AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಶ್ರೇಯಸ್ ಅಯ್ಯರ್​ಗೆ ಇಂಜುರಿ; ಅಂತಿಮ ಟೆಸ್ಟ್​ನಲ್ಲಿ ಬ್ಯಾಟಿಂಗ್ ಮಾಡುವುದು ಅನುಮಾನ?

Shreyas Iyer: ಬೆನ್ನು ನೋವಿನ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಅಹಮದಾಬಾದ್ ಟೆಸ್ಟ್‌ನಲ್ಲಿ ಇನ್ನೂ ಬ್ಯಾಟಿಂಗ್‌ಗೆ ಬಂದಿಲ್ಲ. ಸಾಮಾನ್ಯವಾಗಿ ಅವರು 4 ನೇ ಕ್ರಮಾಂಕದಲ್ಲಿ ಮಾತ್ರ ಬ್ಯಾಟ್ ಮಾಡುತ್ತಾರೆ.

IND vs AUS: ಶ್ರೇಯಸ್ ಅಯ್ಯರ್​ಗೆ ಇಂಜುರಿ; ಅಂತಿಮ ಟೆಸ್ಟ್​ನಲ್ಲಿ ಬ್ಯಾಟಿಂಗ್ ಮಾಡುವುದು ಅನುಮಾನ?
ಶ್ರೇಯಸ್ ಅಯ್ಯರ್​
ಪೃಥ್ವಿಶಂಕರ
|

Updated on:Mar 12, 2023 | 10:55 AM

Share

ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಉಭಯ ತಂಡಗಳು ಗೆಲುವಿಗಾಗಿ ಹೋರಾಡುತ್ತಿವೆ. ಆಸ್ಟ್ರೇಲಿಯಾ ನೀಡಿದ ಬಿಗ್ ಟಾರ್ಗೆಟ್ ಬೆನ್ನಟ್ಟಿರುವ ಟೀಂ ಇಂಡಿಯಾ (India Vs Australia) ಕೂಡ ಕಾಂಗರೂಗಳಿಗೆ ಸರಿಯಾಗಿ ಟಕ್ಕರ್ ಕೊಟ್ಟಿದೆ. ಆದರೆ ಈ ನಡುವೆ ಟೀಂ ಇಂಡಿಯಾ ಪಾಳದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಮಿಡಲ್ ಆರ್ಡರ್ ಬ್ಯಾಟರ್ ಶ್ರೇಯಸ್ ಅಯ್ಯರ್ (Shreyas Iyer) ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅಯ್ಯರ್ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಸ್ತುತ, ಅಯ್ಯರ್ ಅವರನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಬಿಸಿಸಿಐ (BCCI) ಕೂಡ ಮಾಹಿತಿ ಹಂಚಿಕೊಂಡಿದೆ.

ಶ್ರೇಯಸ್ ಅಯ್ಯರ್ ಅವರ ಗಾಯದ ಬಗ್ಗೆ ಮಾಹಿತಿಯನ್ನು ಬಿಸಿಸಿಐ ಹಂಚಿಕೊಂಡಿದ್ದು, ಇದರಲ್ಲಿ ಅಹಮದಾಬಾದ್ ಟೆಸ್ಟ್‌ನ ಮೂರನೇ ದಿನದಂದು ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರನ್ನು ಸ್ಕ್ಯಾನ್‌ಗೆ ಕರೆದೊಯ್ಯಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡವು ಅಯ್ಯರ್ ಗಾಯದ ಮೇಲೆ ನಿರಂತರವಾಗಿ ನಿಗಾ ಇರಿಸಿದೆ ಎಂದು ಹೇಳಿಕೊಂಡಿದೆ.

ನೋವಿನಿಂದಾಗಿ ಇನ್ನೂ ಬ್ಯಾಟಿಂಗ್​ಗೆ ಇಳಿದಿಲ್ಲ

ಬೆನ್ನು ನೋವಿನ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಅಹಮದಾಬಾದ್ ಟೆಸ್ಟ್‌ನಲ್ಲಿ ಇನ್ನೂ ಬ್ಯಾಟಿಂಗ್‌ಗೆ ಬಂದಿಲ್ಲ. ಸಾಮಾನ್ಯವಾಗಿ ಅವರು 4 ನೇ ಕ್ರಮಾಂಕದಲ್ಲಿ ಮಾತ್ರ ಬ್ಯಾಟ್ ಮಾಡುತ್ತಾರೆ. ಆದರೆ ಮೊದಲ ಇನ್ನಿಂಗ್ಸ್​ನಲ್ಲಿ ಅವರ ಸ್ಥಾನದಲ್ಲಿ ರವೀಂದ್ರ ಜಡೇಜಾ ಮೂರನೇ ದಿನ ಬ್ಯಾಟಿಂಗ್‌ಗೆ ಇಳಿದಿದ್ದರು. ನಾಲ್ಕನೇ ದಿನದಂದು ಜಡೇಜಾ ಔಟಾದಾಗಲೂ ಕೂಡ ಶ್ರೇಯಸ್​ ಬ್ಯಾಟಿಂಗ್​ ಬರಲಿಲ್ಲ. ಬದಲಿಗೆ ವಿಕೆಟ್ ಕೀಪರ್ ಕೆ. ಎಸ್. ಭರತ್ ಬ್ಯಾಟಿಂಗ್‌ಗೆ ಬಂದಿದ್ದಾರೆ. ಇದರಿಂದ ಶ್ರೇಯಸ್ ಅಯ್ಯರ್ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವುದರ ಬಗ್ಗೆ ಅನುಮಾನ ಮೂಡುತ್ತಿದೆ. ಒಂದು ವೇಳೆ ಅಯ್ಯರ್ ಬ್ಯಾಟಿಂಗ್​ಗೆ ಬರದಿದ್ದರೆ, ಭಾರತಕ್ಕೆ ಭಾರಿ ಹಿನ್ನಡೆಯುಂಟಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Sun, 12 March 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು