AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ವೀಕ್ಷಕ ವಿವರಣೆ ನೀಡಲಿದ್ದಾರೆ ಮೋದಿ; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ 4ನೇ ಟೆಸ್ಟ್

IND vs AUS: ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದ್ಯ ಭಾರತ ಪ್ರವಾಸದಲ್ಲಿದ್ದು, ಗುರುವಾರ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಂದ್ಯವನ್ನು ವೀಕ್ಷಿಸಲಿದ್ದಾರೆ.

IND vs AUS: ವೀಕ್ಷಕ ವಿವರಣೆ ನೀಡಲಿದ್ದಾರೆ ಮೋದಿ; ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ 4ನೇ ಟೆಸ್ಟ್
ನರೇಂದ್ರ ಮೋದಿImage Credit source: insidesport
ಪೃಥ್ವಿಶಂಕರ
|

Updated on:Mar 06, 2023 | 6:05 PM

Share

ಭಾರತ ಮತ್ತು ಆಸ್ಟ್ರೇಲಿಯಾ (India and Australia) ನಡುವಿನ ಬಾರ್ಡರ್ ಗವಾಸ್ಕರ್ (Border-Gavaskar Trophy) ಸರಣಿಯ ಕೊನೆಯ ಪಂದ್ಯವು ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಭಾರತ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಕೊನೆಯ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ಕೊನೆಯ ಟೆಸ್ಟ್ ಪಂದ್ಯ ಗೆದ್ದಿರುವ ಆಸ್ಟ್ರೇಲಿಯಾವು 4ನೇ ಟೆಸ್ಟ್ ಗೆದ್ದು, ಸರಣಿಯನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಲಿದೆ. ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯ ಕುತೂಹಲ ಮೂಡಿಸಿದೆ. ಅಲ್ಲದೆ ಈ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನಿಗಳು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉಪಸ್ಥಿತರಿರಲಿದ್ದಾರೆ. ಟಿವಿ9 ಹಿಂದಿ ವಾಹಿನಿಯ ವರದಿ ಪ್ರಕಾರ, 4ನೇ ಟೆಸ್ಟ್ ಪಂದ್ಯದಲ್ಲಿ ಪ್ರಧಾನಿ ಮೋದಿಯವರು (PM Narendra Modi) ಪಂದ್ಯದ ವೀಕ್ಷಕ ವಿವರಣೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸದ್ಯ ಭಾರತ ಪ್ರವಾಸದಲ್ಲಿದ್ದು, ಗುರುವಾರ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಂದ್ಯವನ್ನು ವೀಕ್ಷಿಸಲಿದ್ದಾರೆ. ಅಲ್ಲದೆ ಇನ್ನೊಂದು ವಿಶೇಷತೆ ಎಂದರೆ, ನರೇಂದ್ರ ಮೋದಿಯವರು ತಮ್ಮ ಹೆಸರಿನ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಆಗಮಿಸುತ್ತಿರುವುದು ಇದೇ ಮೊದಲು.

IND vs AUS: ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಅಶ್ವಿನ್..!

ವೀಕ್ಷಕ ವಿವರಣೆ ನೀಡುತ್ತಾರಾ ಪ್ರಧಾನಿ ಮೋದಿ?

ಪ್ರಧಾನಿ ಮೋದಿ ನಾಲ್ಕು ದಿನಗಳ ಕಾಲ ತವರು ರಾಜ್ಯದಲ್ಲಿಯೇ ಇರಲಿದ್ದಾರೆ. ಮಾರ್ಚ್ 8 ರಂದು ಬೆಳಗ್ಗೆ 8 ಗಂಟೆಗೆ ಗುಜರಾತ್ ತಲುಪಲಿದ್ದು, ಅಲ್ಲಿಂದ ಆಸ್ಟ್ರೇಲಿಯಾ ಪ್ರಧಾನಿ ಜೊತೆ ಸ್ಟೇಡಿಯಂ ತಲುಪಲಿದ್ದಾರೆ. ಟಾಸ್ ವೇಳೆ ಮೋದಿ ಕ್ರೀಡಾಂಗಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೇ ಸಮಯದಲ್ಲಿ, ಪಂದ್ಯದ ವೇಳೆ ಮೋದಿ ಕಾಮೆಂಟರಿ ಮಾಡುವುದನ್ನು ಸಹ ನೋಡಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಆಸೀಸ್​ಗೆ​ ಸರಣಿ ಡ್ರಾ ಮಾಡಿಕೊಳ್ಳುವ ಹಂಬಲ

ನಾಲ್ಕು ಪಂದ್ಯಗಳ ಸರಣಿಯ ಮೊದಲೆರಡು ಟೆಸ್ಟ್‌ಗಳನ್ನು ಮೂರು ದಿನಗಳ ಅಂತರದಲ್ಲಿ ಸೋತ ನಂತರ ಬಾರ್ಡರ್-ಗವಾಸ್ಕರ್ ಸರಣಿಯನ್ನು ಕಳೆದುಕೊಂಡಿದ್ದ ಆಸ್ಟ್ರೇಲಿಯಾ ತಂಡ ಇಂದೋರ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪುನರಾಗಮನ ಮಾಡಿದೆ. ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವವಹಿಸಿಕೊಂಡಿದ್ದ ಸ್ಟೀವ್ ಸ್ಮಿತ್‌, ತಂಡಕ್ಕೆ ಸರಣಿಯಲ್ಲಿ ಮೊದಲ ಜಯ ತಂದುಕೊಟ್ಟಿದ್ದಾರೆ. ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಟೀಂ ಇಂಡಿಯಾವನ್ನು ಒಂಬತ್ತು ವಿಕೆಟ್‌ಗಳಿಂದ ಮಣಿಸಿದ ಕಾಂಗರೂಗಳು ಈಗ ಮುಂದಿನ ಪಂದ್ಯದಲ್ಲೂ ಅದೇ ರೀತಿಯ ಪ್ರದರ್ಶನ ನೀಡಲು ಎದುರು ನೋಡಿತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Mon, 6 March 23

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ