AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ- ಅಶ್ವಿನ್ ದಾಳಿಗೆ ಆಸೀಸ್ ತತ್ತರ; ಭಾರತಕ್ಕೆ 115 ರನ್ ಗೆಲುವಿನ ಗುರಿ

IND vs AUS: ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಾಳಿ ಮುಂದೆ ಮಂಕಾದ ಆಸೀಸ್ ಪಡೆ ಕೇವಲ 113 ರನ್​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿದೆ.

IND vs AUS: ಜಡೇಜಾ- ಅಶ್ವಿನ್ ದಾಳಿಗೆ ಆಸೀಸ್ ತತ್ತರ; ಭಾರತಕ್ಕೆ 115 ರನ್ ಗೆಲುವಿನ ಗುರಿ
ಟೀಂ ಇಂಡಿಯಾ
TV9 Web
| Edited By: |

Updated on:Feb 19, 2023 | 11:44 AM

Share

ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ದಾಳಿ ಮುಂದೆ ಮಂಕಾದ ಆಸೀಸ್ ಪಡೆ ಕೇವಲ 113 ರನ್​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿದೆ. ಈ ಮೂಲಕ ಭಾರತಕ್ಕೆ 115 ರನ್​ಗಳ ಗೆಲುವಿನ ಗುರಿ ನೀಡಿದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದ ಫಲಿತಾಂಶ ಮೂರನೇ ದಿನದಲ್ಲೇ ಹೊರಬೀಳುವ ಸಾಧ್ಯತೆಗಳಿವೆ. ನಿನ್ನೆಯ ಎರಡನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯದ ಇನ್ನಿಂಗ್ಸ್ ಸುಸ್ಥಿತಿಯಲ್ಲಿರುವಂತೆ ತೋರುತ್ತಿತ್ತು. ದಿನದಾಟದಂತ್ಯಕ್ಕೆ ಆಸೀಸ್ ಪಡೆ ಕೇವಲ 1 ವಿಕೆಟ್‌ ಕಳೆದುಕೊಂಡು 61 ಕಲೆ ಹಾಕಿತ್ತು. ಹೀಗಾಗಿ ಎರಡನೇ ಇನ್ನಿಂಗ್ಸ್​ನಲ್ಲಿ ಆಸೀಸ್ ಪಡೆ ಬೃಹತ್ ಟಾರ್ಗೆಟ್ ಸೆಟ್ ಮಾಡುವ ಸೂಚನೆ ನೀಡಿತ್ತು. ಆದರೆ ಮೂರನೇ ದಿನದಾಟ ಆರಂಭವಾದ ಬಳಿಕ ಲೆಕ್ಕಾಚಾರವೆಲ್ಲ ಬುಡಮೇಲಾಯಿತು. ರವೀಂದ್ರ ಜಡೇಜಾ (Ravindra Jadeja) ಹಾಗೂ ಆರ್​ ಅಶ್ವಿನ್ (R Ashwin) ಸ್ಪಿನ್ ದಾಳಿಗೆ ನಲುಗಿದ ಆಸೀಸ್ ಪಡೆ 3ನೇ ದಿನದಾಟದ ಮೊದಲ ಸೆಷನ್​ನಲ್ಲಿ ಉಳಿದ 9 ವಿಕೆಟ್ ಕಳೆದುಕೊಂಡು ಕೇವಲ 52 ರನ್ ಕಲೆಹಾಕಿತು.

7  ವಿಕೆಟ್ ಪಡೆದ ಜಡೇಜಾ

ಟೆಸ್ಟ್‌ನ ಮೂರನೇ ದಿನವಾದ ಭಾನುವಾರ ಆಸ್ಟ್ರೇಲಿಯಾಕ್ಕೆ ನಿರಾಶಾದಾಯಕ ಆರಂಭ ಸಿಕ್ಕಿತು. ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಸ್ಪಿನ್‌ಗೆ ಆಸೀಸ್ ತಂಡದ ಯಾವ ಬ್ಯಾಟ್ಸ್‌ಮನ್‌ ಬಳಿಯೂ ಉತ್ತರ ಇರಲಿಲ್ಲ. ಈ ಪಂದ್ಯದಲ್ಲಿ ತಮ್ಮ ವೃತ್ತಿ ಜೀವನದ ಅತ್ಯುತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಒಂದೇ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್ ಪಡೆದರು. ಈ ಇನ್ನಿಂಗ್ಸ್​ನಲ್ಲಿ 12.1 ಓವರ್‌ ಬೌಲ್ ಮಾಡಿದ ಜಡೇಜಾ 42 ರನ್ ನೀಡಿ ಏಳು ವಿಕೆಟ್ ಪಡೆದರೆ, ಅಶ್ವಿನ್ 16 ಓವರ್‌ಗಳಲ್ಲಿ 59 ರನ್ ನೀಡಿ ಮೂರು ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 43 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಜೊತೆಗೆ ಮಾರ್ನಸ್ ಲ್ಯಾಬುಸ್ಚಾಗ್ನೆ (35) ಅವರೊಂದಿಗೆ ಎರಡನೇ ವಿಕೆಟ್‌ಗೆ 42 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ಮೂರನೇ ದಿನದ ಮೊದಲ ಓವರ್‌ನಲ್ಲಿ ಈ ಜೊತೆಯಾಟವನ್ನು ಮುರಿಯುವುದರೊಂದಿಗೆ ಭಾರತೀಯ ಬೌಲರ್‌ಗಳು ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿದರು. ಬಳಿಕ ಆಸ್ಟ್ರೇಲಿಯಾ ತಂಡ ತನ್ನ ಕೊನೆಯ ಏಳು ವಿಕೆಟ್‌ಗಳನ್ನು ಕೇವಲ 18 ರನ್‌ಗಳ ಅಂತರದಲ್ಲಿ ಕಳೆದುಕೊಂಡಿತು.

NZ vs ENG: ಆಂಗ್ಲರ ಹೊಡಿಬಡಿ ಆಟಕ್ಕೆ ಸುಸ್ತಾದ ಕಿವೀಸ್; ಮೊದಲ ಟೆಸ್ಟ್​ನಲ್ಲಿ 267 ರನ್​ಗಳ ಬೃಹತ್ ಸೋಲು!

ಆಸೀಸ್ ದಿನದಾರಂಭ ಕಳಪೆ

ಮೂರನೇ ದಿನ 61 ರನ್​ಗಳಿಂದ ಇನ್ನಿಂಗ್ಸ್ ಮುಂದುವರೆಸಿದ ಆಸೀಸ್ ಪರ ಟ್ರಾವಿಸ್ ಹೆಡ್ ಮತ್ತು ಮಾರ್ನಸ್ ಲಬುಶೆನ್ ಕ್ರೀಸ್‌ನಲ್ಲಿದ್ದರು. ಆದರೆ ಆರ್. ಅಶ್ವಿನ್ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಟ್ರಾವಿಸ್ ಹೆಡ್ ಅವರನ್ನು ಬಲಿಪಶು ಮಾಡಿದರು. ಹೆಡ್ ವಿಕೆಟ್ ನಂತರ ಸ್ಮಿತ್ ಮತ್ತು ಲಬುಶೆನ್ ಜೊತೆಯಾಟವನ್ನು ರೂಪಿಸಲು ಪ್ರಯತ್ನಿಸಿದರಾದರೂ ಯಶಸ್ವಿಯಾಗಲಿಲ್ಲ. ಅಶ್ವಿನ್ ಸ್ಮಿತ್ ಅವರನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಮೂರನೇ ಹೊಡೆತ ನೀಡಿದರು.

ಜಡೇಜಾ ಸ್ಪಿನ್​ಗೆ ಸೈಲೆಂಟ್ ಆದ ಆಸೀಸ್

ಸ್ಮಿತ್ ಔಟಾದ ನಂತರ, ಲಬುಶೆನ್ ಕೂಡ ಹೆಚ್ಚು ಹೊತ್ತು ನಿಲ್ಲದೆ 35 ರನ್ ಗಳಿಸಿ ಔಟಾದರು. ಇಲ್ಲಿಂದ ಆಸ್ಟ್ರೇಲಿಯಾದ ಬ್ಯಾಟಿಂಗ್ ಪತನವಾಗಲು ಆರಂಭವಾಯಿತು. ಮುಂದಿನ ಮೂರು ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಆಸೀಸ್ ತಂಡ ಕಳೆದುಕೊಂಡಿತು. ಮ್ಯಾಟ್ ರೆನ್ಶಾ (2) ಅಶ್ವಿನ್​ಗೆ ಬಲಿಯಾದರೆ, ಪೀಟರ್ ಹ್ಯಾಂಡ್ಸ್‌ಕಾಂಬ್ (0), ಕಮಿನ್ಸ್ ಅವರನ್ನು ಒಂದೇ ಓವರ್‌ನಲ್ಲಿ ಜಡೇಜಾ ಪೆವಿಲಿಯನ್​ಗಟ್ಟಿದರು. ಬಳಿಕ ಅಲೆಕ್ಸ್ ಕ್ಯಾರಿ ಕೂಡ ಯಾವುದೇ ಪ್ರಭಾವ ಬೀರಲಾಗದೆ ಜಡೇಜಾಗೆ ಬಲಿಯಾದರು. ಅಂತಿಮವಾಗಿ ಲಿಯಾನ್ (8 ರನ್) ಮತ್ತು ಕುನ್ಹೆಮನ್ ಖಾತೆ ತೆರೆಯದೆ ಔಟಾಗುವುದರೊಂದಿಗೆ ಆಸೀಸ್ ಇನ್ನಿಂಗ್ಸ್​ಗೆ ತೆರೆ ಎಳೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Sun, 19 February 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ