AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಖಚಿತ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳಿಂದ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿ ಸಮಬಲ ಸಾಧಿಸಿದ್ದರು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಎರಡೂ ತಂಡಗಳು ನಾಲ್ಕನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಖಚಿತ
Team India
ಝಾಹಿರ್ ಯೂಸುಫ್
|

Updated on: Dec 25, 2024 | 3:00 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4ನೇ ಮ್ಯಾಚ್ ಗುರುವಾರದಿಂದ (ಡಿ.26) ಶುರುವಾಗಲಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಮೂರು ಮ್ಯಾಚ್​​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾ ವೇಗಿಗಳು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮೆಲ್ಬೋರ್ನ್​ನಲ್ಲಿ ಹೆಚ್ಚುವರಿ ಸ್ಪಿನ್ ಆಲ್​ರೌಂಡರ್​ನನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಳ್ಳಬಹುದು. ಹಾಗೆಯೇ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮುಂದುವರೆಯಬಹುದು.

ಇನ್ನು ಈ ಪಂದ್ಯದಲ್ಲೂ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್​​ಮನ್ ಗಿಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಐದನೇ ಸ್ಥಾನದಲ್ಲಿ ರಿಷಭ್ ಪಂತ್ ಆಡಿದರೆ, ಆರನೇ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ….

  1. ಯಶಸ್ವಿ ಜೈಸ್ವಾಲ್
  2. ಕೆಎಲ್ ರಾಹುಲ್
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ರಿಷಭ್ ಪಂತ್
  6. ರೋಹಿತ್ ಶರ್ಮಾ
  7. ರವೀಂದ್ರ ಜಡೇಜಾ
  8. ವಾಷಿಂಗ್ಟನ್ ಸುಂದರ್
  9. ಜಸ್​ಪ್ರೀತ್ ಬುಮ್ರಾ
  10. ಆಕಾಶ್ ದೀಪ್
  11. ಮೊಹಮ್ಮದ್ ಸಿರಾಜ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್.

ನಿರ್ಣಾಯಕ ಪಂದ್ಯ:

ಮೆಲ್ಬೋರ್ನ್ ಟೆಸ್ಟ್ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 11 ಆಟಗಾರರು ನಿವೃತ್ತಿ..!

ಇದೀಗ ನಾಲ್ಕನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ಸೋಲನ್ನು ತಪ್ಪಿಸಿಕೊಳ್ಳಲಿದೆ. ಅಂದರೆ ನಾಲ್ಕನೇ ಪಂದ್ಯದಲ್ಲಿ ಗೆದ್ದ ತಂಡ ಐದನೇ ಪಂದ್ಯದ ಮೂಲಕ ಸರಣಿ ಜಯಿಸಬಹುದು ಅಥವಾ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಬಹುದು. ಹೀಗಾಗಿ ಉಭಯ ತಂಡಗಳ ಪಾಲಿಗೆ ಮೆಲ್ಬೋರ್ನ್ ಟೆಸ್ಟ್ ಮ್ಯಾಚ್ ನಿರ್ಣಾಯಕವಾಗಿ ಮಾರ್ಪಟ್ಟಿದೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ