಗೊಳಿಸಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Thu, 9 February 23

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ