AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ; 109 ರನ್​ಗಳಿಗೆ ಆಲೌಟ್

IND vs AUS: ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

IND vs AUS: ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿದ ಭಾರತ; 109 ರನ್​ಗಳಿಗೆ ಆಲೌಟ್
ಭಾರತ ಆಲ್​ಔಟ್
ಪೃಥ್ವಿಶಂಕರ
|

Updated on:Mar 01, 2023 | 1:13 PM

Share

ಇಂದೋರ್​ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ (India Vs Australia) ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಕೇವಲ 109 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ಟೀಂ ಇಂಡಿಯಾ ನಾಯಕನ ನಿರ್ಧಾರ ತಪ್ಪು ಎಂದು ಸಾಭೀತುಪಡಿಸಿದ ಆಸೀಸ್ ಬೌಲಿಂಗ್ ವಿಭಾಗ ರೋಹಿತ್ ಬಳಗವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಟೀಂ ಇಂಡಿಯಾ ಪರ ಉರುಳಿದ ಅಷ್ಟೂ ವಿಕೆಟ್​ಗಳನ್ನು ಆಸೀಸ್​ನ ಸ್ಪಿನ್​ ವಿಭಾಗ ಕಬಳಿಸಿದ್ದಯ ವಿಶೇಷವಾಗಿತ್ತು. ಆಸೀಸ್ ಪರ ಮ್ಯಾಥ್ಯೂ ಕುಹ್ನೆಮನ್ 5 ವಿಕೆಟ್ ಪಡೆದರೆ, ನಾಥನ್ ಲಿಯಾನ್ 3 ವಿಕೆಟ್ ಹಾಗೂ ಟಾಡ್ ಮರ್ಫಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ನೀಡಲು ಮುಂದಾದರು. ಆದರೆ 27 ರನ್​ಗಳಿಸುವುದರೊಳಗೆ ಈ ಜೋಡಿ ಬೇರ್ಪಟಿತು. ಬಿಗ್ ಶಾಟ್ ಆಡುವ ಯತ್ನದಲ್ಲಿ ನಾಯಕ ರೋಹಿತ್ ಸ್ಟಂಪ್ ಔಟ್ ಆದರು. ಬಳಿಕ ರನ್ ಖಾತೆಗೆ 7 ರನ್ ಸೇರಿಸುವುದರೊಳಗೆ ಮತ್ತೊಬ್ಬ ಆರಂಭಿಕ ಗಿಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಬಳಿಕ ಬಂದ ಚೇತೇಶ್ವರ್ ಪೂಜಾರ ಕೂಡ ಕೇವಲ 1 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!

50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್

ಇನ್ನು ಬ್ಯಾಟಿಂಗ್​ನಲ್ಲಿ ಮುಂಬಡ್ತಿ ಪಡೆದು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ರವೀಂದ್ರ ಜಡೇಜಾ ಕೂಡ ಒಂದು ಬೌಂಡರಿ ಬಾರಿಸಿದ ಬಳಿಕ ಬ್ಯಾಟ್ ಎತ್ತಿಟ್ಟರು. ಹೀಗಾಗಿ ಟೀಂ ಇಂಡಿಯಾ 50 ರನ್​ ಒಳಗಾಗಿಯೇ ಪ್ರಮುಖ 5 ವಿಕೆಟ್ ಕಳೆದುಕೊಂಡಿತು. ಜಡೇಜಾ ವಿಕೆಟ್ ಬಳಿಕ ಬಂದ ಶ್ರೇಯಸ್ ಅಯ್ಯರ್ ಕೂಡ ಖಾತೆ ತೆರೆಯದೆ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು.

ಒಂದೆಡೆ ವಿಕೆಟ್ ಉರುಳುತ್ತಿದ್ದರು ಕೊಂಚ ಪ್ರತಿರೋಧ ತೋರಿದ ವಿರಾಟ್ ಕೊಹ್ಲಿ ತಂಡದ ಪರ ಅತ್ಯಧಿಕ ರನ್ ಅಂದರೆ 22 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ಇನ್ನು ಕೆಎಸ್​ ಭರತ್ 17 ರನ್​ಗಳಿಗೆ ಸುಸ್ತಾದರೆ, ಅಶ್ವಿನ್ 3 ರನ್ ಬಾರಿಸಿದರು. ಅಂತಿಮವಾಗಿ 2 ಭರ್ಜರಿ ಸಿಕ್ಸರ್ ಹಾಗೂ 1 ಬೌಂಡರಿ ಬಾರಿಸಿ, ಸ್ಫೋಟಕ ಆಟಕ್ಕೆ ಮುಂದಾಗಿದ್ದ ಉಮೇಶ್ ಯಾದವ್ ಕೂಡ 17 ರನ್​ಗೆ ಎಲ್​ಬಿ ಬಲೆಗೆ ಬಿದ್ದರು. ಅಂತಿಮವಾಗಿ ರನ್​ಔಟ್ ಆಗುವ ಮೂಲಕ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Wed, 1 March 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ