AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸ್ಟಾರ್ಕ್ ಮಿಂಚಿನ ದಾಳಿ; ನಿತೀಶ್ ಹೋರಾಟ, 180 ರನ್​ಗಳಿಗೆ ಭಾರತ ಆಲೌಟ್

IND vs AUS: ಅಡಿಲೇಡ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 180 ರನ್‌ಗಳಿಗೆ ಆಲೌಟ್ ಆಗಿದೆ. ಆಸೀಸ್ ಪರ ವೇಗಿ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೇಲುಬು ಮುರಿದರು. ಟೀಂ ಇಂಡಿಯಾ ಪರ ನಿತೀಶ್ ರೆಡ್ಡಿ ಗರಿಷ್ಠ 42 ರನ್‌ಗಳ ಇನ್ನಿಂಗ್ಸ್ ಆಡಿದರು.

IND vs AUS: ಸ್ಟಾರ್ಕ್ ಮಿಂಚಿನ ದಾಳಿ; ನಿತೀಶ್ ಹೋರಾಟ, 180 ರನ್​ಗಳಿಗೆ ಭಾರತ ಆಲೌಟ್
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on:Dec 06, 2024 | 2:33 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಟೆಸ್ಟ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 180 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಾಂಗರೂ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಮೊದಲ ದಿನದಾಟದ ಎರಡನೇ ಸೆಷನ್​ನಲ್ಲೇ ತನ್ನ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿತು. ಟೀಂ ಇಂಡಿಯಾ ಪರ ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್​ಗಳ ಇನ್ನಿಂಗ್ಸ್ ಆಡಿದರು. ಟಾಪ್ ಆರ್ಡರ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಕ್ರಮವಾಗಿ 37 ಮತ್ತು 31 ರನ್​ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.

ಭಾರತಕ್ಕೆ ಆರಂಭಿಕ ಆಘಾತ

ಅಡಿಲೇಡ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ನಾಯಕನ ಈ ನಿರ್ಧಾರ ತಪ್ಪು ಎಂಬುದು ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಸಾಭೀತಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅಡಿಲೇಡ್‌ನಲ್ಲಿ ಮೊದಲ ಎಸೆತದಲ್ಲೇ ಔಟಾದರು. ಆದರೆ ಆ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್​ಮನ್ ಗಿಲ್ ಜೊತೆಗೂಡಿ ಈ ಇಬ್ಬರೂ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಕೆಎಲ್ ರಾಹುಲ್ ಔಟಾದ ಬಳಿಕ ಭಾರತದ ಇನ್ನಿಂಗ್ಸ್ ತತ್ತರಿಸಿತು.

ಮಧ್ಯಮ ಕ್ರಮಾಂಕವೂ ಫೇಲ್

ವಿರಾಟ್ ಕೊಹ್ಲಿ ಬಂದ ಕೂಡಲೇ ಅತ್ಯಂತ ಕೆಟ್ಟ ಶಾಟ್ ಆಡುವ ಮೂಲಕ ವಿಕೆಟ್ ಕಳೆದುಕೊಂಡರು. ಅವರು ಮಿಚೆಲ್ ಸ್ಟಾರ್ಕ್‌ ಎಸೆತದಲ್ಲಿ ಸ್ಲಿಪ್ಸ್‌ನಲ್ಲಿ ನಿಂತಿದ್ದ ಸ್ಟೀವ್ ಸ್ಮಿತ್​ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಶುಭ್​ಮನ್ ಗಿಲ್ 31 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ನೀಡಿದರು. ಇದಾದ ಬಳಿಕ ನಾಯಕ ರೋಹಿತ್ ಶರ್ಮಾ ಕೂಡ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡವು ವಿಕೆಟ್‌ಕೀಪರ್ ರಿಷಬ್ ಪಂತ್ ಅವರಿಂದ ರನ್​ಗಳ ಭರವಸೆ ಹೊಂದಿತ್ತು. ಆದರೆ ಪಂತ್ ಕೂಡ ಕಮಿನ್ಸ್ ಅವರ ಶಾರ್ಟ್ ಬಾಲ್‌ನಲ್ಲಿ 21 ರನ್‌ಗಳಿಸಿ ಕ್ಯಾಚಿತ್ತು ಔಟಾದರು. ಇದರಿಂದ ಭಾರತ ತಂಡದ 6 ವಿಕೆಟ್‌ಗಳು 109 ರನ್‌ಗಳಿಗೆ ಪತನಗೊಂಡವು.

ನಿತೀಶ್ ಸ್ಫೋಟಕ ಬ್ಯಾಟಿಂಗ್

ಒಂದೆಡೆ ಭಾರತದ ಇತರೆ ಬ್ಯಾಟ್ಸ್​ಮನ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಆಲ್ ರೌಂಡರ್ ನಿತೀಶ್ ರೆಡ್ಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ನಿತೀಶ್ ರೆಡ್ಡಿ ತಮ್ಮ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 42 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಿತೀಶ್ ಅವರ ಈ 42 ರನ್​ಗಳ ಕಾಣಿಕೆ ಇಲ್ಲದಿದ್ದರೆ ಭಾರತ ಇನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಆಗುತ್ತಿತ್ತು. ಆಸೀಸ್ ಪರ ಮಾರಕ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಪಡೆದರು. ಇದು ಭಾರತದ ವಿರುದ್ಧ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 6 December 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ