AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸ್ಟಾರ್ಕ್ ಮಿಂಚಿನ ದಾಳಿ; ನಿತೀಶ್ ಹೋರಾಟ, 180 ರನ್​ಗಳಿಗೆ ಭಾರತ ಆಲೌಟ್

IND vs AUS: ಅಡಿಲೇಡ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 180 ರನ್‌ಗಳಿಗೆ ಆಲೌಟ್ ಆಗಿದೆ. ಆಸೀಸ್ ಪರ ವೇಗಿ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೇಲುಬು ಮುರಿದರು. ಟೀಂ ಇಂಡಿಯಾ ಪರ ನಿತೀಶ್ ರೆಡ್ಡಿ ಗರಿಷ್ಠ 42 ರನ್‌ಗಳ ಇನ್ನಿಂಗ್ಸ್ ಆಡಿದರು.

IND vs AUS: ಸ್ಟಾರ್ಕ್ ಮಿಂಚಿನ ದಾಳಿ; ನಿತೀಶ್ ಹೋರಾಟ, 180 ರನ್​ಗಳಿಗೆ ಭಾರತ ಆಲೌಟ್
ಆಸ್ಟ್ರೇಲಿಯಾ ತಂಡ
ಪೃಥ್ವಿಶಂಕರ
|

Updated on:Dec 06, 2024 | 2:33 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಟೆಸ್ಟ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 180 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಾಂಗರೂ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಮೊದಲ ದಿನದಾಟದ ಎರಡನೇ ಸೆಷನ್​ನಲ್ಲೇ ತನ್ನ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿತು. ಟೀಂ ಇಂಡಿಯಾ ಪರ ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್​ಗಳ ಇನ್ನಿಂಗ್ಸ್ ಆಡಿದರು. ಟಾಪ್ ಆರ್ಡರ್​ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಕ್ರಮವಾಗಿ 37 ಮತ್ತು 31 ರನ್​ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.

ಭಾರತಕ್ಕೆ ಆರಂಭಿಕ ಆಘಾತ

ಅಡಿಲೇಡ್‌ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ನಾಯಕನ ಈ ನಿರ್ಧಾರ ತಪ್ಪು ಎಂಬುದು ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಸಾಭೀತಾಯಿತು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಅಡಿಲೇಡ್‌ನಲ್ಲಿ ಮೊದಲ ಎಸೆತದಲ್ಲೇ ಔಟಾದರು. ಆದರೆ ಆ ಬಳಿಕ ಕೆಎಲ್ ರಾಹುಲ್ ಮತ್ತು ಶುಭ್​ಮನ್ ಗಿಲ್ ಜೊತೆಗೂಡಿ ಈ ಇಬ್ಬರೂ ಎರಡನೇ ವಿಕೆಟ್‌ಗೆ 69 ರನ್‌ಗಳ ಜೊತೆಯಾಟವನ್ನು ಮಾಡಿದರು. ಆದರೆ ಕೆಎಲ್ ರಾಹುಲ್ ಔಟಾದ ಬಳಿಕ ಭಾರತದ ಇನ್ನಿಂಗ್ಸ್ ತತ್ತರಿಸಿತು.

ಮಧ್ಯಮ ಕ್ರಮಾಂಕವೂ ಫೇಲ್

ವಿರಾಟ್ ಕೊಹ್ಲಿ ಬಂದ ಕೂಡಲೇ ಅತ್ಯಂತ ಕೆಟ್ಟ ಶಾಟ್ ಆಡುವ ಮೂಲಕ ವಿಕೆಟ್ ಕಳೆದುಕೊಂಡರು. ಅವರು ಮಿಚೆಲ್ ಸ್ಟಾರ್ಕ್‌ ಎಸೆತದಲ್ಲಿ ಸ್ಲಿಪ್ಸ್‌ನಲ್ಲಿ ನಿಂತಿದ್ದ ಸ್ಟೀವ್ ಸ್ಮಿತ್​ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಶುಭ್​ಮನ್ ಗಿಲ್ 31 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ನೀಡಿದರು. ಇದಾದ ಬಳಿಕ ನಾಯಕ ರೋಹಿತ್ ಶರ್ಮಾ ಕೂಡ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡವು ವಿಕೆಟ್‌ಕೀಪರ್ ರಿಷಬ್ ಪಂತ್ ಅವರಿಂದ ರನ್​ಗಳ ಭರವಸೆ ಹೊಂದಿತ್ತು. ಆದರೆ ಪಂತ್ ಕೂಡ ಕಮಿನ್ಸ್ ಅವರ ಶಾರ್ಟ್ ಬಾಲ್‌ನಲ್ಲಿ 21 ರನ್‌ಗಳಿಸಿ ಕ್ಯಾಚಿತ್ತು ಔಟಾದರು. ಇದರಿಂದ ಭಾರತ ತಂಡದ 6 ವಿಕೆಟ್‌ಗಳು 109 ರನ್‌ಗಳಿಗೆ ಪತನಗೊಂಡವು.

ನಿತೀಶ್ ಸ್ಫೋಟಕ ಬ್ಯಾಟಿಂಗ್

ಒಂದೆಡೆ ಭಾರತದ ಇತರೆ ಬ್ಯಾಟ್ಸ್​ಮನ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಮತ್ತೊಂದೆಡೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಆಲ್ ರೌಂಡರ್ ನಿತೀಶ್ ರೆಡ್ಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ನಿತೀಶ್ ರೆಡ್ಡಿ ತಮ್ಮ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಮತ್ತು 3 ಬೌಂಡರಿ ಸಹಿತ 42 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ನಿತೀಶ್ ಅವರ ಈ 42 ರನ್​ಗಳ ಕಾಣಿಕೆ ಇಲ್ಲದಿದ್ದರೆ ಭಾರತ ಇನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಆಗುತ್ತಿತ್ತು. ಆಸೀಸ್ ಪರ ಮಾರಕ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ ಕೇವಲ 48 ರನ್ ನೀಡಿ 6 ವಿಕೆಟ್ ಪಡೆದರು. ಇದು ಭಾರತದ ವಿರುದ್ಧ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Fri, 6 December 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?