AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 3ನೇ ದಿನದಾಟದ ಅಂತ್ಯಕ್ಕೆ 3 ದಾಖಲೆ ಬರೆದ ಕಿಂಗ್ ಕೊಹ್ಲಿ

India vs Australia 4th Test: 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಕೂಡ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ರವೀಂದ್ರ ಜಡೇಜಾ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಕೊಹ್ಲಿ ತಮ್ಮ 29ನೇ ಅರ್ಧಶತಕ ಪೂರೈಸಿದರು.

Virat Kohli: 3ನೇ ದಿನದಾಟದ ಅಂತ್ಯಕ್ಕೆ 3 ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli
TV9 Web
| Edited By: |

Updated on: Mar 11, 2023 | 6:10 PM

Share

India vs Australia 4th Test: ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ (Virat Kohli) ಬ್ಯಾಟ್​ನಿಂದ ಅರ್ಧಶತಕ ಮೂಡಿಬಂದಿದೆ. ಇದರೊಂದಿಗೆ 424 ದಿನಗಳ ಕಾಯುವಿಕೆ ಕೂಡ ಅಂತ್ಯಗೊಂಡಿದೆ. ಅಂದರೆ ಕಳೆದ ವರ್ಷ ಜನವರಿ ತಿಂಗಳಲ್ಲಿ ಸೌತ್ ಆಫ್ರಿಕಾ ವಿರುದ್ಧ ಕಿಂಗ್ ಕೊಹ್ಲಿ ಕೊನೆಯ ಬಾರಿ ಟೆಸ್ಟ್​ನಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಒಂದು ವರ್ಷಗಳ ಬಳಿಕ ಮತ್ತೊಮ್ಮೆ ಟೆಸ್ಟ್​ ಕ್ರಿಕೆಟ್​ನಲ್ಲಿ ಕೊಹ್ಲಿ ಬ್ಯಾಟ್ ಮೇಲೆತ್ತಿದ್ದಾರೆ.  ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಪೇರಿಸಿದ 480 ರನ್​ಗಳಿಗೆ ಉತ್ತರವಾಗಿ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅತ್ಯುತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 74 ರನ್​ ಕಲೆಹಾಕಿದ ಬಳಿಕ ಹಿಟ್​ಮ್ಯಾನ್ (35) ಔಟಾದರು. ಆ ಬಳಿಕ ಬಂದ ಚೇತೇಶ್ವರ ಪೂಜಾರಾ 42 ರನ್​ ಬಾರಿಸಿ ನಿರ್ಗಮಿಸಿದರು. ಇದರ ನಡುವೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಶುಭ್​ಮನ್ ಗಿಲ್ ಟೆಸ್ಟ್​ ಕ್ರಿಕೆಟ್​ನಲ್ಲಿ ತಮ್ಮ 2ನೇ ಶತಕ ಪೂರೈಸಿದರು. ಅಲ್ಲದೆ 235 ಎಸೆತಗಳಲ್ಲಿ 128 ರನ್ ಬಾರಿಸಿ ನಾಥನ್ ಲಿಯಾನ್​ಗೆ ವಿಕೆಟ್ ಒಪ್ಪಿಸಿದರು.

ಇತ್ತ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಕೂಡ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ರವೀಂದ್ರ ಜಡೇಜಾ ಜೊತೆಗೂಡಿ ಇನಿಂಗ್ಸ್ ಕಟ್ಟಿದ ಕೊಹ್ಲಿ ತಮ್ಮ 29ನೇ ಅರ್ಧಶತಕ ಪೂರೈಸಿದರು. ವಿಶೇಷ ಎಂದರೆ ಈ ಹಾಫ್ ಸೆಂಚುರಿಯೊಂದಿಗೆ ತವರಿನಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 4 ಸಾವಿರ ರನ್ ಬಾರಿಸಿದ ವಿಶೇಷ ಮೈಲುಗಲ್ಲನ್ನು ಕೂಡ ದಾಟಿದರು.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ಕೇವಲ 4 ಆಟಗಾರರು ಮಾತ್ರ. ಸಚಿನ್ ತೆಂಡೂಲ್ಕರ್ (7216), ರಾಹುಲ್ ದ್ರಾವಿಡ್ (5598), ಸುನಿಲ್ ಗವಾಸ್ಕರ್ (5067) ಹಾಗೂ ವೀರೇಂದ್ರ ಸೆಹ್ವಾಗ್ (4656) ಮಾತ್ರ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದಲ್ಲೇ ನಾಲ್ಕು ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಇದೀಗ ಈ ಪಟ್ಟಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು ಅರ್ಧಶತಕದ ಬಳಿಕ ಬ್ಯಾಟಿಂಗ್ ಮುಂದುವರೆಸಿರುವ ವಿರಾಟ್ ಕೊಹ್ಲಿ 3ನೇ ದಿನದಾಟದ ಅಂತ್ಯಕ್ಕೆ 59 ರನ್​ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಕೊಹ್ಲಿಗೆ ಸಾಥ್ ನೀಡಿರುವ ರವೀಂದ್ರ ಜಡೇಜಾ 16 ರನ್​ಗಳಿಸಿ ಕ್ರೀಸ್​ನಲ್ಲಿದ್ದಾರೆ.

3ನೇ ದಿನದಾಟದ ಅಂತ್ಯಕ್ಕೆ ಸ್ಕೋರ್:

  • ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​- 480/10
  • ಭಾರತ ಮೊದಲ ಇನಿಂಗ್ಸ್​- 289/3

ವಿರಾಟ್ ಕೊಹ್ಲಿ 3 ವಿಶೇಷ ದಾಖಲೆ:

ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೂರು ವಿಶೇಷ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳು ಯಾವುದೆಂದರೆ….

  1.  50ನೇ ಟೆಸ್ಟ್ ಪಂದ್ಯ: ಭಾರತದಲ್ಲಿ 50 ಟೆಸ್ಟ್ ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಕಿಂಗ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ.
  2.  300 ಕ್ಯಾಚ್: ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಕ್ಯಾಚ್​ಗಳನ್ನು ಹಿಡಿದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
  3.  4 ಸಾವಿರ ರನ್: ಭಾರತದ ಪರ ತವರಿನಲ್ಲಿ 4 ಸಾವಿರ ಟೆಸ್ಟ್​ ರನ್​ಗಳಿಸಿದ 5ನೇ ಬ್ಯಾಟರ್​ ಆಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ (ನಾಯಕ) ಪೀಟರ್ ಹ್ಯಾಂಡ್ಸ್​ಕಾಂಬ್ , ಕ್ಯಾಮರೂನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ಮ್ಯಾಥ್ಯೂ ಕುಹ್ನೆಮನ್ , ಟಾಡ್ ಮರ್ಫಿ , ನಾಥನ್ ಲಿಯಾನ್

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಶಮಿ.

Follow Us
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ