AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ಪೆವಿಲಿಯನ್ ಪರೇಡ್; ಭಾರತಕ್ಕೆ ಇನ್ನಿಂಗ್ಸ್ ಹಾಗೂ 132 ರನ್​ಗಳ ಭಾರಿ ಜಯ

IND vs AUS: ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 132 ರನ್​ಗಳ ಬೃಹತ್ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಪಡೆ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

IND vs AUS: ಆಸೀಸ್ ಪೆವಿಲಿಯನ್ ಪರೇಡ್; ಭಾರತಕ್ಕೆ ಇನ್ನಿಂಗ್ಸ್ ಹಾಗೂ 132 ರನ್​ಗಳ ಭಾರಿ ಜಯ
ಭಾರತಕ್ಕೆ ಜಯ
TV9 Web
| Updated By: ಪೃಥ್ವಿಶಂಕರ|

Updated on:Feb 11, 2023 | 2:48 PM

Share

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Nagpur Test) ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 132 ರನ್​ಗಳ ಬೃಹತ್ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ರೋಹಿತ್ ಪಡೆ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಗ್ಪುರ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 223 ರನ್‌ಗಳ ಮುನ್ನಡೆ ಸಾಧಿಸಿದ ಭಾರತ, ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಅನ್ನು ಕೇವಲ 91 ರನ್‌ಗಳಿಗೆ ಅಂತ್ಯಗೊಳಿಸಿತು. ಟೀಂ ಇಂಡಿಯಾ ಪರ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಮಿಂಚಿದ ರವೀಂದ್ರ ಜಡೇಜಾ (Ravindra Jadeja) 70 ರನ್ ಹಾಗೂ 7 ವಿಕೆಟ್ ಪಡೆದು ಮಿಂಚಿದರೆ, ಅಕ್ಷರ್ ಪಟೇಲ್ (Axar Patel) 84 ರನ್ ಹಾಗೂ 1 ವಿಕೆಟ್ ಪಡೆದರು. ಹಾಗೆಯೇ ಈ ಇಬ್ಬರಲ್ಲದೆ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡಿದ ರವಿಚಂದ್ರನ್ ಅಶ್ವಿನ್ (Ravichandran Ashwin) ಎರಡೂ ಇನ್ನಿಂಗ್ಸ್​ಗಳಿಂದ ಒಟ್ಟು 8 ವಿಕೆಟ್ ಪಡೆದು ಗೆಲುವಿನ ಹೀರೋ ಎನಿಸಿಕೊಂಡರು.

ಮೊದಲ ಇನ್ನಿಂಗ್ಸ್​ನಲ್ಲಿ ಜಡೇಜಾ ಹೀರೋ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ತಂಡ ಭಾರತದ ಸ್ಪಿನ್ ದಾಳಿಗೆ ಸಿಲುಕಿ ಕೇವಲ 177 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಜಡೇಜಾ ಸ್ಪಿನ್ ದಾಳಿಗೆ ನಲುಗಿದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್​ಮನ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಬರೋಬ್ಬರಿ 5 ತಿಂಗಳ ನಂತರ ಮೈದಾನಕ್ಕೆ ಮರಳಿದ ಜಡೇಜಾ 5 ವಿಕೆಟ್ ಪಡೆದು ಮಿಂಚಿದರು. ಹಾಗೆಯೇ ಜಡೇಜಾ ಜೊತೆ ಕೈ ಜೋಡಿಸಿದ ಅಶ್ವಿನ್ ಕೂಡ 3 ಬಲಿ ಪಡೆದಿದ್ದರು.

ಇದಾದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ರೋಹಿತ್ ಶರ್ಮಾ ಅವರ ಶತಕ (120 ರನ್) ಹಾಗೂ ರವೀಂದ್ರ ಜಡೇಜಾ (70 ರನ್) ಮತ್ತು ಅಕ್ಷರ್ ಪಟೇಲ್ (84 ರನ್) ಅವರ ಅರ್ಧಶತಕದ ನೆರವಿನಿಂದ 400 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದ ಟಾಡ್ ಮರ್ಫಿ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು.

IND vs AUS: ಟೆಸ್ಟ್ ಕ್ರಿಕೆಟ್​ನಲ್ಲಿ ಕಿಂಗ್ ಕೊಹ್ಲಿಗಿಂತ ಮೊಹಮ್ಮದ್ ಶಮಿಯೇ ಬೆಸ್ಟ್..!

ಎರಡನೇ ಇನ್ನಿಂಗ್ಸ್​ನಲ್ಲಿ ತತ್ತರಿಸಿದ ಆಸೀಸ್

ಮೊದಲ ಇನಿಂಗ್ಸ್‌ನಂತೆ ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸ್ ಕೂಡ ಉತ್ತಮ ಆರಂಭ ಪಡೆಯಲಿಲ್ಲ. ಓಪನರ್ ಉಸ್ಮಾನ್ ಖವಾಜಾ ಮತ್ತೊಮ್ಮೆ ನಿರಾಸೆ ಮೂಡಿಸಿದಲ್ಲದೆ, ಸತತ ಎರಡನೇ ಇನ್ನಿಂಗ್ಸ್‌ನಲ್ಲಿ ಸಿಂಗಲ್ ಡಿಜಿಟ್‌ಗೆ ವಿಕೆಟ್ ಒಪ್ಪಿಸಿದರು. ಅಶ್ವಿನ್, ಖವಾಜಾ ವಿಕೆಟ್ ಪಡೆದರು. ಇದಾದ ನಂತರ ಬಂದ ಜಡೇಜಾ, ವಿಶ್ವದ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೆನ್​ರನ್ನು ಕೇವಲ 17 ರನ್​ಗಳಿಗೆ ಪೆವಿಲಿಯನ್​ಗಟ್ಟಿದರು. ಇದಾದ ಬಳಿಕ ಆಸ್ಟ್ರೇಲಿಯದ ಬ್ಯಾಟಿಂಗ್ ಬೆನ್ನೆಲುಬು ಮುರಿಯಲ್ಲಾರಂಭಿಸಿದ ಅಶ್ವಿನ್ ಒಂದರ ಹಿಂದೆ ಒಂದರಂತೆ ವಿಕೆಟ್ ಕೀಳಲಾರಂಭಿಸಿದರು. ಇತ್ತ ಅಶ್ವಿನ್ ಸ್ಪಿನ್ ಜಾದು ಅರಿಯುವಲ್ಲಿ ವಿಫಲರಾದ ಆಸೀಸ್ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ತಂಡದ ಪರ ಸ್ಟೀವ್ ಸ್ಮಿತ್ (25) ಕೊಂಚ ಪ್ರತಿರೋಧ ತೋರಿದ್ದು ಬಿಟ್ಟರೆ, ಮತ್ತ್ಯಾವ ಆಟಗಾರನಿಗೂ ಭಾರತದ ಸ್ಪಿನ್ ದಾಳಿ ಮುಂದೆ ನೆಲಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಇದರಿಂದ ಕಾಂಗರೂ ತಂಡ ಕೇವಲ 91 ರನ್‌ಗಳಿಗೆ ಆಲೌಟ್ ಆಯಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ಮಿಂಚಿದ ಅಶ್ವಿನ್

ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಅಶ್ವಿನ್ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಇದು ತವರು ನೆಲದಲ್ಲಿ ಅಶ್ವಿನ್ ಅವರ 25ನೇ ಬಾರಿಗೆ 5 ವಿಕೆಟ್ ಸಾಧನೆಯಾಗಿದ್ದು, ವೃತ್ತಿಜೀವನದಲ್ಲಿ ಇದು ಅಶ್ವಿನ್ ಅವರ 31 ನೇ ಬಾರಿಯ 5 ವಿಕೆಟ್ ಸಾಧನೆಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Sat, 11 February 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್